Connect with us

Featured

ಹೋಮ್​​ ವರ್ಕ್​ ಟೆನ್ಷನ್​ : ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ..! ಪೋಷಕರೇ ಎಚ್ಚರ ಎಚ್ಚರ..!

Source : Online

ಸಾಮಾನ್ಯವಾಗಿ ಎಲ್ಲಾ ತಂದೆ-ತಾಯಂದಿರಿಗೆ ತಮ್ಮ ಮಕ್ಕಳು ಒಳ್ಳೇ ವಿದ್ಯಾಭ್ಯಾಸ ಕಲಿಯಬೇಕು. ಚೆನ್ನಾಗಿ ಓದಬೇಕು ಅನ್ನೋ ಆಸೆ ಇದ್ದೇ ಇರುತ್ತೆ. ಆದ್ರೆ, ಇದೇ ಆಸೆಯಿಂದ, ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀಳುತ್ತೆ ಎಂದು ಅಧ್ಯಯನ ಎಚ್ಚರಿಕೆ ನೀಡಿದೆ. ಅದರಲ್ಲೂ ಓದಿನ ವಿಚಾರದಲ್ಲಿ ಮಕ್ಕಳ ಆರೋಗ್ಯ ಮತ್ತು ಬೆಳವಣಿಗೆ ಮೇಲೆ ಹೆಚ್ಚಿನ ಎಫೆಕ್ಟ್​ ಆಗುತ್ತಿದೆ ಎಂದು ಸಂಶೋಧನೆ ಹೇಳಿದೆ.

ಶಾಲೆಗಳಲ್ಲಿ ಶಿಕ್ಷಕರು ವಿನಾಃ ಕಾರಣ ಹೆಚ್ಚು ಹೆಚ್ಚು ಹೋಮ್​ ವರ್ಕ್​ ನೀಡ್ತಾರೆ. ಮಕ್ಕಳು ಶಾಲೆಯಿಂದ ಮನೆಗೆ ಬಂದಾಕ್ಷಣ, ಮತ್ತೆ ಮನೆಯಲ್ಲಿ ಓದುವುದೇ ಕೆಲಸ ಆಗಿರುತ್ತೆ. ಹೀಗೆ ಓದುವುದು, ಬರೆಯುವುದನ್ನ ಬಿಡುವಿಲ್ಲದೇ, ಹೆಚ್ಚು ಸಮಯ ಮಾಡಿಸಿದ್ರೆ ಮಕ್ಕಳ ಆರೋಗ್ಯ ಹಾಳಾಗುತ್ತೆ. ಸಣ್ಣ ವಯಸ್ಸಿನಲ್ಲೇ ಮಕ್ಕಳು ಒತ್ತಡವನ್ನ ಅನುಭವಿಸಬೇಕಾಗುತ್ತೆ. ಟೆನ್ಷನ್​ ಹೆಚ್ಚಾಗುತ್ತೆ. ಇದು ಮಕ್ಕಳ ಬೆಳವಣಿಗೆಗೆ ಮಾರಕ. ಜೊತೆಗೆ ಮಕ್ಕಳ ಆರೋಗ್ಯದ ಮೇಲೆ ಋಣಾತ್ಮಕ ಅಂದ್ರೆ, ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಹೆಚ್ಚಾಗಿರುತ್ತೆ ಎಂದು ಸಂಶೋಧನೆ ಹೇಳಿದೆ.

ಹೀಗಾಗಿಯೇ ನ್ಯಾಷನಲ್​ ಎಜುಕೇಷನ್​ ಅಸೋಸಿಯೇಷನ್​ ಹಾಗೂ ನ್ಯಾಷನಲ್ ಪಿಟಿಎ ಎರಡೂ ಸಂಸ್ಥೆಗಳು ಈ ಕುರಿತು ಕಳವಳವನ್ನ ವ್ಯಕ್ತಪಡಿಸಿವೆ. ಅಲ್ಲದೆ, ತರಗತಿ ಹಾಗೂ ವಯಸ್ಸಿಗೆ ಸಂಬಂಧಿಸಿದಂತೆ ಹೋಮ್​​ ವರ್ಕ್​ ಇಷ್ಟೇ ನಿಮಿಷ, ಗಂಟೆ ಇರಬೇಕು ಎಂದು ಸಮಯ ನಿಗಧಿ ಮಾಡಿದೆ.

ಫಸ್ಟ್​​ ಗ್ರೇಡ್​ ಅಂದ್ರೆ, ಒಂದನೇ ತರಗತಿ ಓದುತ್ತಿರುವ ಮಕ್ಕಳಿಗೆ ಮನೆಯಲ್ಲಿ 10 ನಿಮಿಷ ಹೋಮ್​ ವರ್ಕ್​ ಮಾಡಿದ್ರೆ ಸಾಕು. ಅದೇ 10ನೇ ತರಗತಿ ಓದುತ್ತಿರೋ ಮಕ್ಕಳು, 2 ರಿಂದ 3 ಗಂಟೆ ಓದಿದ್ರೆ ಸಾಕು ಎಂದು ಶಿಕ್ಷಣ ತಜ್ಞರು ಸಲಹೆ ನೀಡಿದ್ದಾರೆ.

Advertisement

ಆದ್ರೆ, ಕಿಂಡರ್​ ಗಾರ್ಡನ್​ ಅಥವಾ ಪ್ರೀ ನರ್ಸರ್​ ಮಕ್ಕಳಿಗೇ ಸರಿ ಸುಮಾರು 30 ನಿಮಿಷದಷ್ಟು ಹೋಮ್​ ವರ್ಕ್​ ನೀಡ್ತಿರೋದು ಗಮನಿಸಲೇಬೇಕಾದ ಸಂಗತಿ. ಎಲ್​ಕೆಜಿ, ಯುಕೆಜಿ ಮಕ್ಕಳಿಗೂ ಅರ್ಧ ಗಂಟೆಗೂ ಹೆಚ್ಚಿನ ಹೋಮ್​ ವರ್ಕ್​ ನೀಡಲಾಗ್ತಿದೆ. ಇದು ಮಕ್ಕಳ ನೈತಿಕ ಸ್ಥೈರ್ಯವನ್ನೇ ಕುಗ್ಗಿಸುತ್ತದೆ. ಜೊತೆಗೆ ಪೋಷಕರ ಮೇಲೂ ಒತ್ತಡ ಹೆಚ್ಚಾಗುತ್ತಿದೆ ಎಂದು ಸಂಶೋಧಕರು ಕಳವಳ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಮಕ್ಕಳ ಓದಿನ ಬಗ್ಗೆ ತುಂಬಾನೇ ಕೇರ್​ ತಗೋಬೇಕು ನಿಜ. ಆದ್ರೆ, ಒತ್ತಡ ಹಾಕಿ, ಅನಾರೋಗ್ಯಕ್ಕೆ ಕಾರಣವಾಗುವಂತ ರೀತಿಯಲ್ಲಿ ವಿನಾಃ ಟೆನ್ಷನ್​ ನೀಡುವುದು ಸರಿಯಲ್ಲ. ಎಲ್ಲದಕ್ಕೂ ಒಂದೊಂದು ವಯಸ್ಸಿದೆ. ಸಣ್ಣ ವಯಸ್ಸಿನಲ್ಲೇ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಮಕ್ಕಳ ಮೆದುಳು ಪೋಷಕರು ಹಾಗೂ ಶಿಕ್ಷಕರು, ಒಟ್ಟಾರೆ ಸಮಾಜ ಹಾಕುವ ಒತ್ತಡವನ್ನ ತಡೆದುಕೊಳ್ಳುವಷ್ಟು ಶಕ್ತವಾಗಿ ಇರುವುದಿಲ್ಲ. ಹೀಗಾಗಿ, ಇನ್ನಾದ್ರೂ, ಮಕ್ಕಳ ಮೇಲೆ ಒತ್ತಡ ಹಾಕುವ ಮುನ್ನ ಯೋಚಿಸಿ..

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ