Featured
ತುಮಕೂರಿನಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಸರಗಳ್ಳ ಗ್ರೇಟ್ ಎಸ್ಕೇಪ್: ನಗೆಪಾಟಲಿಗೀಡಾದ ಪೊಲೀಸರ ಚೇಸಿಂಗ್..!

ತುಮಕೂರು:
ರೈಸಿಂಗ್ ಕನ್ನಡ:
ಪೊಲೀಸರ ವಶದಲ್ಲಿದ್ದ ಖತರ್ನಾಕ್ ಸರಗಳ್ಳನೋರ್ವ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ತಾಲೂಕಿನ ಕೋರಾ ಠಾಣೆಯಲ್ಲಿ ನಡೆದಿದೆ.
ಮಧುಗಿರಿ ತಾಲ್ಲೂಕು ಮಿಡಿಗೇಶಿ ಮೂಲದ ಅಂತರಸನಹಳ್ಳಿಯಲ್ಲಿ ವಾಸವಾಗಿರುವ ರಂಗಪ್ಪ ಅಲಿಯಾಸ್ ಪುನೀತ್ ಎಂಬಾತನೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಠಾಣೆಯಿಂದಲೇ ಕಾಲ್ಕಿತ್ತು ನಾಪತ್ತೆಯಾಗಿರುವ ಆರೋಪಿ. ಸದರಿ ಕುಖ್ಯಾತ ಸರಗಳ್ಳನನ್ನು ಇತ್ತೀಚೆಗೆ ಕೋರ ಪೊಲೀಸರು ಪತ್ತೆ ಹಚ್ಚಿ ಬಂಧಿಸಿ ಠಾಣೆಗೆ ಕರೆತಂದು ವಿಚಾರಣೆ ಮಾಡಿ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕದ್ದು ಮಾರಿದ ಸರಗಳನ್ನು ವಶಪಡಿಸಿಕೊಂಡಿದ್ದು ಇನ್ನೂ ಕೆಲ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳವು ಮಾಲು ವಶ ಪಡಿಸಿಕೊಳ್ಳ ಬೇಕಾಗಿತ್ತು.
ಮೊನ್ನೆ ರಾತ್ರಿ ಪೊಲೀಸ್ ಠಾಣೆಯಲ್ಲಿ ಊಟ ಕೊಟ್ಟು ಕೊರೊನಾ ಭೀತಿಯಲ್ಲಿದ್ದ ಪೊಲೀಸರು ಸಾಮಾಜಿಕ ಅಂತರ ಕಾಯ್ದುಕೊಂಡಿದ್ದೆ ಎಡವಟ್ಟಿಗೆ ಕಾರಣವಾಯಿತು. ಸರಗಳ್ಳ ರಾತ್ರಿ ಊಟ ಮುಗಿಸಿದ ನಂತರ ಊಟದ ಪ್ಯಾಕೆಟ್ಅನ್ನು ಆಚೆಗೆ ಎಸೆಯುವ ನೆಪದಲ್ಲಿ ಠಾಣೆಯಿಂದ ಪೊಲೀಸರ ಹೊಡೆತ ತಿಂದು ಕುಂಟುತ್ತಾ ಹೊರ ಹೋದವನನ್ನು ಕಂಡ ಪೊಲೀಸರು ಎಂಬ ನಿರ್ಲಕ್ಷ್ಯ ಭಾವನೆ ತೋರಿದ್ದರಿಂದ ಸದರಿ ಖದೀಮ ಅಲ್ಲಿಂದ ಕುದುರೆ ವೇಗದಲ್ಲಿ ಪರಾರಿಯಾಗಿದ್ದಾನೆ. ಇನ್ನು ಅವನ ಹಿಂದೆ ಪೊಲೀಸರು ಓಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವುದು ನಗೆಪಾಟಲಿಗೀಡಾಗಿದೆ.

ಸದ್ಯ ಸಿಸಿಟಿವಿ ಫೂಟೇಜ್ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳ ಕೈಸೇರಿದೆ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾಗೂ ಇತ್ತೀಚೆಗೆ ಪೊಲೀಸರಿಗೂ ಕೊರೊನಾ ವಕ್ಕರಿಸುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಆರೋಪಿಗಳಿಂದ ಅಂತರ ಕಾಯ್ದುಕೊಳ್ಳುವಂತೆ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸೂಚನೆ ನೀಡಿದ್ದರ ಮೇರೆಗೆ ಈ ಕಲ್ಲಿನಿಂದಲೂ ಠಾಣೆಯ ಸಿಬ್ಬಂದಿ ಅಂತರ ಕಾಯ್ದುಕೊಂಡಿದ್ದರು. ಇದೇ ಆತನ ಗ್ರೇಟ್ ಎಸ್ಕೇಪ್ ಗೆ ಕಾರಣವಾಗಿದೆ.
ಈ ಸರಗಳ್ಳನ ವಿರುದ್ಧ ಬೆಂಗಳೂರಿನಲ್ಲಿ ಏಳು ಪ್ರಕರಣ ತುಮಕೂರಿನ ಕೋರಾ ಠಾಣೆಯಲ್ಲಿ ಮೂರು ಸೇರಿದಂತೆ ಬೆಳ್ಳಾವಿ ಮತ್ತು ತಿಲಕ್ ಪಾರ್ಕ್ ಠಾಣೆಗಳಲ್ಲಿ ತಲಾ ಎರಡು ಪ್ರಕರಣ ಸೇರಿ ಒಟ್ಟು ಹದಿನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ. ತಪ್ಪಿಸಿಕೊಂಡಿರುವ ಕಳ್ಳನ ಬೇಟೆಗೆ ಪೊಲೀಸರು ತಂಡ ರಚಿಸಿಕೊಂಡು ಬಲೆ ಬೀಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?