ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಹಾಗೂ ವಿಚಾರಣೆ ಕಾನೂನಿನ ಚೌಕಟ್ಟಿನಲ್ಲಿ ಬರುತ್ತೆ. ಆದ್ರೆ, ಕಾಂಗ್ರೆಸಿಗರು ಕಾನೂನು, ಸಂವಿಧಾನಕ್ಕೆ ಗೌರವ ಕೊಡದೇ ಪ್ರತಿಭಟನೆ ಮಾಡ್ತಿರೋದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತ್ನಾಡಿದ ಕಟೀಲ್, ಪ್ರತಿಭಟನೆ ನಡೆಸಿ ಸಂವಿಧಾನಕ್ಕೆ ಅಪಚಾರ ಮಾಡುವುದು ನಿಮ್ಮ ಸಂಸ್ಕೃತಿಯೇ ಎಂದು ಕಾಂಗ್ರೆಸಿಗರನ್ನ ಪ್ರಶ್ನೆ ಮಾಡಿದ್ರು.
ಮಾಜಿ ಸಚಿವ ಡಿಕೆಶಿ ಬಂಧನ ವಿಚಾರವಾಗಿ ಈಗಾಗಲೇ ಹೇಳಿಕೆ ನೀಡಿದಂತೆ, ನಮ್ಮ ದೇಶದಲ್ಲಿ ಐಟಿ, ಸಿಬಿಐ ದಾಳಿಗಳು ನಡೆಯುತ್ತಿರೋದು ಇದೇ ಮೊದಲಲ್ಲ. ಹತ್ತಾರು ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿಗಳ ವಿರುದ್ಧವೂ ಕೂಡ ದಾಳಿ ನಡೆದಿದೆ. ಅವರೆಲ್ಲರೂ ಕಾನೂನು ಹೋರಾಟ ಮಾಡಿ ಹೊರಬಂದಿದ್ದಾರೆ ಎಂದರು.
2017ರಲ್ಲಿ ಐಟಿ ದಾಳಿಯಾಗಿದೆ. ಎರಡು ವರ್ಷ ತನಿಖೆ ನಡೆಸಿ, ಇಡಿ ಈಗ ನ್ಯಾಯಾಲಯ ಪ್ರಕ್ರಿಯೆ ಮಾಡಿದೆ. ಇದರಲ್ಲಿ ರಾಜಕೀಯ ಇಲ್ಲ. ಕಾನೂನು ಹೋರಾಟ ಮಾಡಿ ಹೊರಬರಲಿ. ಅದು ಬಿಟ್ಟು, ಕಾನೂನನ್ನ ಅಗೌರವದಿಂದ ಕಾಣುವುದು, ಬೆಂಕಿ ಹಚ್ಚುವುದು, ಪ್ರತಿಭಟನೆ ಮಾಡುವುದು, ಕಲ್ಲು ತೂರುವುದು ಪದ್ಧತಿಯಲ್ಲ ಎಂದು ಕಾಂಗ್ರೆಸಿಗರ ವಿರುದ್ಧ ನಳೀನ್ ಕುಮಾರ್ ಕಟೀಲ್ ಗರಂ ಆಗಿ ವಾಗ್ದಾಳಿ ನಡೆಸಿದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?