Featured
17-1-2021 ರ ಭಾನುವಾರದ ರಾಶಿಭವಿಷ್ಯ

ರೈಸಿಂಗ್ ಕನ್ನಡ:- ಮೇಷ
ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು.
9
ವೃಷಭ
ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು.
5
ಮಿಥುನ
ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ.
8
ಕರ್ಕ
ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು.
6
ಸಿಂಹ
ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧÀನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ,ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು
7
ಕನ್ಯಾ
ಎಲ್ಲವೂ ಇದ್ದಂತೆ ಇರಲಿ ಎಂಬ ಮನೋಭಾವನೆ ಇರುವದು. ಕೆಲಸದಲ್ಲಿ ಬದಲಾವಣೆ ತರಲು ಪ್ರಯತ್ನಿಸಿ. ವಿದೇಶ ಪ್ರಯಾಣದ ಯೋಗವಿದೆ.ಉದ್ಯೋಗದಲ್ಲಿ ಪ್ರಗತಿ ಮುಂದುವರೆಯುವದು.
4
ತುಲಾ
ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ.
2
ವೃಶ್ಚಿಕ
ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವದು.
1
ಧನು
ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ.ದೂರಪ್ರಯಾಣ ಯೋಗವಿದೆ.
5
ಮಕರ
ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು.
3
ಕುಂಭ
ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ.
6
ಮೀನ
ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವದು.
9
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?