ಟಾಪ್ ನ್ಯೂಸ್
ಮೈಸೂರು, ರಾಯಚೂರು ವಿಮಾನ ನಿಲ್ದಾಣಗಳಿಗೆ ₹57.63 ಕೋಟಿ ಮಂಜೂರು

ಬೆಂಗಳೂರು: ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಹಂತದಲ್ಲಿರುವ ತುಮಕೂರು- ದಾವಣಗೆರೆ ಮತ್ತು ಗದಗ- ವಾಡಿ ರೈಲ್ವೆ ಯೋಜನೆಗಳಿಗೆ ಕ್ರಮವಾಗಿ ₹50 ಕೋಟಿ ಮತ್ತು ₹43.32 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಒಟ್ಟು ₹93.32 ಕೋಟಿಯನ್ನು ಈ ಎರಡೂ ಯೋಜನೆಗಳಿಗೆ ಒದಗಿಸಿದಂತಾಗಿದೆ ಎಂದು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಸೋಮವಾರ ತಿಳಿಸಿದ್ದಾರೆ.
ಇದಲ್ಲದೆ, ಮೈಸೂರು ಮತ್ತು ರಾಯಚೂರು ವಿಮಾನ ನಿಲ್ದಾಣಗಳ ಕಾಮಗಾರಿಗಳಿಗೆ ಒಟ್ಟಾಗಿ ₹57.63 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪೈಕಿ ₹14.62 ಕೋಟಿ ಮೊತ್ತವು ರಾಯಚೂರು ವಿಮಾನ ನಿಲ್ದಾಣದ ಕೆಲಸಗಳಿಗೆ ವಿನಿಯೋಗವಾಗಲಿದೆ. ಮೈಸೂರಿನಲ್ಲಿ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಮತ್ತು ಉನ್ನತೀಕರಣಕ್ಕೆ ಈ ಹಣ ಬಳಸಲಾಗುವುದು ಎಂದು ಅವರು ಹೇಳಿದ್ದಾರೆ.
ರಾಜಧಾನಿಯ ಪಕ್ಕದಲ್ಲಿರುವ ತುಮಕೂರನ್ನು ಮಧ್ಯ ಕರ್ನಾಟಕದೊಂದಿಗೆ ಬೆಸೆಯಲಿರುವ ತುಮಕೂರು-ದಾವಣಗೆರೆ ರೈಲ್ವೆ ಯೋಜನೆಯು ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ತ್ವದ್ದಾಗಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಭಾಗಗಳಿಗೆ ತ್ವರಿತ ರೈಲು ಸಂಚಾರ ಸಾಧ್ಯವಾಗಲಿದೆ. ಹಾಗೆಯೇ ಗದಗ-ವಾಡಿ ರೈಲು ಮಾರ್ಗದ ಅಭಿವೃದ್ಧಿಯಿಂದ ಹುಬ್ಬಳ್ಳಿಯನ್ನು ಒಳಗೊಂಡು ಕಿತ್ತೂರು ಕರ್ನಾಟಕ ಮತ್ತು ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ನಗರಗಳಿಗೆ ಸುಲಭವಾಗಿ ತಲುಪಬಹುದಾಗಿದೆ. ಇದರಿಂದ ಆ ಜಿಲ್ಲೆಗಳಲ್ಲಿ ಮೂಲಸೌಕರ್ಯ ವೃದ್ಧಿ ಸೇರಿದಂತೆ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆಯಲಿದೆ ಎಂದು ಅವರು ವಿವರಿಸಿದ್ದಾರೆ.
ರೈಲ್ವೆ ಯೋಜನೆಗಳು ಮೂಲತಃ ಕೇಂದ್ರ ಸರಕಾರಕ್ಕೆ ಸೇರಿದ್ದರೂ ಕೆಲವು ಯೋಜನೆಗಳಿಗೆ ತಗುಲುವ ಒಟ್ಟು ವೆಚ್ಚದಲ್ಲಿ ಶೇಕಡ 50ರಷ್ಟನ್ನು ರಾಜ್ಯ ಸರಕಾರವೇ ಭರಿಸುತ್ತದೆ. ಭೂಸ್ವಾಧೀನ ಪ್ರಕ್ರಿಯೆಯು ಮೇಲ್ಕಂಡ ಎರಡೂ ಯೋಜನೆಗಳ ವ್ಯಾಪ್ತಿಯಲ್ಲಿ ಅಂತಿಮ ಹಂತದಲ್ಲಿದೆ. ಇದು ಮುಗಿದ ಕೂಡಲೇ ಯೋಜನೆಯ ಕಾಮಗಾರಿಗಳು ಕ್ಷಿಪ್ರ ಗತಿಯಲ್ಲಿ ನಡೆಯಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹಾಗೆಯೇ, ರಾಜ್ಯದ ಎಲ್ಲ ಭಾಗಗಳಲ್ಲೂ ಉದ್ದಿಮೆಗಳು ನೆಲೆಯೂರುತ್ತಿದ್ದು, ಕೃಷಿ ಆಧಾರಿತ ಕೈಗಾರಿಕೆಗಳು ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಮಾರುಕಟ್ಟೆ ವಿಸ್ತರಣೆ, ಸುಲಭ ಸಾಗಾಟ, ಸುಗಮ ಮತ್ತು ತ್ವರಿತ ಪ್ರಯಾಣ ಇವುಗಳನ್ನು ಪರಿಗಣಿಸಿ, ಎಲ್ಲಾ ಕಡೆಗಳಲ್ಲೂ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ದೃಷ್ಟಿಯಿಂದ ಮೈಸೂರು ಮತ್ತು ರಾಯಚೂರು ವಿಮಾನ ನಿಲ್ದಾಣ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲೂ ಸುಸಜ್ಜಿತ ವಿಮಾನ ನಿಲ್ದಾಣ ಇರಬೇಕೆನ್ನುವುದು ಸರಕಾರದ ಆಶಯವಾಗಿದೆ ಎಂದು ಪಾಟೀಲ ವಿವರಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?