ಬೆಂಗಳೂರು : ಕಳೆದ 10 ದಿನಗಳಿಂದ ರಾಜ್ಯದಲ್ಲಿ ಉಂಟಾಗಿರೋ ಭೀಕರ ಪ್ರವಾಹಕ್ಕೆ ಈವರೆಗೆ 48 ಮಂದಿ ಮೃತಪಟ್ಟಿದ್ದು, 12 ಮಂದಿ ಕಣ್ಮರೆಯಾಗಿದ್ದಾರೆ ಎಂದು ಇಂಗ್ಲಿಷ್ ಪತ್ರಿಕೆ ವರದಿ ಮಾಡಿದೆ. ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಈ ಕುರಿತು ವರದಿ ಪ್ರಕಟ ಮಾಡಿದ್ದು, ಬೆಳಗಾವಿಯಲ್ಲಿ ಅತೀ ಹೆಚ್ಚು ಅಂದ್ರೆ, 13 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸುಮಾರು 5 ಲಕ್ಷ ಮಂದಿಯನ್ನ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಒಂದು ಸಾವಿರ 224ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನ ತೆರೆಯಲಾಗಿದೆ. ಈ ಪರಿಹಾರ ಕೇಂದ್ರಗಳಲ್ಲಿ 4 ಲಕ್ಷ ಮಂದಿ, ಆಶ್ರಯ ಪಡೆದಿದ್ದಾರೆ. ಅಲ್ಲದೆ, ಪ್ರವಾಹದಿಂದ ಒಂದು ಸಾವಿರಕ್ಕೂ ಹೆಚ್ಚು ಜಾನುವಾರುಗಳು ಪ್ರಾಣ ಕಳೆದುಕೊಂಡಿವೆ ಎನ್ನಲಾಗಿದೆ.
60 ವರ್ಷಗಳಲ್ಲೇ ಅತ್ಯಧಿಕ ಮಳೆ..!
ಮೃತರ ಸಂಖ್ಯೆ 48 ಆಗಿದ್ದು, ಮುಂದಿನ ದಿನಗಳಲ್ಲಿ ಸ್ಪಷ್ಟ ಸಂಖ್ಯೆ ಗೊತ್ತಾಗಲಿದೆ. ನಾಪತ್ತೆಯಾಗಿರೋ 12 ಮಂದಿಯಲ್ಲಿ ಯಾರೂ ಕೂಡ ಪತ್ತೆಯಾಗಿಲ್ಲ. ಸಾಕು ಪ್ರಾಣಿಗಳ ಮೃತಪಟ್ಟ ನಿಖರ ಸಂಖ್ಯೆ ಕೂಡ ಇನ್ನೂ ಸಿಕ್ಕಿಲ್ಲ. 60 ವರ್ಷಗಳಲ್ಲೇ ರಾಜ್ಯದಲ್ಲಿ ಆದ ಅತ್ಯಧಿಕ ಮಳೆ ಇದಾಗಿದೆ ಎನ್ನಲಾಗಿದೆ.
ಸದ್ಯ, ಉತ್ತರ ಭಾಗದಲ್ಲಿ ಮಳೆ ನಿಂತಿದೆ. ಮಹಾರಾಷ್ಟ್ರದಲ್ಲೂ ಮಳೆ ಕಡಿಮೆಯಾಗಿದ್ದು, ಪ್ರವಾಹ ಸ್ಥಿತಿ ಕಡಿಮೆಯಾಗೋ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ರೆ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಮಲೆನಾಡು ಪ್ರದೇಶ ಮತ್ತು ಕರಾವಳಿ ಭಾಗದಲ್ಲಿ ಮತ್ತೆ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಂಕಣ ಭಾಗ ಮತ್ತು ಗೋವಾ ಭಾಗದಲ್ಲಿ ಆಗಸ್ಟ್ 15ರ ಬಳಿಕ ಮಳೆ ಪ್ರಮಾಣ ಕಡಿಮೆ ಆಗಲಿದೆ. ಆದ್ರೆ, ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಆಗೋ ಸಾಧ್ಯತೆ ಇದೆ. ಇತ್ತ ಬೆಂಗಳೂರು ಸುತ್ತ ಮುತ್ತಾ ಮೋಡ ಕವಿದ ವಾತಾವರಣವೇ ಮುಂದುವರಿಯಲಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?