Featured
ಸತತ ಎರಡನೇ ದಿನವೂ ಶತಕ ಬಾರಿಸಿದ ಕೊರೊನಾ: 4,267 ಹೊಸ ಕೇಸ್: ಬೆಂಗಳೂರಿನಲ್ಲಿ 36 ಬಲಿ
ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಮರಣ ಮೃದಂಗ ಬಾರಿಸಿದ್ದು ಕ್ರೂರಿ ಕೊರೊನಾ ಶತಕ ಬಾರಿಸಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಕಿಲ್ಲರ್ ಕೊರೊನಾ 114 ಮಂದಿಯನ್ನ ಬಲಿ ತೆಗೆದುಕೊಂಡು ಅಟ್ಟಹಾಸ ಮೆರೆದಿದೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 3,312ಕ್ಕೆ ಏರಿದೆ.
ರಾಜ್ಯದಲ್ಲಿ 79,908 ಸಕ್ರಿಯ ಪ್ರಕರಣಗಳಿವೆ. ಸಮಾಧಾನಕರ ವಿಚಾರವೆಂದರೆ ಸೋಂಕಿನ ಸಂಖ್ಯೆ ಕಡಿಮೆಯಾಗುತ್ತಿದೆ. ಸೋಮವಾರ 4,267 ಹೊಸ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟು 1,82,325 ಸೋಂಕಿತರಿದ್ದಾರೆ. ಸೋಮವಾರ 5,218 ಮಂದಿ ಡಿಸ್ಚಾರ್ಜ್ ಆಗಿದ್ದು ಈವರೆಗೂ 99,126 ಮಂದಿ ಬಿಡುಗಡೆಯಾಗಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿಯೂ ಕೊರೊನಾ ಅಬ್ಬರಿಸಿದ್ದು 36 ಮಂದಿಯನ್ನ ಬಲಿತೆಗೆದುಕೊಂಡಿದೆ. ಇದರೊಂದಿಗೆ ನಗದರಲ್ಲಿ ಸಾವಿನ ಸಂಖ್ಯೆ 1,276ಕ್ಕೆ ಏರಿದೆ.
ನಗರದಲ್ಲಿ 1,243 ಹೊಸ ಕೇಸ್ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 75,428ಕ್ಕೆ ಏರಿದೆ. ಸೋಮವಾರ 2,037 ಮಂದಿ ಬಿಡುಗಡೆಯಾಗಿದ್ದು ಒಟ್ಟು ಈವರೆಗೂ ನಗರದಲ್ಲಿ 41,166 ಮಂದಿ ಬಿಡುಗಡೆಯಾಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?