Connect with us

Featured

ಕೆಂಪೇಗೌಡನ ಮಗ ನಾನು, ಹೆದರಿ ಓಡಲ್ಲ..! ಷಡ್ಯಂತ್ರದ ಸಮನ್ಸ್‌ಗೆ ಉತ್ತರಿಸುತ್ತೇನೆ : ಡಿಕೆಶಿ

ಬೆಂಗಳೂರು: ಕಾಂಗ್ರೆಸ್‌ ಮುಖಂಡ ಡಿಕೆ ಶಿವಕುಮಾರ್‌ ಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್‌ ಹಿನ್ನೆಲೆ ಸುದ್ದಿಗೋಷ್ಟಿ ನಡೆಸಿ ಮಾಧ್ಯಮಗಳಿಗೆ ತಮ್ಮ ಮೇಲಿನ ಆರೋಪ ಹಾಗೂ ಷಡ್ಯಂತ್ರದ ಬಗ್ಗೆ ವಿವರಿಸಿದರು.

ಮಾಧ್ಯಮಗಳನ್ನ ಕುರಿತು: ನಿಮಗೆಲ್ಲಾ ಅಭಿನಂದನೆಗಳು, ನೀವುಗಳೇ ನಿಮ್ಮ ರೀತಿಯಲ್ಲಿ ಕಲ್ಪನೆ ಮಾಡಿಕೊಂಡು ವಿವಿಧ ರೀತಿಯಲ್ಲಿ ನನ್ನ ಬಗ್ಗೆ ವ್ಯಾಖ್ಯಾನ ಮಾಡಿದ್ದೀರಿ, ಇದು ಮಾಧ್ಯಮದವರಾದ ನಿಮ್ಮಗಳ ಹಕ್ಕು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಮಾಮೂಲು ನಾನು ಅದರ ಬಗ್ಗೆ ಮಾತನಾಡುವುದಿಲ್ಲ, ನಾನೊಬ್ಬ ಕಾಂಗ್ರೆಸ್‌ ಕಾರ್ಯಕರ್ತನಾಗಿ, ನಾಯಕನಾಗಿ, ಪಕ್ಷ ಕೊಟ್ಟ ಜವಾಬ್ದಾರಿಯನ್ನ ಪರಿಣಾಮಕಾರಿಯಾಗಿ ಮಾಡಿಕೊಂಡು ಬಂದಿದ್ದೇನೆ. ಗುಜರಾತ್‌ ಶಾಸಕರು, ಮಹಾರಾಷ್ಟ್ರ ಹಾಗೂ ನನ್ನ ರಾಜ್ಯದ ಶಾಸಕರನ್ನ ರಕ್ಷಣೆ ಮಾಡುವ ಜವಾಬ್ದಾರಿ ಕೊಟ್ಟಾಗ ತಪ್ಪದೇ ಮಾಡಿ ಮುಗಿಸಿದ್ದೇನೆ. ವಿರೋಧಗಳೇನೇ ಇರಲಿ ನನ್ನ ಕೆಲಸವನ್ನ ನಲವತ್ತು ವರ್ಷದಿಂದ ಮಾಡಿಕೊಂಡು ಬಂದಿದ್ದೇನೆ.

ನನ್ನ ಮೇಲೆ ಸಾಂವಿಧಾನಿಕ ಸಂಸ್ಥೆಗಳನ್ನೇಲ್ಲಾ ಛೂ ಬಿಟ್ಟರು, ಫ್ಯಾಮಿಲಿಯನ್ನ ಟಾರ್ಗೆಟ್‌ ಮಾಡಿದರು. ನಾನು ಕಾನೂನು ಕಾಯ್ದೆಗಳಿಗೆ ಬೆಲೆ ನೀಡುವ ವ್ಯಕ್ತಿ, ನಾನು ದಾಖಲೆಗಳನ್ನೂ ಸಮಂಜಸವಾಗಿ ನೀಡಿದ್ದೇನೆ, ಅಗತ್ಯ ದಾಖಲೆಗಳು ಬೇಕಾದರೆ ಅವುಗಳನ್ನೂ ನೀಡುತ್ತೇನೆ. ಇದೆಲ್ಲಾ ನಾನು ನನ್ನ ಕುಟುಂಬ ಸಂಪಾದಿಸಿದ ಆಸ್ತಿ, ನನ್ನ ತಾಯಿಗೆ ಇನ್ನೊಬ್ಬ ಸಂಸದ ಮಗ ಇದ್ದಾನೆ, ಆದರೆ ನನ್ನ ಕನಕಪುರ ಮನೆಯನ್ನೂ ಸೇರಿಸಿ ಬೇನಾಮಿ ಆಸ್ತಿ ಅಂತ ಈ ಇಲಾಖೆಗಳು ತೀರ್ಮಾನ ಮಾಡಿದ್ದಾರೆ. ಆರ್ಥಿಕ ಅಪರಾಧ ನ್ಯಾಯಾಲಯದ ಮುಂದೆಯೂ ಹಾಜರಾಗಿದ್ದೇನೆ, ಅಲ್ಲಿನ ವಿಚಾರಣೆಗೆ ತಡೆಯಾಜ್ಞೆ ಸಿಕ್ಕಿದೆ. ಈ ಆಸ್ತಿಯ ಪಾಲುದಾರರು ನಮ್ಮೆಲ್ಲಾ ಕುಟುಂಬದವರು ಆದರೆ ಜಾರಿ ನಿರ್ದೇಶನಾಲಯ ಮಾತ್ರ ಒಪ್ಪುತ್ತಿಲ್ಲ, ಮುಂಬೈ ಹಾಗೂ ದೆಹಲಿಯಲ್ಲಿ ನನಗೆ ಫ್ಲ್ಯಾಟ್‌ ಗಳು ಇವೆ ಆದರೆ ಆಸ್ತಿಯೆಲ್ಲಾ ಬೆಂಗಳೂರು ಜಿಲ್ಲೆಯಲ್ಲೇ ಇದೆ, ಹಣಕ್ಕೂ ಜಾರಿ ನಿರ್ದೇಶನಾಲಯಕ್ಕೂ ಯಾವುದೇ ಸಂಬಂಧವಿಲ್ಲ, ದೇಶದ ಹೊರಗಡೆ ಬೇನಾಮಿ ವ್ಯವಹಾರ ಮಾಡಿಲ್ಲ. ನಾನು ತಪ್ಪು ಮಾಡಿಲ್ಲ, ಲಂಚ ಹೊಡೆದಿಲ್ಲ, ಭ್ರಷ್ಟಾಚಾರ ಮಾಡಿಲ್ಲ. ಕಾನೂನು ಪ್ರಕಾರ ವ್ಯವಹಾರ ಮಾಡಿದ್ದೇನೆ, ಗೌರವದಿಂದ ಬದುಕಿದ್ದೇನೆ, ಯಾವುದಕ್ಕೂ ಹೆದರುವುದಿಲ್ಲ, ಕಾನೂನು ಚೌಕಟ್ಟಿನಲ್ಲಿ ಹೋರಾಡುತ್ತೇನೆ ಎಂದರು

Advertisement
Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ