Connect with us

ಟಾಪ್ ನ್ಯೂಸ್

ಮೈಸೂರು, ರಾಯಚೂರು ವಿಮಾನ ನಿಲ್ದಾಣಗಳಿಗೆ ₹57.63 ಕೋಟಿ ಮಂಜೂರು

ಬೆಂಗಳೂರು: ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ತುಮಕೂರು- ದಾವಣಗೆರೆ ಮತ್ತು ಗದಗ- ವಾಡಿ ರೈಲ್ವೆ ಯೋಜನೆಗಳಿಗೆ ಕ್ರಮವಾಗಿ ₹50 ಕೋಟಿ ಮತ್ತು ₹43.32 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಒಟ್ಟು ₹93.32 ಕೋಟಿಯನ್ನು ಈ ಎರಡೂ ಯೋಜನೆಗಳಿಗೆ ಒದಗಿಸಿದಂತಾಗಿದೆ ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಸೋಮವಾರ ತಿಳಿಸಿದ್ದಾರೆ.

ಇದಲ್ಲದೆ, ಮೈಸೂರು ಮತ್ತು ರಾಯಚೂರು ವಿಮಾನ ನಿಲ್ದಾಣಗಳ ಕಾಮಗಾರಿಗಳಿಗೆ ಒಟ್ಟಾಗಿ ₹57.63 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪೈಕಿ ₹14.62 ಕೋಟಿ ಮೊತ್ತವು ರಾಯಚೂರು ವಿಮಾನ ನಿಲ್ದಾಣದ ಕೆಲಸಗಳಿಗೆ ವಿನಿಯೋಗವಾಗಲಿದೆ. ಮೈಸೂರಿನಲ್ಲಿ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಈ ಹಣ ಬಳಸಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜಧಾನಿಯ ಪಕ್ಕದಲ್ಲಿರುವ ತುಮಕೂರನ್ನು ಮಧ್ಯ ಕರ್ನಾಟಕದೊಂದಿಗೆ ಬೆಸೆಯಲಿರುವ ತುಮಕೂರು-ದಾವಣಗೆರೆ ರೈಲ್ವೆ ಯೋಜನೆಯು ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ತ್ವದ್ದಾಗಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಭಾಗಗಳಿಗೆ ತ್ವರಿತ ರೈಲು ಸಂಚಾರ ಸಾಧ್ಯವಾಗಲಿದೆ. ಹಾಗೆಯೇ ಗದಗ-ವಾಡಿ ರೈಲು ಮಾರ್ಗದ ಅಭಿವೃದ್ಧಿಯಿಂದ ಹುಬ್ಬಳ್ಳಿಯನ್ನು ಒಳಗೊಂಡು ಕಿತ್ತೂರು ಕರ್ನಾಟಕ ಮತ್ತು ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಿಗೆ ಸುಲಭವಾಗಿ ತಲುಪಬಹುದಾಗಿದೆ. ಇದರಿಂದ ಆ ಜಿಲ್ಲೆಗಳಲ್ಲಿ ಮೂಲಸೌಕರ್ಯ ವೃದ್ಧಿ ಸೇರಿದಂತೆ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆಯಲಿದೆ ಎಂದು ಅವರು ವಿವರಿಸಿದ್ದಾರೆ.

ರೈಲ್ವೆ ಯೋಜನೆಗಳು ಮೂಲತಃ ಕೇಂದ್ರ ಸರಕಾರಕ್ಕೆ ಸೇರಿದ್ದರೂ ಕೆಲವು ಯೋಜನೆಗಳಿಗೆ ತಗುಲುವ ಒಟ್ಟು ವೆಚ್ಚದಲ್ಲಿ ಶೇಕಡ 50ರಷ್ಟನ್ನು ರಾಜ್ಯ ಸರಕಾರವೇ ಭರಿಸುತ್ತದೆ. ಭೂಸ್ವಾಧೀನ ಪ್ರಕ್ರಿಯೆಯು ಮೇಲ್ಕಂಡ ಎರಡೂ ಯೋಜನೆಗಳ ವ್ಯಾಪ್ತಿಯಲ್ಲಿ ಅಂತಿಮ ಹಂತದಲ್ಲಿದೆ. ಇದು ಮುಗಿದ ಕೂಡಲೇ ಯೋಜನೆಯ ಕಾಮಗಾರಿಗಳು ಕ್ಷಿಪ್ರ ಗತಿಯಲ್ಲಿ ನಡೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹಾಗೆಯೇ, ರಾಜ್ಯದ ಎಲ್ಲ ಭಾಗಗಳಲ್ಲೂ ಉದ್ದಿಮೆಗಳು ನೆಲೆಯೂರುತ್ತಿದ್ದು, ಕೃಷಿ ಆಧಾರಿತ ಕೈಗಾರಿಕೆಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಮಾರುಕಟ್ಟೆ ವಿಸ್ತರಣೆ, ಸುಲಭ ಸಾಗಾಟ, ಸುಗಮ ಮತ್ತು ತ್ವರಿತ ಪ್ರಯಾಣ ಇವುಗಳನ್ನು ಪರಿಗಣಿಸಿ, ಎಲ್ಲಾ ಕಡೆಗಳಲ್ಲೂ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ದೃಷ್ಟಿಯಿಂದ ಮೈಸೂರು ಮತ್ತು ರಾಯಚೂರು ವಿಮಾನ ನಿಲ್ದಾಣ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಸುಸಜ್ಜಿತ ವಿಮಾನ ನಿಲ್ದಾಣ ಇರಬೇಕೆನ್ನುವುದು ಸರಕಾರದ ಆಶಯವಾಗಿದೆ ಎಂದು ಪಾಟೀಲ ವಿವರಿಸಿದ್ದಾರೆ.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ