Connect with us

Featured

ಕೆಂಪುಕೋಟೆಯಲ್ಲಿ ಸರಳ ಸ್ವಾತಂತ್ರ್ಯೋತ್ಸವದ ಕಂಪು- ಆತ್ಮನಿರ್ಭರ ಭಾರತಕ್ಕೆ ಪ್ರಧಾನಿ ಮೋದಿ ಒತ್ತು- ನ್ಯಾಷನಲ್ ಹೆಲ್ತ್ ಮಿಷನ್, ಡಿಜಿಟಲ್ ಇಂಡಿಯಾ ಕಡೆ ಸರ್ಕಾರದ ನಡೆ

ರೈಸಿಂಗ್​ ಕನ್ನಡ್:

ನವದೆಹಲಿ:

Advertisement

ಕೊರೊನಾ ಮಹಾಮಾರಿಯ  ನಡುವೆಯೂ ರಾಷ್ಟ್ರವು ಇಂದು 74ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಸರಳವಾಗಿ ನಡೆದಿದೆ. ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ಮಾಡಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕೊರೊನಾ ವಿರುದ್ಧವೂ ಭಾರತ ತನ್ನ ಸಾಮೂಹಿಕ ಶಕ್ತಿಯನ್ನು ತೋರಿದೆ. ಭಾರತದ ಪ್ರತಿಯೊಬ್ಬರಿಗೂ ಆತ್ಮನಿರ್ಭರ ಮಂತ್ರವಾಗಿದೆ. ಕೊರೊನಾ ಸಂದರ್ಭದಲ್ಲೂ ಆತ್ಮನಿರ್ಭರ ಸಂಕಲ್ಪ ಕೈಗೊಳ್ಳಲಾಗಿದ್ದು ಭಾರತ ಆತ್ಮನಿರ್ಭರ ಆಗಲೇಬೇಕಿದೆ. ಒಂದು ಬಾರಿ ನಿರ್ಧಾರ ಕೈಗೊಂಡರೆ, ಸಾಧಿಸಿಯೇ ತೀರುತ್ತದೆ. ಈ ದಿಶೆಯಲ್ಲಿ ನಮ್ಮನ್ನು ನಾವು ತಯಾರಿ ಮಾಡಿಕೊಳ್ಳುವುದು ಅಗತ್ಯವಾಗಿದೆ. ಯುವಶಕ್ತಿಯನ್ನು ಹೊಂದಿರುವ ಭಾರತದ ಮೊದಲ ಮಂತ್ರ ಆತ್ಮನಿರ್ಭರ ಆಗಿದೆ ಎಂದು ಹೇಳಿದರು.

Advertisement
Puranik Full

ಕೊರೋನಾ ಸಂಕ್ರಾಮಿಕ ರೋಗದ ವಿರುದ್ಧ ಭಾರತಕ್ಕೆ ಜಯ ಸಿಗಲಿದೆ. ನಾವು ಸ್ವತಂತ್ರ ಭಾರತದಲ್ಲಿ ಉಸಿರಾಡುತ್ತಿದ್ದೇವೆ. ಲಕ್ಷಾಂತರ ಜನರ ತ್ಯಾಗ ಬಲಿದಾನ ಇದರ ಹಿಂದೆ ಇದೆ. ಸ್ವಾತಂತ್ರ್ಯ ಸೇನಾನಿಗಳು, ಹುತಾತ್ಮರಿಗೆ ನನ್ನ ನಮನಗಳು ಎಂದು ಹೇಳಿದ್ದಾರೆ.

ಪೂಜ್ಯ ಬಾಪೂಜಿ ನೇತೃತ್ವದಲ್ಲಿ ಹೋರಾಟ ಯಶಸ್ವಿಯಾಗಿದೆ. ಸಾಮ, ದಂಡ, ಭೇದದ ಮೂಲಕ ಸ್ವಾತಂತ್ರರ್ಯ ಗಳಿಸಲಾಗಿದೆ. ಇಡೀ ದೇಶ ಒಗ್ಗೂಡುವುದಿಲ್ಲ ಎನ್ನುವವರಿಗೆ ಹಿನ್ನೆಡೆಯಾಗಿದೆ. ಪ್ರತಿಯೊಬ್ಬರು ಒಂದಲ್ಲ ಒಂದು ರೀತಿಯಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ ಎಂದು ತಿಳಿಸಿದರು.

Puradamma
Puradamma

Advertisement

ಆತ್ಮನಿರ್ಭರ ಭಾರತ ಸಮರ್ಥ ಭಾರತ ಮಂತ್ರ ಜಪಿಸಿದ ಪ್ರಧಾನಿ ಮೋದಿ, ಡಿಜಿಟಲ್ ಭಾರತದ ಜನರಲ್ಲಿ ಅದ್ಭುತವನ್ನು ಸೃಷ್ಟಿಸಿದೆ. ಭೀಮ್, ಯುಪಿಐ ಆ್ಯಪ್​ಗಳು ಮೂರು ಲಕ್ಷ ಕೋಟಿ ವಹಿವಾಟು ನಡೆಸಿವೆ. ಡಿಜಿಟಲ್ ಇಂಡಿಯಾ ಜತೆ ಗ್ರಾಮ ಪಂಚಾಯಿತಿಗಳ ಜೋಡಣೆ ಅನಿವಾರ್ಯ. ಹೀಗಾಗಿ ಗ್ರಾಮ ಪಂಚಾಯಿತಿಗಳಿಗೆ ಆಪ್ಟಿಕಲ್ ಫೈಬರ್ ನೆಟ್ ವ್ಯವಸ್ಥೆ ಸಿಗಲಿದೆ. ಈಗಾಗಲೇ ಹಲವು ಹಳ್ಳಿಗಳಲ್ಲಿ ಆಪ್ಟಿಕಲ್ ಫೈಬರ್ ನೆಟ್ ವ್ಯವಸ್ಥೆ ದೊರಕಿದೆ ಎಂದರು.

ಇದೇ ವೇಳೆ ಚೀನಾಗೆ ಪರೋಕ್ಷ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ, ವಿಸ್ತಾರವಾದದಲ್ಲಿ ನಂಬಿಕೆ ಇಟ್ಟವರು ಸಹ ಎರಡು ಯುದ್ಧಗಳಲ್ಲಿ ಹಿನ್ನೆಡೆ ಕಂಡಿದ್ದಾರೆ. ವಿಸ್ತಾರವಾದಕ್ಕೆ ಸವಾಲಾಗಿದ್ದೇ ಭಾರತ ದೇಶ. ವಿಸ್ತಾರವಾದದಲ್ಲಿ ನಂಬಿಕೆ ಇಟ್ಟವರು ಎಂದಿಗೂ ಉನ್ನತಿ ಕಾಣಲು ಸಾಧ್ಯವಿಲ್ಲ ಎಂದು ಟೀಕಿಸಿದರು. ಇಡೀ ಜಗತ್ತಿನ ಕಲ್ಯಾಣಕ್ಕಾಗಿ ಭಾರತ ಆತ್ಮನಿರ್ಭರ ಆಗಬೇಕಿದೆ ಎಂದು ಹೇಳಿದರು.

ಆತಂಕವಾದವಿರಲಿ, ವಿಸ್ತಾರವಾದವಿರಲಿ ಭಾರತವು ಒಗ್ಗಟ್ಟಿನಿಂದ ಹೋರಾಡುತ್ತಿದೆ. ದೇಶದ ರಾಷ್ಟ್ರೀಯ ಭದ್ರತೆಗೆ ತೊಂದರೆ ಮಾಡಲು ಹೊರಟವರಿಗೆ ನಮ್ಮ ಯೋಧರು ಸರಿಯಾದ ಉತ್ತರ ನೀಡಿದ್ದಾರೆ. ಸ್ವಾವಲಂಬಿ ಭಾರತಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 100 ಕ್ಕೂ ಹೆಚ್ಚು ರಕ್ಷಣಾ ವಸ್ತುಗಳ ಆಮದನ್ನು ನಿಲ್ಲಿಸಿದ್ದೇವೆ. ಗಡಿಯಲ್ಲಿ 1 ಲಕ್ಷ ಎನ್‌ಸಿಸಿ ಕೆಡೆಟ್‌ಗಳನ್ನು ನಿಯೋಜನೆ ಮಾಡಲು ಉದ್ದೇಶಿಸಲಾಗಿದ್ದು, ಅದರಲ್ಲಿ ಹೆಣ್ಣುಮಕ್ಕಳಿಗೆ ಹೆಚ್ಚು ಪ್ರಾಶಸ್ತ್ಯ ನೀಡಲಾಗುತ್ತದೆ ಎಂದು ಮೋದಿ ಭಾಷಣದಲ್ಲಿ ಹೇಳಿದರು

Advertisement

ಜಮ್ಮು ಕಾಶ್ಮೀರಲ್ಲಿ 370ನೇ ವಿಧಿ ನಿಷೇಧಿಸಿ ಒಂದು ವರ್ಷ ಕಳೆದಿದೆ. ಇಲ್ಲಿ ಮತ್ತೆ ಚುನಾವಣೆ ನಡೆಯಲಿದೆ. ಲಡಾಖ್‌ನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವ ಮೂಲಕ ಅಲ್ಲಿನ ಜನರ ಬಹು ವರ್ಷಗಳ ಕನಸನ್ನು ನಾವು ಈಡೇರಿಸಿದ್ದೇವೆ, ಇನ್ನು ಅಲ್ಲಿ ಅಭಿವೃದ್ಧಿಯ ಅವಶ್ಯಕತೆ ಇದೆ ಅನ್ನುವುದನ್ನು ಪ್ರಧಾನ ಮಂತ್ರಿಗಳು ತಿಳಿಸಿದರು.

ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್ ಪ್ರಾರಂಭ ಮಾಡುತ್ತಿದ್ದೇವೆ. ಇದು ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಲಿದೆ. ಕೊರೊನಾ ಸಂದರ್ಭದಲ್ಲಿ 1400 ಲ್ಯಾಬ್‌ಗಳ ನಿರ್ಮಾಣವಾಗಿದೆ . 7 ಲಕ್ಷ ಪರೀಕ್ಷೆಗಳು ನಡೆಯುತ್ತಿವೆ. ದೇಶದಲ್ಲಿ ಮೂರು ಕಂಪನಿಗಳು ವಿವಿಧ ಹಂತಗಳಲ್ಲಿ ಕೊವಿಡ್ ಲಸಿಕೆಯ ತಯಾರಿಕೆಗೆ ಪರೀಕ್ಷೆ ನಡೆಸುತ್ತಿವೆ. ಕೊವಿಡ್ 19 ಸಂದರ್ಭದಲ್ಲಿ ಸಹಾಯ ಮಾಡಿದ ನೆರೆಯ ರಾಷ್ಟ್ರಗಳಿಗೆ ಇದೇ ವೇಳೆ ಕೃತಜ್ಞತೆಗಳು ಎಂದು ಮೋದಿ ಹೇಳಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ