Featured
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ಕುರಿತು ರಹಸ್ಯ ಸಭೆ : ಮೋದಿ ಮುಂದೇನು ಮಾಡ್ತಾರೆ..?

ವಿಶ್ವಸಂಸ್ಥೆ : ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿರೋ ಭಾರತ ಸರ್ಕಾರದ ವಿರುದ್ಧ ವಿಶ್ವಸಂಸ್ಥೆ ರಹಸ್ಯೆ ಸಭೆ ನಡೆಸಲು ಮುಂದಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಈ ಕುರಿತು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷರಿಗೆ ಪತ್ರ ಬರೆಯೋದಾಗಿ ಈ ಹಿಂದೆ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮೊದ್ ಖುರೇಶಿ ಹೇಳಿದ್ದರು.
ಈಗ ಇದೇ ವಿಚಾರವಾಗಿ ಮಾತ್ನಾಡಿರೋ ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷ ಜೋನ್ನಾ ವ್ರೋನೆಕ್ಕಾ, ನಾಲ್ಕು ಗೋಡೆಗಳ ಮಧ್ಯೆ ಕಾಶ್ಮೀರ ವಿಚಾರವನ್ನ ಚರ್ಚೆ ಮಾಡೋದಾಗಿ ಹೇಳಿದ್ದಾರೆ. ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ಸಭೆ ಕರೆದಿರೋ ವಿಶ್ವಸಂಸ್ಥೆ ಭದ್ರತಾ ಮಂಡಳಿ, ಇವತ್ತು ಅಂದ್ರೆ ಶುಕ್ರವಾರ ಈ ಸಂಬಂಧ ಚರ್ಚೆ ನಡೆಸೋ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಭಾರತ ಸರ್ಕಾರ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ವಿಧಿ 370 ರದ್ದು ಮಾಡ್ತಿದ್ದಂತೆ ನೆರೆಯ ಪಾಕಿಸ್ತಾನ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ, ಪಾಕಿಸ್ತಾನಕ್ಕೆ ಬೆಂಬಲ ಸೂಚಿಸಿದ್ದ ಚೀನಾ, ವಿಶ್ವಸಂಸ್ಥೆಯಲ್ಲಿ ವಿಷಯ ಪ್ರಸ್ತಾಪಿಸುವಂತೆ ಸಲಹೆ ಕೂಡ ನೀಡಿತ್ತು. ಇದೇ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಖುರೇಷಿ, ವಿಶ್ವಸಂಸ್ಥೆ ಮೊರೆ ಹೋಗಿದ್ದರು.
ಜಮ್ಮು ಕಾಶ್ಮೀರದಲ್ಲಿ ರದ್ದಾಗಿರೋ ವಿಧಿ 370, ಭಾರತಕ್ಕೆ ಸಂಬಂಧಿಸಿದ ಕಾನೂನು. ಇದರಲ್ಲಿ ಪಾಕಿಸ್ತಾನ ಆಗಲಿ, ಚೀನಾ ಆಗಲಿ ಅಥವಾ ವಿಶ್ವಸಂಸ್ಥೆಯಾಗಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ಯಾಕಂದ್ರೆ, ಇದು ಅಂತಾರಾಷ್ಟ್ರೀಯ ವಿಚಾರವಲ್ಲ. ಇದು ಭಾರತಕ್ಕೆ ಮಾತ್ರ ಸೀಮಿತವಾಗಿರೋ ವಿಚಾರ ಎಂಬುದು ಭಾರತೀಯರ ವಾದ. ನೋಡೋಣ, ವಿಶ್ವಸಂಸ್ಥೆಯಲ್ಲಿ ಏನು ಚರ್ಚೆ ಆಗುತ್ತೆ ಅನ್ನೋದು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?