ಬೆಂಗಳೂರು/ಚಿಕ್ಕಮಗಳೂರು : ಮುಖ್ಯಮಂತ್ರಿ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸಮಸ್ಯೆಗಳನ್ನ ಸೃಷ್ಟಿಸೋ ಹೆಡ್ ಆಫೀಸ್ ಆಗಿದೆ. ಬೇಡ ಬೇಡ ಎಂದರೂ, ಮೂವರು ಡಿಸಿಎಂಗಳನ್ನ ಆಯ್ಕೆ ಮಾಡಿ, ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇತ್ತ, ಕೆಲವರಿಗೆ ಸಚಿವ ಸ್ಥಾನ ಸಿಗದೇ ಕೆಂಡಾಮಂಡಲವಾಗಿದ್ರೆ, ಹಿರಿಯ ನಾಯಕರಿಗೆ ಸೂಕ್ತ ಖಾತೆ ಸಿಗದೇ ರಾಜೀನಾಮೆ ಹಾದಿ ಹಿಡಿದಿದ್ದಾರೆ.
ಮಂತ್ರಿ ಸ್ಥಾನಕ್ಕೆ ಸಿ.ಟಿ. ರವಿ ರಾಜೀನಾಮೆ..?
ಬಿಜೆಪಿಯಲ್ಲಿ ಚಾರ್ಮ್ ಇರೋ ನಾಯಕರ ಪಟ್ಟಿಯಲ್ಲಿ ಸಿ.ಟಿ. ರವಿ ಹೆಸರು ಇದ್ದೇ ಇರುತ್ತೆ. ಆದ್ರೆ, ಸಿ.ಟಿ. ರವಿಗೆ ಪ್ರವಾಸೋದ್ಯಮ ಇಲಾಖೆ ನೀಡಿರೋದು ಬೇಸರಕ್ಕೆ ಕಾರಣವಾಗಿದೆ. ಅಲ್ಲದೆ, ಮೊದಲ ಬಾರಿಗೆ ಮಂತ್ರಿಯಾಗ್ತಿರೋ ಡಾ.ಅಶ್ವತ್ಥ ನಾರಾಯಣ ಅವರನ್ನ ಡಿಸಿಎಂ ಮಾಡಿರೋದು, ರವಿ ಸಿಟ್ಟಿಗೆ ಕಾರಣ. ಹೀಗಾಗಿ, ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಆಪ್ತರ ಬಳಿ ನೋವು ತೋಡಿಕೊಂಡಿದ್ದಾರೆ. ಯಾವುದೇ ಕ್ಷಣದಲ್ಲೂ ರವಿ ರಾಜೀನಾಮೆ ನೀಡಿದ್ರೂ ಅಚ್ಚರಿ ಇಲ್ಲ ಎನ್ನಲಾಗ್ತಿದೆ.
ಈಗಾಗ್ಲೇ ಸರ್ಕಾರಿ ವಾಹನವನ್ನ ಸಿ.ಟಿ. ರವಿ ವಾಪಸ್ ಮಾಡಿದ್ದಾರೆ. ಇಂದು ಚಿಕ್ಕಮಗಳೂರಿನಲ್ಲಿ ಯಡಿಯೂರಪ್ಪ ಪ್ರವಾಸ ಇದ್ದು, ಈ ಕಾರ್ಯಕ್ರಮದಿಂದ ರವಿ ದೂರ ಇರುವ ಸಾಧ್ಯತೆ ಇದೆ. ಈ ಮೂಲಕ ಅಸಮಾಧಾನ ಹೊರಹಾಕಲು ರವಿ ನಿರ್ಧರಿಸಿದ್ದಾರೆ.
ಆದ್ರೆ, ರವಿ ಅಸಮಾಧಾನದ ಕುರಿತು ಸುದ್ದಿ ಆಗ್ತಿದ್ದಂತೆ ಟ್ವಿಟ್ಟರ್ನಲ್ಲಿ ಪ್ರತಿಕ್ರಿಯಿಸಿರೋ ರವಿ, ನಾನು ಸಾಯುವವರೆಗೆ ಬಿಜೆಪಿಯಲ್ಲೇ ಇರುತ್ತೇನೆ. ಅಧಿಕಾರ, ಹುದ್ದೆ ಅಡ್ಡ ಬರಲ್ಲ. ಇದ್ದರೂ ಬಿಜೆಪಿ, ಸತ್ತರೂ ಬಿಜೆಪಿ ಎಂದು ಟ್ವೀಟ್ ಮಾಡಿದ್ದಾರೆ.
ಈ ಮಧ್ಯೆ, ಚಿಕ್ಕಮಗಳೂರಿ ವಿಧಾನಸಭಾ ಕ್ಷೇತ್ರ ಬಿಜೆಪಿ ಕಾರ್ಯಕರ್ತರು ಕೂಡ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಯಡಿಯೂರಪ್ಪ ಚಿಕ್ಕಮಗಳೂರು ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಲು ರವಿ ಬೆಂಬಲಿಗರು ನಿರ್ಧರಿಸಿದ್ದಾರೆ. ಅಲ್ಲದೆ, ಬೆಳಗ್ಗೆ 10 ಗಂಟೆಗೆ ಸಭೆ ನಡೆಸಿ, ಪದಾಧಿಕಾರಿಗಳ ಸ್ಥಾನಕ್ಕೆ ರಾಜೀನಾಮೆ ನೀಡೋ ಸಾಧ್ಯತೆ ಇದೆ. ಈ ಮೂಲಕ ರಾಜ್ಯ ಹಾಗೂ ರಾಷ್ಟ್ರೀಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಲಿದ್ದಾರೆ.
ಈಗಾಗಲೇ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿದ್ರೆ, ಬಿಜೆಪಿಗೆ ಇದು ನುಂಗಲಾರದ ಬಿಸಿ ತುಪ್ಪ ಆಗಲಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?