Connect with us

Featured

ಮತ್ತಷ್ಟು ದಿನ ಯಡಿಯೂರಪ್ಪ ಏಕಪಾತ್ರ ಅಭಿನಯ : ಸಂಪುಟ ವಿಸ್ತರಣೆಗೆ ನೋ ಗ್ರೀನ್​ಸಿಗ್ನಲ್​..!

ಬೆಂಗಳೂರು/ನವದೆಹಲಿ : ಈ ಮೊದಲೇ ರೈಸಿಂಗ್ ಕನ್ನಡ ವೆಬ್​ಸೈಟ್​ನಲ್ಲಿ ಹೇಳಿದಂತೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಆಗೋದಿಲ್ಲ. ದೆಹಲಿಗೆ ಹೋಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಬರಿಗೈಯಲ್ಲಿ ವಾಪಸ್​ ಆಗಿದ್ದಾರೆ. ಬಿಜೆಪಿ ರಾಷ್ಟ್ರೀಯ  ಅಧ್ಯಕ್ಷ, ಗೃಹ ಸಚಿವ ಅಮಿತ್ ಶಾ ಬ್ಯುಸಿ ಇದ್ದ ಕಾರಣ ಹಾಗೂ ಸುಷ್ಮಾ ಸ್ವರಾಜ್​ ಮೃತಪಟ್ಟ ಹಿನ್ನೆಲೆಯಲ್ಲಿ ಸಚಿವರ ಲಿಸ್ಟ್​ ಇನ್ನೂ ಫೈನಲ್​ ಆಗಿಲ್ಲ. ಇದರ ಮಧ್ಯೆ, ಉತ್ತರ ಕರ್ನಾಟಕದಲ್ಲಿ ಪ್ರವಾಹ ಹೆಚ್ಚಾಗಿರೋ ಕಾರಣ, ಯಡಿಯೂರಪ್ಪ ವಾಪಸ್​ ರಾಜ್ಯಕ್ಕೆ ಬಂದಿದ್ದಾರೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇವತ್ತು ಸಿಎಂ ಯಡಿಯೂರಪ್ಪ ಸಚಿವ ಸಂಪುಟಕ್ಕೆ ಯಾಱರು ಆಯ್ಕೆ ಆಗಿದ್ದಾರೋ ಅವರ ಹೆಸರು ತರಬೇಕಿತ್ತು. ಆದ್ರೆ, ಎಲ್ಲವೂ ಉಲ್ಟಾ ಆಗಿದೆ. ಯಡಿಯೂರಪ್ಪ ದೆಹಲಿಗೆ ಹೋಗಿ, ಸುಮ್ಮನೆ ವಾಪಸ್​ ಆಗಿದ್ದಾರೆ. ವೇಳಾಪಟ್ಟಿಯಂತೆ ಇವತ್ತು ರಾತ್ರಿ ಬೆಂಗಳೂರಿಗೆ ವಾಪಸ್​ ಆಗಬೇಕಿದ್ದ ಯಡಿಯೂರಪ್ಪ, ಮಧ್ಯಾಹ್ನವೇ ವಾಪಸ್​ ಬಂದು, ಬಳಿಕ ಬೆಳಗಾವಿ ತೆರಳಿದ್ರು.

ರಾಜ್ಯದಲ್ಲಿ ಪ್ರವಾಹ ಸ್ಥಿತಿ ಹೆಚ್ಚಾಗಿದ್ದು, ಮೊದಲು ರಕ್ಷಣಾ ಕಾರ್ಯ ಹಾಗೂ ಪರಿಸ್ಥಿತಿಯನ್ನ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ಹೀಗಾಗಿ, ಯಡಿಯೂರಪ್ಪ ತತ್​ಕ್ಷಣ ವಾಪಸ್​ ಆಗಿದ್ದಾರೆ. ಇಂದು ರಾತ್ರಿ ಬೆಳಗಾವಿಯಲ್ಲೇ ಉಳಿಯಲಿರೋ ಯಡಿಯೂರಪ್ಪ, ನಾಳೆ ಅಂದ್ರೆ ಗುರುವಾರ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಗಂಜಿ ಕೇಂದ್ರಗಳಿಗೂ ಭೇಟಿ ನೀಡಿ, ಸಂತ್ರಸ್ತರ ಅಳಲು ವಿಚಾರಿಸಲಿದ್ದಾರೆ.

ಹಾಗಿದ್ರೆ ಸಚಿವ ಸಂಪುಟ ವಿಸ್ತರಣೆ ಯಾವಾಗ..?

Advertisement

ಒಂದೆರಡು ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಕಡಿಮೆ ಆಗಬಹುದು ಎಂಬುದು ಸಿಎಂ ಯಡಿಯೂರಪ್ಪ ಲೆಕ್ಕಾಚಾರ. ಹೀಗಾಗಿ, ಎರಡು ಮೂರು ದಿನ ಸಮರೋಪಾದಿಯಲ್ಲಿ ಕೆಲಸ ಮಾಡಿ, ಬಳಿಕ ದೆಹಲಿಗೆ ಹೋಗುವ ಲೆಕ್ಕಾಚಾರ ಸಿಎಂಗಿದೆ. ಇದರ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ, ಮೂರು ದಿನ ಆದ್ಮೇಲೆ ಕೊಂಚ ಬಿಡುವು ಮಾಡಿಕೊಳ್ತಾರೆ. ಹೀಗಾಗಿ ಮತ್ತೆ ಆಗಸ್ಟ್​ 11 ಅಥವಾ 12ರಂದು ದೆಹಲಿಗೆ ಹೋಗಿ, ಸಂಪುಟ ಆಕಾಂಕ್ಷಿಗಳ ಪಟ್ಟಿ ಫೈನಲ್ ಮಾಡುವ ಪ್ಲಾನ್​ ಯಡಿಯೂರಪ್ಪ ಅವರದ್ದು.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ