Featured
ಡಿಕೆ ಶಿವಕುಮಾರ್ ಬಂಧಿಸಲು ತುದಿಗಾಲಲ್ಲಿ ನಿಂತಿರುವ ಜಾರಿ ನಿರ್ದೇಶನಾಲಯ..! ಬ್ರೇಕಿಂಗ್ ನ್ಯೂಸ್

ಬೆಂಗಳೂರು; ಕಾಂಗ್ರೆಸ್ನ ಪ್ರಭಾವಿ ನಾಯಕ ಹಾಗೂ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಬಂಧನ ಭೀತಿ ಎದುರಾಗಿದೆ. ೨೦೧೭ರ ದಾಖಲೆ ಇಲ್ಲದ ಹಣ ಸಿಕ್ಕ ಪ್ರಕರಣದಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಜಾರಿ ನಿರ್ದೇಶನಾಲಯದ ತನಿಖೆಗೆ ಅಸ್ತು ಎಂದಿದೆ. ಈ ಮೂಲಕ ಮೊದಲೇ ವಿಚಾರಣೆಗೆ ತುದಿಗಾಲಲ್ಲಿ ನಿಂತಿದ್ದ ಇಡಿ ( ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಡಿಕೆ ಶಿವಕುಮಾರ್ ಗೆ ವಿಚಾರಣೆಗೆ ಸಮನ್ಸ್ ನೀಡಬಹುದು ಅಥವಾ ಬಂಧಿಸಿ ವಿಚಾರಣೆಗೆ ಒಳಪಡಿಸಬಹುದಾಗಿದೆ.
ಪ್ರಕರಣದ ಹಿನ್ನೆಲೆ: ೨೦೧೭ರಲ್ಲಿ ದೆಹಲಿಯ ಡಿಕೆ ಶಿವಕುಮಾರ್ ಫ್ಲ್ಯಾಟ್ ಮೇಲೆ ದಾಳಿ ಮಾಡಿದ ಆದಾಯ ತೆರಿಗೆ ಅಧಿಕಾರಿಗಳು ದಾಖಲೆ ಇಲ್ಲದ ೮.೫೯ ಕೋಟಿ ರೂಪಾಯಿ ವಶಪಡಿಸಿಕೊಂಡಿದ್ದರು, ಆದಾಯ ತೆರಿಗೆ ಅಧಿಕಾರಿಗಳಿಗೆ ನೀಡಿದ ಮಾಹಿತಿ ಅಪೂರ್ಣವಾಗಿದೆ ಎಂದು ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ಸಲ್ಲಿಸಲಾಗಿತ್ತು. ಈ ದೂರಿನಲ್ಲಿ ಡಿಕೆ ಶಿವಕುಮಾರ್ ಕೋಟ್ಯಂತರ ರೂಪಾಯಿಗಳನ್ನ ಕಾಂಗ್ರೆಸ್ ಹೈಕಮಾಂಡ್ ಗೆ ನೀಡಿದ್ದಾರೆಂದು, ಕಪ್ಪು ಹಣವನ್ನ ಬಿಳಿಯಾಗಿಸಿದ್ದಾರೆಂದು ಆರೋಪಿಸಲಾಗಿತ್ತು. ಫೆಮಾ ಕಾಯ್ದೆಯಡಿ ವಿಚಾರಣೆಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿತ್ತು. ಇದರ ವಿರುದ್ಧ ಡಿಕೆ ಶಿವಕುಮಾರ್ ಹೈ ಕೋರ್ಟ್ ಮೆಟ್ಟಿಲೇರಿದ್ರು.
ಅರ್ಜಿ ವಜಾ ಆಗುತ್ತಿದ್ದಂತೆ ತಮ್ಮ ವಕೀಲರೊಂದಿಗೆ ಚರ್ಚಿಸುತ್ತಿರುವ ಡಿಕೆ ಶಿವಕುಮಾರ್, ಸುಪ್ರೀಂಕೋರ್ಟ್ ಮೆಟ್ಟಿಲೇರುವ ನಿರೀಕ್ಷೆ ಇದೆ. ಕೆಪಿಸಿಸಿ ಅಧ್ಯಕ್ಷರಾಗಲು ತುದಿಗಾಲಲ್ಲಿ ನಿಂತಿದ್ದ ಡಿಕೆಶಿ ಕನಸು ಭಗ್ನವಾಗುವ ಸಾಧ್ಯತೆ ಇದೆ.
You may like
ಜನರಲ್ಲಿ ದ್ವೇಷ ಮೂಡಿಸಿ ದೇಶ ಒಡೆಯುವುದೇ ಬಿಜೆಪಿ ಕೆಲಸ
ಮುಂದಿನ ದಿನಗಳಲ್ಲಿ ಎಲ್ಲಾ: ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ: ಸಿ.ಎಂ.ಸಿದ್ದರಾಮಯ್ಯ
ಡಾ. ಮಂಜುನಾಥ್ ರಾಜಕೀಯ ಪ್ರವೇಶ :ಕೂತುಹಲಕ್ಕೆ ತೆರೆ ಎಳೆದ ಹೆಚ್ಡಿಡಿ
ವಿದ್ಯಾರ್ಥಿಗಳ ಜೊತೆ ಸರ್ಕಾರ ಚೆಲ್ಲಾಟ – ಅಶೋಕ್ ಆಕ್ರೋಶ
ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ, ಕೂಗಿದ್ದರೆ ಪೊಲೀಸರು ಕ್ರಮ ತಗೋತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್