Featured
ಆಗಸ್ಟ್ 19ಕ್ಕೆ ಸಂಪುಟ ವಿಸ್ತರಣೆ ಗ್ಯಾರೆಂಟಿ : ಯಾರಿಗೆ ಸಿಗುತ್ತೆ ಮಂತ್ರಿಗಿರಿ ಭಾಗ್ಯ..?

ಬೆಂಗಳೂರು/ನವದೆಹಲಿ : ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 20 ದಿನಗಳೇ ಆಯ್ತು. ಆದ್ರೆ, ಇವರೆಗೆ ಮಂತ್ರಿಗಳು ಯಾರು ಅನ್ನೋದು ಮಾತ್ರ ಗೊತ್ತಾಗಿಲ್ಲ. ಎಲ್ಲರೂ ಕೂಡ ಸಚಿವ ಸಂಪುಟ ಸಭೆ ಯಾವಾಗ ಅನ್ನೋದನ್ನ ಕೇಳ್ತಿದ್ರೂ, ಬಿಜೆಪಿ ಮಾತ್ರ ಸುಮ್ಮನಿದೆ. ಇದೇ ವಿಚಾರವಾಗಿ ಸಿಎಂ ಯಡಿಯೂರಪ್ಪ ಕೊನೆಗೂ ದೆಹಲಿಗೆ ಹೋಗಿದ್ದಾರೆ.
ದೆಹಲಿಯಲ್ಲಿ ಯಡಿಯೂರಪ್ಪ..!
ಆಗಸ್ಟ್ 15ರ ಸ್ವಾತಂತ್ರೋತ್ಸವ ಮುಗಿಸಿ, ಸಿಎಂ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಗೃಹ ಸಚಿವ ಅಮಿತ್ ಶಾ, ಯಡಿಯೂರಪ್ಪಗೆ ಸಮಯ ನೀಡಿದ್ದು, ಸಂಪುಟ ವಿಸ್ತರಣೆ ಚರ್ಚೆ ನಡೆಯಲಿದೆ. ಬಹುತೇಕ ಇವತ್ತೇ ಸಚಿವ ಸಂಪುಟದಲ್ಲಿ ಯಾರು ಇರ್ತಾರೆ ಅನ್ನೋದು ನಿರ್ಧಾರವಾಗಲಿದೆ.
ಆಗಸ್ಟ್ 19ಕ್ಕೆ ಸಂಪುಟ ವಿಸ್ತರಣೆ
ಎಲ್ಲವೂ ಅಂದುಕೊಂಡಂತೆ ಆಗಿದ್ದೇ ಆದಲ್ಲಿ, ಆಗಸ್ಟ್ 19 ಅಂದ್ರೆ, ಸೋಮವಾರ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಒಟ್ಟು ಎರಡು ಹಂತದಲ್ಲಿ ಸಂಪುಟ ವಿಸ್ತರಣೆ ಆಗಲಿದೆ. ಮೊದಲ ಹಂತದಲ್ಲಿ 17 ರಿಂದ 18 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ ಬಿಜೆಪಿ ನಾಯಕರಿಗೆ ಮಾತ್ರ ಅವಕಾಶ ಕೊಟ್ಟು, ಎರಡನೇ ಹಂತದಲ್ಲಿ ಅನರ್ಹ ಶಾಸಕರಿಗೆ ಸಂಪುಟದಲ್ಲಿ ಅವಕಾಶ ನೀಡ್ತಾರೆ.
ಯಾರಿಗೆಲ್ಲಾ ಮಂತ್ರಿಗಿರಿ..?
ಜಗದೀಶ್ ಶೆಟ್ಟರ್, ಆರ್.ಅಶೋಕ್, ಶ್ರೀರಾಮುಲು, ಗೋವಿಂದ ಕಾರಜೋಳ, ಜೆ.ಸಿ, ಮಾದಸ್ವಾಮಿ, ಕೆ.ಎಸ್. ಈಶ್ವರಪ್ಪ, ಡಾ.ಅಶ್ವತ್ಥನಾರಾಯಣ, ಬಾಲಚಂದ್ರ ಜಾರಕಿಹೊಳಿ, ಎಂ.ಪಿ. ರೇಣುಕಾಚಾರ್ಯ, ವಿ.ಸೋಮಣ್ಣ, ಕೆ.ಜಿ.ಬೋಪಯ್ಯ, ಕೋಟಾ ಶ್ರೀನಿವಾಸ ಪೂಜಾರಿ ಹೆಸರು ಕೇಳಿ ಬರ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?