Featured
ವಿವಾದಿತ ಟಿಪ್ಪು ಜಯಂತಿ ರದ್ದು : ಯಡಿಯೂರಪ್ಪ ಆದೇಶ ಮಾಡಿದ್ದು ಯಾಕೆ..?

ಬೆಂಗಳೂರು : ಸಾಕಷ್ಟು ವಿವಾದ ಸೃಷ್ಟಿಸಿದ್ದ ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಬಿಜೆಪಿ ಸರ್ಕಾರ ಕೊನೆಗೂ ಬ್ರೇಕ್ ಹಾಕಿದೆ. ಇನ್ಮುಂದೆ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಆಗ್ತಿದ್ದಂತೆ ಬಿಜೆಪಿ ಶಾಸಕ, ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ಟಿಪ್ಪು ಜಯಂತಿ ರದ್ದು ಕೋರಿ ಮನವಿ ಪತ್ರ ಬರೆದಿದ್ರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮನವಿ ಮಾಡಿದ್ದ ಬೋಪಯ್ಯ, ಕೂಡಲೇ ರಾಜ್ಯದಲ್ಲಿ ಟಿಪ್ಪು ಜಯಂತಿ ನಿಷೇಧ ಮಾಡುವಂತೆ ಕೇಳಿಕೊಂಡಿದ್ದರು. ಅದರಂತೆ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಟಿಪ್ಪು ಜಯಂತಿಯನ್ನು ಅಧಿಕೃತವಾಗಿ ರದ್ದು ಮಾಡಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ನಂತರ 2016ರ ಬಳಿಕ ಪ್ರತಿವರ್ಷ ನವೆಂಬರ್ 10ರಂದು ಟಿಪ್ಪು ಜನ್ಮದಿನದಂದು, ಟಿಪ್ಪು ಜಯಂತಿಯನ್ನ ಆಚರಿಸಲಾಗ್ತಿತ್ತು. ಟಿಪ್ಪು ಜಯಂತಿಗೆ ಪರ-ವಿರೋಧ ಇತ್ತು. 2016ರಲ್ಲಿ ಟಿಪ್ಪು ಜಯಂತಿ ವೇಳೆಗೆ ಮಡಿಕೇರಿಯಲ್ಲಿ ಘರ್ಷಣೆ ಸಂಭವಿಸಿ ಇಬ್ಬರು ಮೃತಪಟ್ಟಿದ್ದರು. ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನ ಬಿಜೆಪಿ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ಟಿಪ್ಪು ಜಯಂತಿಗೆ ವಿರುದ್ಧ ಪ್ರತಿಭಟನೆಯನ್ನೂ ಮಾಡಿತ್ತು. ಈಗ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರೋದ್ರಿಂದ, ವಿವಾದಿತ ಟಿಪ್ಪು ಜಯಂತಿಯನ್ನ ರದ್ದು ಮಾಡಿದೆ.
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯ ಸರ್ಕಾರದ ಆದೇಶವನ್ನ ಬಿಜೆಪಿ ನಾಯಕರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಸ್ವಾಗತಿಸಿದ್ದಾರೆ.
Chief Minister BS Yediyurappa led Karnataka Government orders Kannada & Culture Department, to not celebrate Tipu Jayanti. The decision was taken during yesterday's cabinet meeting. (file pic) pic.twitter.com/6slPyDaq8w— ANI (@ANI) July 30, 2019
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?