Featured
ಶ್ರೀರಾಮುಲು ಬೆಂಬಲಿಗರಿಂದ ಬಿಜೆಪಿಗೆ ತರಾಟೆ : ನೀಲಿ ಸಿನಿಮಾ ನೋಡಿದ್ರೆ ಡಿಸಿಎಂ ಹುದ್ದೆ ಕೊಡ್ತೀರಾ..?

ಬೆಂಗಳೂರು/ಬಳ್ಳಾರಿ : ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದೇ ಇರೋದಕ್ಕೆ ಬಿಜೆಪಿ ಕಾರ್ಯಕರ್ತರೇ ಯಡಿಯೂರಪ್ಪ ಹಾಗೂ ಬಿಜೆಪಿ ಹೈಕಮಾಂಡ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿರೋ ಬಿಜೆಪಿ ಕಾರ್ಯಕರ್ತರು, ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಒಂದು ವೇಳೆ, ಡಿಸಿಎಂ ಸ್ಥಾನ ನೀಡದೇ ಇದ್ದರೆ, ಕೂಡಲೇ ಸಚಿವ ಸ್ಥಾನಕ್ಕೆ ಶ್ರೀರಾಮುಲು ರಾಜೀನಾಮೆ ನೀಡಬೇಕು. ಕೇವಲ ಶಾಸಕರಾಗಿ ಮುಂದುವರೆಯಲಿ ಎಂದು ಅಭಿಮಾನಿಗಳು, ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಶ್ರೀರಾಮುಲು ಚುನಾವಣೆ ಸಮಯದಲ್ಲಿ 80 ಕ್ಷೇತ್ರಗಳಿಗೂ ಹೆಚ್ಚಿನ ಕಡೆ ಪ್ರಚಾರ ಮಾಡಿದ್ರು. ರಾಜ್ಯದಲ್ಲಿ ಬಿಜೆಪಿಗೆ ಅತೀ ಹೆಚ್ಚಿನ ಸ್ಥಾನ ಗೆಲ್ಲಿಸುವಲ್ಲಿ ರಾಮುಲು ಶ್ರಮ ಹೆಚ್ಚಿದೆ. ಆದ್ರೆ, ರಾಮುಲುಗೆ ಬಿಜೆಪಿ ಅವಮಾನ ಮಾಡಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದು ರಾಮುಲುಗೆ ಮಾಡಿದ ಅವಮಾನವಲ್ಲ. ಇಡೀ ವಾಲ್ಮಿಕಿ, ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಮಾಡಿದ ಅಪಮಾನ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರೋ ರಾಮುಲು ಅಭಿಮಾನಿಗಳು, ಸದನದಲ್ಲಿ ನೀಲಿ ಚಿತ್ರ ನೋಡಿದ್ರೆ ಡಿಸಿಎಂ ಮಾಡ್ತೀರಾ..? ನೀಲಿ ಚಿತ್ರ ನೋಡಿದ್ರೆ ಮಾತ್ರ ಡಿಸಿಎಂ ಆಗಲು ಅರ್ಹರಾ ಎಂದು ಛೇಡಿಸಿದ್ದಾರೆ. ಈ ಮೂಲಕ ಲಕ್ಷ್ಮಣ ಸವದಿಗೆ ಡಿಸಿಎಂ ನೀಡಿರೋದನ್ನ ಪರೋಕ್ಷವಾಗಿ ವಿರೋಧಿಸಿ, ಆಕ್ರೋಶವನ್ನ ಹೊರಹಾಕಿದ್ದಾರೆ.
ಸದ್ಯ, ಬಳ್ಳಾರಿ ಹಾಗೂ ಕೊಪ್ಪಳದಲ್ಲಿ ರಾಮುಲು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ರೋಶ ಹೊರ ಹಾಕಿದ್ದು, ಪ್ರತಿಭಟನೆಗೆ ಇಳಿಯೋ ಎಲ್ಲಾ ಸಾಧ್ಯತೆಗಳಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?