ಬೆಂಗಳೂರು : ಸರಿ ಸುಮಾರು 15 ದಿನಗಳ ಕಾಲ ಇಡೀ ಉತ್ತರ ಕರ್ನಾಟಕ ಪ್ರವಾಹದಿಂದ ತತ್ತರಿಸಿ ಹೋಗಿದೆ. ಬಹುತೇಕ 80 ತಾಲೂಕುಗಳು ಪ್ರವಾಹದಿಂದ ನಲುಗಿವೆ. ಸ್ವತಃ ಸಿಎಂ ಯಡಿಯೂರಪ್ಪ ಹಲವು ಜಿಲ್ಲೆಗಳ ಪ್ರವಾಸ ಮಾಡಿದ್ದು, ಸುಮಾರು 50 ಸಾವಿರ ಕೋಟಿ ನಷ್ಟದ ಅಂದಾಜು ಹಾಕಿದ್ದಾರೆ. ಆದ್ರೆ, ಈಗ ರಾಜ್ಯ ಸರ್ಕಾರ ಕೇವಲ 195 ಕೋಟಿ ಬಿಡುಗಡೆ ಮಾಡಿದೆ.
ಸದ್ಯ ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು, ಪರಿಹಾರ ಕಾರ್ಯಗಳನ್ನ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆ ಬರೆ, ಮತ್ತಿತರ ಸೌಲಭ್ಯಗಳ ಒದಗಿಸಲು ರಾಜ್ಯ ಸರ್ಕಾರ ತುರ್ತು 195 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಪ್ರತಿ ಕುಟುಂಬಕ್ಕೆ 10 ಸಾವಿರ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.
80 ತಾಲೂಕುಗಳಲ್ಲಿ ಸಂತ್ರಸ್ತರಿಗೆ ಈ ಹಣ ಬಳಕೆ ಆಗಲಿದೆ. ದಿನ ಬಳಕೆ, ಬಟ್ಟೆ ಬರೆ ಖರೀದಿಗೆ ಹಣ ಮಂಜೂರಾಗಿದ್ದು, ರಾಜ್ಯ ವಿಪತ್ತು ವಿರ್ವಹಣಾ ನಿಧಿಯಡಿಯಲ್ಲಿ ರಾಜ್ಯ ಸರ್ಕಾದ ಹೆಚ್ಚುವರಿ ಪಾಲಿನ 80 ಕೋಟಿ ಇದರಲ್ಲಿ ಸೇರಿದೆ. ಇದರ ಜೊತೆ ಪರಿಹಾರ ಕಾರ್ಯಗಳಿಗೆ ರಾಜ್ಯ ಸರ್ಕಾರವು 115 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ಕೇಂದ್ರ ಸರ್ಕಾರದಿಂದ ಇನ್ನೂ ನಯಾ ಪೈಸೆ ಬಂದಿಲ್ಲ..!
ಈ ಮಧ್ಯೆ, ಕೇಂದ್ರ ಬಿಜೆಪಿ ಸರ್ಕಾರ ಇನ್ನೂ ಕೂಡ ನಯಾ ಪೈಸೆ ಪರಿಹಾರ ಘೋಷಣೆ ಮಾಡಿಲ್ಲ. ಇಷ್ಟೆಲ್ಲಾ ಅವಾಂತರ ಸೃಷ್ಟಿಯಾದ್ರೂ, ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿಲ್ಲ. ಯಡಿಯೂರಪ್ಪ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಭೇಟಿಯಾದ್ರೂ ಈವರೆಗೆ ಯಾವುದೇ ಪ್ರಯೋಜನ ಆಗಿಲ್ಲ. ಸ್ವತಃ ಅಮಿತ್ ಶಾ ಕರ್ನಾಟಕಕ್ಕೆ ಬಂದು ಪ್ರವಾಹ ಸ್ಥಿತಿಯನ್ನ ನೋಡಿದ್ರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಹೋಗಿದ್ರು. ಇಷ್ಟಾದ್ರೂ, ಇನ್ನೂ ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡದೇ ಇರೋದು ಆಕ್ರೋಶಕ್ಕೆ ಕಾರಣವಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?