Featured
ಪ್ರವಾಹ ಸಂತ್ರಸ್ತರ ನೆರವಿಗೆ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ : ನೀವೂ ಕೈಜೋಡಿಸಿ

ಬೆಂಗಳೂರು : ಭಾರೀ ಪ್ರವಾಹ ಹಾಗೂ ಮಳೆಯಿಂದಾಗಿ ಉತ್ತರ ಕರ್ನಾಟಕದ ಐದು ಜಿಲ್ಲೆಗಳು ಅಕ್ಷರಶಃ ಮುಳುಗಡೆ ಆಗಿವೆ. ಜನರಿಗೆ ಆಸರೆ ಇಲ್ಲದಾಗಿದ್ದು, ಹೀಗಾಗಿ ಪ್ರವಾಹದ ಹೊಡೆತಕ್ಕೆ ಸಿಕ್ಕವರಿಗೆ ಆಸರೆಯಾಗಿ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.
ಪ್ರವಾಹಕ್ಕೆ ಸಂಬಂಧಿಸಿದಂತೆ ತಮ್ಮ ಟ್ವಿಟ್ಟರ್ನಲ್ಲಿ ಅಭಿಮಾನಿಗಳು ಹಾಗೂ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ನಮ್ಮ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿವೆ. ಅಲ್ಲಿರುವ ಜನರಿಗೆ ಆಸೆರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತ್ಯವಾಗಿದೆ. ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಮಾಡಬೇಕಾಗಿ ವಿನಂತಿ ಎಂದು ಮನವಿ ಮಾಡಿದ್ದಾರೆ. ನಮ್ಮ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಹಲವು ಹಳ್ಳಿಗಳು ಪ್ರವಾಹದ ಅಬ್ಬರಕ್ಕೆ ನೀರಿನಲ್ಲಿ ಮುಳುಗಿ ಹೋಗಿವೆ. ಅಲ್ಲಿರುವ ಜನರಿಗೆ ಆಸರೆಯಾಗಿ ನಿಲ್ಲುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಿರುತ್ತದೆ. ಎಲ್ಲರೂ ತಮ್ಮ ಕೈಲಾದ ಸೇವೆಯನ್ನು ಇದರ ನಿಟ್ಟಿನಲ್ಲಿ ಮಾಡಬೇಕಾಗಿ ವಿನಂತಿ.
– ನಿಮ್ಮ ದಾಸ ದರ್ಶನ್ pic.twitter.com/9v36p1XqwL— Darshan Thoogudeepa (@dasadarshan) August 7, 2019
ಉತ್ತರ ಕರ್ನಾಟಕದಲ್ಲಿ ಪ್ರವಾಹದ ರಭಸಕ್ಕೆ ತ್ತುತ್ತಾರಿಓ ಹಳ್ಳಿ ಹಳ್ಳಿಗಳ ಜನರಿಗೆ ಮೂಲಭೂತ ಸಾಮಗ್ರಿಗಳನ್ನು ತಲುಪಿಸಬೇಕು. ನಮ್ಮ ಡಿ ಬಾಸ್ ಕಂಪನಿ ಬಳಗವೂ ಕೂಡ ನಮ್ಮ ಕೈಲಾದ ಸಹಾಯ ಮಾಡಲು ಮುಂದಾಗೋಣ ಎಂದು ದರ್ಶನ್ ಅಭಿಮಾನಿಗಳು ಈಗ ಸಹಾಯ ಹಸ್ತಕ್ಕೆ ಮುಂದಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ದೂರವಾಣಿ ಸಂಖ್ಯೆಗಳನ್ನು ಕೊಟ್ಟಿದ್ದಾರೆ.
ರಾಹುಲ್ : 9986103219, ಶರತ್ : 9036197999, ಚೇತನ್ : 9620629646
ಅಗತ್ಯ ವಸ್ತುಗಳು,
ಬಟ್ಟೆಗಳು
ಬೇಳೆ, ಅಕ್ಕಿ, ದವಸ ಧಾನ್ಯಗಳು
ಬಿಸ್ಕತ್ ಮತ್ತು ಸಂರಕ್ಷಿತ ಆಹಾರ ಪದಾರ್ಥಗಳು
ಚಪ್ಪಲಿಗಳು
ರೈನ್ ಕೋರ್ಟ್ ಗಳು
ವಾಟರ್ ಬಾಟಲ್ ಗಳು
ಜನರಲ್ ಮೆಡಿಸನ್ಸ್
ಅಡುಗೆ ಎಣ್ಣೆ
ಟೂತ್ ಬ್ರಷ್ ಟೂತ್ ಪೇಸ್ಟ್, ಸಾಬೂನು
ಟೆಟ್ರಾ ಪ್ಯಾಕ್ ಹಾಲು
ರಾಹುಲ್ 9986103219
ಶರತ್ 9036197999
ಚೇತನ್ 9620629646 pic.twitter.com/e9S1koe5Sf— DBoss Hudugaru Official (@DBoss_Hudugaru_) August 7, 2019
ಏನೆಲ್ಲಾ ವಸ್ತುಗಳನ್ನ ಕಳುಹಿಸಬೇಕು ಎಂಬುದನ್ನ ಈ ಟ್ವಿಟ್ಟರ್ನಲ್ಲಿ ತಿಳಿಸಲಾಗಿದೆ. ಜೊತೆಗೆ ಹೇಗೆ ಕಳುಹಿಸ್ತಾರೆ ಅನ್ನೋದು ಇದ್ರಲ್ಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?