ಸಾಗರ : ಶರಾವತಿ ನದಿ ಉಳಿಸಿ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಲು ಹೋರಾಟ ಒಕ್ಕೂಟ ನಿರ್ಧರಿಸಿದೆ. ಸಾಗರದಲ್ಲಿ ಮಂಗಳವಾರ ಸಂಜೆ ನಡೆದ ಒಕ್ಕೂಟದ ಸಂಚಾಲಕ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಶೀಘ್ರವೇ ಸಿಎಂ ಭೇಟಿಗೆ ನಿಯೋಗ ತೆರಳಲು ನಿರ್ಧರಿಸಲಾಯ್ತು.
ಸಭೆಯಲ್ಲಿ ಈವರೆಗಿನ ಖರ್ಚುವೆಚ್ಚ ಲೆಕ್ಕಪತ್ರವನ್ನ ಮಂಡಿಸಲಾಯಿತು. ತಾಂತ್ರಿಕ ವರದಿ ತಯಾರಿಸಿ, ಸಿಎಂ ಭೇಟಿ ಬಳಿಕ ಮುಂದಿನ ಹೋರಾಟದ ತಯಾರಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯ್ತು. ಸದ್ಯ, ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡ್ಯೊಯುವ ಪ್ರಸ್ತಾವನೆಗೆ ಬಹಳಷ್ಟು ವಿರೋಧ ವ್ಯಕ್ತವಾಗಿದೆ. ಕೇವಲ ಮಲೆನಾಡಿನ ಭಾಗದಲ್ಲಷ್ಟೇ ಅಲ್ಲದೆ ಸ್ವತಃ ಬೆಂಗಳೂರಿಗರೇ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟದ ಸಭೆಯಲ್ಲಿ ಗೌರವಾಧ್ಯಕ್ಷರಾದ ಹಿರಿಯ ಸಾಹಿತಿ ನಾ.ಡಿಸೋಜ ಭಾಗಿಯಾಗಿದ್ರು. ಊಲಿದಂತೆ ಸಂಚಾಲಕರಾದ ಎಚ್.ಬಿ. ರಾಘವೇಂದ್ರ, ಅಖಿಲೇಶ್ ಚಿಪ್ಪಳಿ, ಶಶಿ ಸಂಪಳ್ಳಿ, ಹರ್ಷಕುಮಾರ್ ಕುಗ್ವೆ, ಉಮಾ ಮಹೇಶ್ವರ ಹೆಗಡೆ, ಶಂಕರ ಶರ್ಮಾ ಸೇರಿ ಹಲವರು ಉಪಸ್ಥಿತರಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?