Connect with us

Featured

ಕನ್ನಡಿಗರಾಗಿ ಹುಟ್ಟಿರೋದೇ ತಪ್ಪಾ..? ಕನ್ನಡಿಗರು ಎಲ್ಲವನ್ನೂ ಸಹಿಸಿಕೊಳ್ಳಬೇಕಾ..? ಪ್ರತಾಪ್​ ಸಿಂಹ, ತೇಜಸ್ವಿ ಸೂರ್ಯ ಮನವಿಗೆ ಬೆಲೆ ಇಲ್ವಾ..?

ನವದೆಹಲಿ/ಬೆಂಗಳೂರು : ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ರಾಜ್ಯದಲ್ಲೂ ಬಿಜೆಪಿ ಸರ್ಕಾರವಿದೆ. ಎರಡೂ ಕಡೆ ಒಂದೇ ಸರ್ಕಾರ ಇದ್ರೆ, ಪ್ರಯೋಜನಕ್ಕಿಂತ ಅವಮಾನ, ಅಪಮಾನ, ಅನ್ಯಾಯವೇ ಹೆಚ್ಚು ಆಗುತ್ತಾ ಅನ್ನೋ ಅನುಮಾನ ಕಾಡ್ತಿದೆ. ಯಾಕಂದ್ರೆ, ಕೇಂದ್ರ ಬಿಜೆಪಿ ಸರ್ಕಾರ ಮಾಡ್ತಿರೋ ಮಲತಾಯಿ ಧೋರಣೆ. ಇದು ಮಲತಾಯಿ ಧೋರಣೆ ಅಂತ ಗೊತ್ತಿದ್ರೂ, ಬಾಯಿಮುಚ್ಚಿ ಕುಳಿತಿರೋ ರಾಜ್ಯ ಬಿಜೆಪಿ ಸರ್ಕಾರ ಹಾಗೂ ರಾಜ್ಯದ 25 ಬಿಜೆಪಿ ಸಂಸದರು.

ಸ್ವತಃ ಹಣಕಾಸು ಸಚಿವೆಯಾಗಿರೋ ನಿರ್ಮಲಾ ಸೀತಾರಾಮನ್​ ಸಂಸತ್​ನಲ್ಲಿ ಘೋಷಣೆ ಮಾಡಿದ್ರು. ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್​ ಸೇರಿದಂತೆ ಹಲವು ಪರೀಕ್ಷೆಗಳು ಇರುತ್ತವೆ ಎಂದು. ಆದ್ರೆ, ಯಾವುದೋ ಒಂದೆರಡು ಹುದ್ದೆಗಳಿಗೆ ಮಾತ್ರ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ, ಉಳಿದ ಎಲ್ಲಾ ಪರೀಕ್ಷೆಗಳನ್ನ ಹಿಂದಿ ಅಥವಾ ಇಂಗ್ಲೀಷ್​ ನಲ್ಲೇ ಬರೆಯಬೇಕಂತೆ. ಅದೂ ಕೂಡ, ಕನ್ನಡಿಗರ ಪ್ರತಿಭಟನೆ, ವಿರೋಧ ವ್ಯಕ್ತವಾದ ಮೇಲೆ ಒಂದೆರಡು ಪರೀಕ್ಷೆಗಳನ್ನ ಕನ್ನಡದಲ್ಲಿ ಬರೆಯೋಕೆ ಅವಕಾಶ ನೀಡಿದ್ದಾರೆ.

ಕನ್ನಡ ಪರ ಸಂಘಟನೆಗಳು ಪ್ರತಿಭಟನೆ, ಅಭಿಯಾನ ಮಾಡುತ್ತಲೇ ಇವೆ. ಪ್ರತಿಪಕ್ಷ ನಾಯಕರಾದ ಕುಮಾರಸ್ವಾಮಿ, ಸಿದ್ದರಾಮಯ್ಯ ಟ್ವೀಟ್ ಕೂಡ ಮಾಡಿದ್ದಾರೆ. ಆದ್ರೆ, ಪಾಪ ನಮ್ಮ ರಾಷ್ಟ್ರೀಯ ಪಕ್ಷ ಬಿಜೆಪಿ ನಾಯಕರು, ಸಂಸದರು, ಸಚಿವರು ಯಾರು ಕೂಡ ಕನ್ನಡಿಗರ ಆಗ್ತಿರೋ ಅನ್ಯಾಯದ ಬಗ್ಗೆ ತುಟಿ ಬಿಚ್ಚುತ್ತಿಲ್ಲ.

ಈ ಹಿಂದೆ ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ್​ ಸಿಂಹ, ರಾಜ್ಯಸಭಾ ಸದಸ್ಯ ಚಂದ್ರಶೇಖರ್​ ಸೇರಿದಂತೆ ಹಲವು ಸಂಸದರು ಪ್ರಮಾಣಿಕ ಪ್ರಯತ್ನ ಮಾಡಿದ್ರು. ಅದರ ಫಲವಾಗಿಯೇ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡೋದಾಗಿ ಮಾನ್ಯ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದ್ರು. ಆದ್ರೆ, ಅದ್ಯಾವುದು ಈಗ ಈಡೇರಿಲ್ಲ. ನಮ್ಮ ಸಂಸದರ ಮಾತಿಗೆ, ಮನವಿಗೆ ಬೆಲೆಯೇ ಇಲ್ವಾ ಅನ್ನೋ ಅನುಮಾನ ಶುರುವಾಗಿದೆ. ಇದು ಸಂಸದರಿಗೆ ಮಾಡಿದ ಅವಮಾನ. ಎಲ್ಲಕ್ಕಿಂತ ಹೆಚ್ಚಾಗಿ ಕನ್ನಡಿಗರಿಗೆ ಮಾಡಿದ ಮೋಸ, ಅವಮಾನ ಅಂದ್ರೆ ತಪ್ಪಲ್ಲ.

ನಾವು ಕನ್ನಡಿಗರು ವಿಶಾಲ ಮನೋಭಾವದವರು ಎಲ್ಲವನ್ನೂ ಸಹಿಸಿಕೊಂಡು ಇರಬೇಕು ಅಷ್ಟೇ ಅಲ್ವಾ..?

Advertisement
ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ