ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್
ಜಮ್ಮುಕಾಶ್ಮೀರದಲ್ಲಿ ದುಷ್ಕೃತ್ಯ ನಡೆಸಲು ಹೊಂಚುಹಾಕುತ್ತಿದ್ದ ಉಗ್ರರು ಈಗ ಭಾರತೀಯ ಸೇನೆಯ ಬೇಟೆಗೆ ಆಹಾರವಾಗುತ್ತಿದ್ದಾರೆ. ಕಳೆದ ಎರಡು ದಿನದಲ್ಲಿ ಜೈಷ್ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಒಟ್ಟು 6 ಉಗ್ರರು ಎನ್ಕೌಂಟರ್ಗೆ ಬಲಿಯಾಗಿದ್ದಾರೆ. ಶುಕ್ರವಾರ ಕುಲ್ಗಾಮ್ ಜಿಲ್ಲೆಯಲ್ಲಿ ಮೂವರು ಉಗ್ರರು ಎನ್ಕೌಂಟರ್ಗೆ ಬಲಿಯಾದರೆ, ಶನಿವಾರ ಬೆಳ್ಳಂಬೆಳಗ್ಗೆ ಶೋಫಿಯಾನ್ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಸೆದೆಬಡಿದಿದೆ.
ಶೋಫಿಯಾನ್ ಜಿಲ್ಲೆಯ ಅಮ್ಶಿಪೋರದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ಭಾರತೀಯ ಸೇನೆಗೆ ಸಿಕ್ಕಿತ್ತು. ತಕ್ಷಣ ಎಚ್ಚೆತ್ತುಕೊಂಡ ಸಿಆರ್ಪಿಎಫ್ ಪಡೆ ಹಾಗೂ ಪೊಲೀಸರು ಈ ಸ್ಥಳದಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಸೇನೆ ಹಾಗೂ ಪೊಲೀಸರು ಬಂದಿರುವುದನ್ನ ಮನಗಂಡ ಉಗ್ರರು ಸ್ಥಳದಿಂದ ಕಾಲ್ಕಿಳುವ ಹಿನ್ನೆಲೆಯಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಯೋಧರು ಹಾಗೂ ಪೊಲೀಸರು ಇದಕ್ಕೆ ಪ್ರತಿ ದಾಳಿ ಸಂಘಟಿಸಿದರು. ಗುಂಡಿನ ಚಕಮಕಿ ವೇಳೆ ಮೂವರು ಉಗ್ರರು ಹತರಾಗಿದ್ದಾರೆ. ಈ ಕಾರ್ಯಾಚರಣೆ ಮುಂಜಾನೆ ಸುಮಾರು ಐದು ಗಂಟೆಗೆ ನಡೆದಿದೆ.
ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗುಲ್ಪುರ್ ಸೆಕ್ಟರ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಪಾಕಿಸ್ತಾನ ಸೇನಾಪಡೆಯ ಅಪ್ರಚೋದಿತ ಗುಂಡಿನ ದಾಳಿಗೆ ಮೂವರು ನಾಗೀರೀಕರು ಸಾವನ್ನಪ್ಪಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?