Featured
ಹೆಲ್ಮೆಟ್ ಹಾಕಿಲ್ಲ ಅಂದ್ರೆ ಇನ್ಮುಂದೆ ಪೆಟ್ರೋಲ್ ಸಿಗಲ್ಲ..!

ಬೆಂಗಳೂರು : ಹೆಲ್ಮೆಟ್ ಹಾಕಿಕೊಂಡು ಗಾಡಿ ಚಲಾಯಿಸಿ ಅಂತ ಎಷ್ಟೇ ಹೇಳಿದ್ರೂ, ವಾಹನ ಸವಾರರು ಮಾತ್ರ ಇದನ್ನ ನಿರ್ಲಕ್ಷ್ಯ ಮಾಡ್ತಿದ್ದಾರೆ. ಹೆಲ್ಮೆಟ್ ಇಲ್ಲದ ವಾಹನ ಸವಾರರೇ ಅಪಘಾತಗಳಲ್ಲಿ ಹೆಚ್ಚಾಗಿ ಮೃತಪಡುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಇನ್ಮುಂದೆ ಯಾವುದೇ ಪೆಟ್ರೋಲ್ ಬಂಕ್ಗೆ ಹೋಗಿ, ಪೆಟ್ರೋಲ್ ಬೇಕಂದ್ರೂ ನೀವು ಹೆಲ್ಮೆಟ್ ಹಾಕಿರಲೇ ಬೇಕು. ಹೆಲ್ಮೆಟ್ ಇಲ್ಲದೇ ಇನ್ಮುಂದೆ ಪೆಟ್ರೋಲ್ ಸಿಗಲ್ಲ.
ಹೆಲ್ಮೆಟ್ ಇಲ್ಲದೆ, ಪೆಟ್ರೋಲ್ ಹಾಕದಂತೆ ಈಗಾಗಲೇ ಬೆಂಗಳೂರು ಪೊಲೀಸರು, ಎಲ್ಲಾ ಬಂಕ್ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ಇದೇ ವಿಚಾರವಾಗಿ ಇವತ್ತು ಬೆಂಗಳೂರಿನ ಬಂಕ್ ಮಾಲೀಕರ ಜೊತೆ ಬೆಂಗಳೂರು ಸಂಚಾರಿ ಪೊಲೀಸ್ ಆಯುಕ್ತ ಹರಿಶೇಖರನ್ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಬಂಕ್ ಮಾಲೀಕರು ಭಾಗಿಯಾಗಲಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ಇದ್ದರೂ, ಅದನ್ನ ಉಲ್ಲಂಘಿಸಿ ಹೆಲ್ಮೆಟ್ ಇಲ್ಲದೇ ಸಂಚಾರ ಮಾಡ್ತಾರೆ. ಹೀಗಾಗಿ, ಹೆಲ್ಮೆಟ್ ಇಲ್ಲದೇ ಪೆಟ್ರೋಲ್ ಹಾಕದಿರಲು ಪೊಲೀಸರು ಮೌಖಿಕ ಆದೇಶ ಹೊರಡಿಸಿದ್ದಾರೆ. ಇವತ್ತಿನ ಸಭೆಯ ಬಳಿಕ ಅಧಿಕೃತ ಆದೇಶ ಜಾರಿಯಾಗುವ ಸಾಧ್ಯತೆ ಇದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?