ಬೆಂಗಳೂರು : ಚಂದ್ರಯಾನ-2 ಲ್ಯಾಂಡರ್ ವಿಕ್ರಮ್ ಚಂದ್ರನನ್ನು ಸ್ಪರ್ಶಿಸುವ ಐತಿಹಾಸಿಕ ಕ್ಷಣವನ್ನ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಯಲಹಂಕ ವಾಯುನೆಲೆಗೆ ಆಗಮಿಸಿದ ಪ್ರಧಾನಿ ಮೋದಿಯನ್ನ ಸಿಎಂ ಯಡಿಯೂರಪ್ಪ, ರಾಜ್ಯಪಾಲರಾದ ವಜುಭಾಯ್ ವಾಲಾ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ ಸೇರಿದಂತೆ ಹಲವು ಬಿಜೆಪಿ ಮುಖಂಡರು ಸ್ವಾಗತಿಸಿದ್ರು.
ಯಲಹಂಕ ವಾಯುನೆಲೆಯಿಂದ ನೇರವಾಗಿ ಇಸ್ರೋ ಅತಿಥಿಗೃಹಕ್ಕೆ ಆಗಮಿಸಿದ್ರು. ಏರ್ಪೋರ್ಟ್ನ ಎರಡೂ ಮಾರ್ಗಗಳನ್ನ ಬಂದ್ ಮಾಡಿ, ಝಿರೋ ಟ್ರಾಫಿಕ್ನಲ್ಲಿ ಪ್ರಧಾನಿ ಮೋದಿ ಇಸ್ರೋಗೆ ಆಗಮಿಸಿದ್ರು.
ರಾತ್ರಿಯಿಡಿ ಇಸ್ರೋ ಕೇಂದ್ರದಲ್ಲಿ ಚಂದ್ರಯಾನ-2 ಸಾಧನೆಯನ್ನ ಪ್ರಧಾನಿ ಮೋದಿ ವೀಕ್ಷಣೆ ಮಾಡಲಿದ್ದಾರೆ. ಪ್ರಧಾನಿ ಜೊತೆ ಹಲವು ವಿಜ್ಞಾನಿಗಳು, ದೇಶದ ವಿವಿಧೆಡೆಯಿಂದ ಬಂದಿರೋ 70 ಶಾಲಾ ಮಕ್ಕಳು ಕೂಡ ಇರಲಿದ್ದಾರೆ . ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿಯಲಿದ್ದು, ಅಧಿಕೃತವಾಗಿ ಚಂದ್ರ ಅಧ್ಯಯನ ಶುರು ಮಾಡಲಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?