Featured
ಯಡಿಯೂರಪ್ಪ ಎಲ್ಲಿದ್ದೀಯಪ್ಪಾ.? : ರೋಮ್ ದೊರೆ ನೀರೋಗೆ BSY ಹೋಲಿಸಿ JDS-ಕಾಂಗ್ರೆಸ್ ವ್ಯಂಗ..!

ಬೆಂಗಳೂರು : ಒಂದೆಡೆ ಉತ್ತರ ಕರ್ನಾಟಕ ಪ್ರವಾಹದಿಂದ ತತ್ತರಿಸಿ ಹೋಗಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಬಹುತೇಕ ತಾಲೂಕುಗಳು ಪ್ರವಾಹಕ್ಕೆ ನಲುಗಿ ಹೋಗಿವೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಧಾರವಾಡ ಜಿಲ್ಲೆಗಳ ಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಬಹುತೇಕ ಎಲ್ಲಾ ಜಿಲ್ಲೆಗಳು ಪ್ರವಾಹದಿಂದ ಕಂಗೆಟ್ಟಿವೆ. ಇತ್ತ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮಂಗಳೂರು, ಉತ್ತರ ಕನ್ನಡ ಭಾಗದಲ್ಲೂ ಮಳೆ ಅಬ್ಬರ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಇಷ್ಟೆಲ್ಲಾ ಪ್ರವಾಹ, ಭಾರೀ ಮಳೆ, ರೆಡ್ ಅಲರ್ಟ್ ಇದ್ರೂ ಸಿಎಂ ಯಡಿಯೂರಪ್ಪ ಮಾತ್ರ ಬೆಂಗಳೂರಲ್ಲಿ ಇಲ್ಲ. ಬೆಂಗಳೂರಲ್ಲೇ ಅಲ್ಲ, ರಾಜ್ಯದಲ್ಲೇ ಇಲ್ಲ. ದೆಹಲಿಗೆ ಹೋಗಿ, ಸಂಪುಟ ಸರ್ಕಸ್ ಮಾಡ್ತಿದ್ದಾರೆ ಎಂದು ಕಾಂಗ್ರೆಸ್-ಜೆಡಿಎಸ್ ಆರೋಪಿಸಿವೆ.
ಈ ಕುರಿತು ಬೆಂಗಳೂರಿನ ಜೆಡಿಎಸ್ ಸಭೆಯಲ್ಲಿ ಮಾತ್ನಾಡಿರೋ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಚುನಾವಣೆ ಸಮಯದಲ್ಲಿ ಎಲ್ಲರೂ ನಿಖಿಲ್ ಎಲ್ಲಿದ್ದೀಯಾಪ್ಪ ಎಂದು ಟ್ರೋಲ್ ಮಾಡಿದ್ರು. ಈಗ ಉತ್ತರ ಕರ್ನಾಟಕ ಜನ ಪ್ರವಾಹದಿಂದ ನಲುಗಿ ಹೋಗಿದ್ದಾರೆ. ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಎಂದು ಕೇಳ್ತಿದ್ದಾರೆ ಎಂದು ಹೆಚ್ಡಿಕೆ ಚಾಟಿ ಬೀಸಿದ್ರು.
ಇದಕ್ಕೂ ಮುನ್ನ ಟ್ವೀಟ್ ಮಾಡಿರೋ ಜೆಡಿಎಸ್ ರಾಜ್ಯ ಘಟಕ, ರೋಮ್ ಹೊತ್ತಿ ಉರಿಯುತ್ತಿರುವಾಗ, ದೊರೆ ನೀರೋ ಪಿಟೀಲು ಬಾರಿಸ್ತಿದ್ದ.. ಅದರಂತೆ, ಇಡೀ ರಾಜ್ಯ ಮುಳುಗುವ ಸ್ಥಿತಿಯಲ್ಲಿದೆ. ಸಿಎಂ ಯಡಿಯೂರಪ್ಪ ಮಾತ್ರ ದೆಹಲಿಯಲ್ಲಿ ಸಂಪುಟ ವಿಸ್ತರಣೆ ಚರ್ಚೆಗೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ನೀರೋ ದೊರೆಗೆ ಸಿಎಂ ಯಡಿಯೂರಪ್ಪ ಅವರನ್ನ ಹೋಲಿಸಿದ್ದಾರೆ.
ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ, ಹಾಗೆಯೇ ಉತ್ತರ ಕರ್ನಾಟಕ ಭಾರೀ ಮಳೆಯಿಂದ ಜರ್ಜರಿತವಾಗಿರುವಾಗ ಯಡಿಯೂರಪ್ಪನವರು ದೆಹಲಿಗೆ ಹೋಗಿ ಕುಳಿತಿದ್ದಾರೆ.ಕರ್ನಾಟಕದಲ್ಲಿ ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿಮಂಡಲವೂ ಇಲ್ಲ.ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ ಮರ್ಯಾದಾ ಪುರುಷೋತ್ತಮರೇ..— Janata Dal Secular (@JanataDal_S) August 7, 2019
ಈ ಮಧ್ಯೆ, ಕಾಂಗ್ರೆಸ್ ನಾಯಕರು ಕೂಡ ಯಡಿಯೂರಪ್ಪ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಸರ್ಕಾರ ರಚನೆಯಾಗಿ 15 ದಿನವಾದ್ರೂ, ಒಬ್ಬರೇ ಒಬ್ಬ ಸಂಪುಟ ಸದಸ್ಯರಿಲ್ಲ. ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎಂದು ಕಾಂಗ್ರೆಸ್ ನಾಯಕರು ಕಿಡಿಕಾಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಪ್ರವಾಹ ಕಾಮಗಾರಿಗಳು ನಡೆಯುತ್ತಿಲ್ಲ ಎಂದು ಆರೋಪಿಸಿರೋ ಕಾಂಗ್ರೆಸ್, ಯಡಿಯೂರಪ್ಪ ಇನ್ನೆಷ್ಟು ದಿನ ಏಕಪಾತ್ರಾಭಿನಯ ಮಾಡ್ಬೇಕು ಎಂದು ಪ್ರಶ್ನೆ ಮಾಡಿದೆ.
ಇದೆಲ್ಲದರ ಮಧ್ಯೆ, ಉತ್ತರ ಕರ್ನಾಟಕ ಜನ ಮಾತ್ರ ಭಾರೀ ಮಳೆ, ಪ್ರವಾಹಕ್ಕೆ ನಲುಗಿ ಹೋಗಿದ್ದಾರೆ. ಅಧಿಕಾರಿಗಳು ಎಷ್ಟೇ ಕಾರ್ಯಪ್ರೌವೃತ್ತಿಯಾಗಿ ಕೆಲಸ ಮಾಡಿದ್ರೂ, ನಾಯಕ ಇಲ್ಲದಿದ್ರೆ ಏನೂ ಆಗಲ್ಲ. ರಾಜ್ಯ ಬಿಜೆಪಿ ಸರ್ಕಾರ ಇನ್ನೂ ಎಷ್ಟು ದಿನ ಹೀಗೆ, ಇರುತ್ತೋ ಏನೋ ಅನ್ನೋದು ಜನರ ಪ್ರಶ್ನೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















