Featured
ಕೊನೆಗೂ ಆರ್ಥಿಕತೆ ಸುಧಾರಣೆಗೆ ಮುಂದಾದ ಮೋದಿ ಸರ್ಕಾರ : ಬಡ್ಡಿ ದರ ಕಡಿತ, 70 ಸಾವಿರ ಕೋಟಿ ಪ್ಯಾಕೇಜ್ ಘೋಷಣೆ

ನವದೆಹಲಿ : ಕೊನೆಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎಚ್ಚೆತ್ತುಕೊಂಡತಿದೆ. ದೇಶದ ಆರ್ಥಿಕತೆ ಸುಧಾರಣೆಗೆ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿದೆ. ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬ್ಯಾಂಕ್ಗಳು ಬಡ್ಡಿ ದರ ಕಡಿತ ಮಾಡಲಿದ್ದು, ಇನ್ಮುಂದೆ ಮನೆ ಹಾಗೂ ವಾಹನ ಮೇಲಿನ ಸಾಲದ ಬಡ್ಡಿ ದರ ಮತ್ತಷ್ಟು ಕಡಿತವಾಗಲಿದೆ ಎಂದು ತಿಳಿಸಿದರು.
ಪ್ರಮುಖವಾಗಿ ದೇಶದಲ್ಲಿ ಆಟೋ ಮೊಬೈಲ್ ಕ್ಷೇತ್ರ ಗಣನೀಯವಾಗಿ ಕುಸಿತ ಕಂಡಿದ್ದು, ಅದರ ಉತ್ತೇಜನಕ್ಕೆ ಕ್ರಮಕೈಗೊಳ್ಳೋದಾಗಿ ತಿಳಿಸಿದ್ರು. ಕಾರ್ಪೊರೇಟ್ ಸಾಮಾಜಿಕ ಬದ್ಧತೆ ಉಲ್ಲಂಘನೆ ಮಾಡುವುದು ಯಾವುದೇ ರೀತಿಯಲ್ಲೂ ಅಪರಾಧವಲ್ಲ ಎಂದು ಇದೇ ವೇಳೆ ಅವರು ತಿಳಿಸಿದ್ರು.
ದೀರ್ಘಾವಧಿ ಹಾಗೂ ಅಲ್ಪಾವಧಿ ಬಂಡವಾಳ ಲಾಭದ ಮೇಲಿನ ಸುಂಕ ತೆಗೆಯುವುದು, ಸ್ಟಾರ್ಟ್ ಅಪ್ಗಳ ಮೇಲಿನ ಸುಂಕ ರದ್ದು, ತೆರಿಗೆ ಪಾವತಿ ಪ್ರಕ್ರಿಯೆಯನ್ನ ಮತ್ತಷ್ಟು ಸರಳ ಮಾಡುವುದು, ಆರ್ಥಿಕತೆ ಕುಸಿತದ ಭೀತಿಯನ್ನ ಎದುರಿಸುವುದು ಸೇರಿದಂತೆ ಹಲವು ಆರ್ಥಿಕ ಸುಧಾರಣೆಗಳನ್ನ ಘೋಷಣೆ ಮಾಡಿದ್ರು.
ಅಲ್ಲದೆ, ಬ್ಯಾಂಕ್ಗಳ ಪುನಶ್ಚೇತನಕ್ಕೆ 70 ಸಾವಿರ ಕೋಟಿ ಪ್ಯಾಕೇಜ್ಅನ್ನ ಅವರು ಘೋಷಣೆ ಮಾಡಿದ್ರು. ಕೇಂದ್ರ ಸರ್ಕಾರ ವಿದೇಶಿ ಪೋರ್ಟ್ಫೋಲಿಯೋ ಇನ್ವೆಸ್ಟ್ ಮೇಲೆ ವಿಧಿಸಿದ್ದ ಹೆಚ್ಚುವರಿ ಶುಲ್ಕವನ್ನೂ ಕೂಡ ರದ್ದು ಪಡಿಸೋದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ರು.
ಕೇಂದ್ರ ಸರ್ಕಾರದ ಈ ನಡೆಯಿಂದ ಭಾರತಕ್ಕೆ ಎದುರಾಗಿದ್ದ ಆರ್ಥಿಕ ಸಂಕಷ್ಟದ ಭೀತಿ ಕೊಂಚ ಕಡಿಮೆ ಆಗಬಹುದು ಎನ್ನಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?