ತುಮಕೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಮಾಜಿ ಸಚಿವ ಡಿಕೆ ಶಿವಕುಮಾರ್ ಮೇಲೆ ಪ್ರೀತಿ ಇಲ್ಲ ಎಂದು ಮಾಜಿ ಸಚಿವ ಎಸ್.ಆರ್. ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ತುಮಕೂರಿನಲ್ಲಿ ಮಾತ್ನಾಡಿದ ಅವರು, ಪ್ರೀತಿ ಇದ್ದಿದ್ದರೆ, ಹೆಚ್.ಡಿ. ಕುಮಾರಸ್ವಾಮಿ ಸಮುದಾಯದ ಹೋರಾಟಕ್ಕೆ ಬರ್ತಿದ್ರು ಎಂದು ವ್ಯಂಗ್ಯವಾಡಿದ್ದಾರೆ.
ಸಮುದಾಯದ ಹೋರಾಟಕ್ಕೆ ಕುಮಾರಸ್ವಾಮಿ ಬರಲೇಬೇಕು ಅಂದೇನಿಲ್ಲ. ನಮಗೆಲ್ಲಾ ಡಿಕೆಶಿ ಮೇಲೆ ಪ್ರೀತಿ ಇತ್ತು ನಾವೆಲ್ಲಾ ಹೋಗಿದ್ದೆವು. ನಮ್ಮ ಸಮುದಾಯದ ಮುಖಂಡನಿಗೆ ಅನ್ಯಾಯ ಆದಾಗ ನಾವೆಲ್ಲಾ ಪ್ರತಿಭಟನೆ ಮಾಡುವುದು ನಮ್ಮ ಕರ್ತವ್ಯ. ಕುಮಾರಸ್ವಾಮಿಗೆ ಆ ಭಾವನೆಯೇ ಇಲ್ಲ. ಆ ಭಾವನೆ ಇದ್ದಿದ್ದರೆ ಖಂಡಿತವಾಗಿಯೂ ಹೋರಾಟಕ್ಕೆ ಬರ್ತಿದ್ರು ಎಂದು ಟಾಂಗ್ ಕೊಟ್ರು. ಎಲ್ಲರಿಗೂ ಆಮಂತ್ರಣ ಕೊಟ್ಟು ಕರೆಯುವ ಕಾರ್ಯಕ್ರಮ ಅದಲ್ಲ. ಬಂದಿಲ್ಲ 25 ಸಾವಿರ ಜನಕ್ಕೂ ಆಮಂತ್ರಣ ಕೊಟ್ಟಿದ್ರಾ ಎಂದು ಪ್ರಶ್ನೆ ಮಾಡಿದ್ರು. ಒಕ್ಕಲಿಗರಲ್ಲಿ ಸ್ವಪ್ರತಿಷ್ಠೆ ಹೆಚ್ಚಾಗಿದೆ. ಒಣ ಪ್ರತಿಷ್ಠ ಬದಿಗೆ ಇಡಬೇಕು. ಇದು ಕುಮಾರಸ್ವಾಮಿ ವಿಚಾರ ಮಾತ್ರವೇ ಅಲ್ಲ ಎಂದು ಒತ್ತಾಯಿಸಿದ್ರು
ಮಗುವಿನ ವಿಚಾರಕ್ಕೆ ಚಂದನ್ ಶೆಟ್ಟಿ-ನಿವೇದಿತಾ ಗೌಡ ಡಿವೋರ್ಸ್!
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ಅವರ ಪ್ರವಾಸದ ವಿವರ ಏಪ್ರಿಲ್ 16, 2024
50 ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲ್ಲ: ಚಿಕ್ಕಬಳ್ಳಾಪುರ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್
ನಿರ್ಧರಿಸಿದೆ ದೊಡ್ಡಬಳ್ಳಾಪುರ ಮತ್ತೊಮ್ಮೆ ಮೋದಿ ಸರ್ಕಾರ
RCB ತಂಡದಲ್ಲಿ ಅಬ್ಬರಿಸುತ್ತಿದ್ದಾನೆ ಸೆಹ್ವಾಗ್ ಸೋದರಳಿಯ!
ಬಿಳಿ ಅಥವಾ ಗುಲಾಬಿ ಇವೆರಡರಲ್ಲಿ ಯಾವ ಬಣ್ಣದ ಸೀಬೆಹಣ್ಣು ಆರೋಗ್ಯಕ್ಕೆ ಬೆಸ್ಟ್!