ರೈಸಿಂಗ್ ಕನ್ನಡ :
ವಿಜಯಪುರ:
ಮಾಜಿ ಕೇಂದ್ರ ಸಚಿವ, ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರು ತಾವು ಕಟ್ಟಿಸಿರುವ ಹೊಸ ಮನೆಗೆ ಮಾಜಿ ಮುಖ್ಯ ಮಂತ್ರಿಗಳಾದ ರಾಮಕೃಷ್ಣ ಹೆಗಡೆ- ಜೆ.ಎಚ್. ಪಟೇಲ್ ಅವರ ಹೆಸರನ್ನು ನಾಮಕರಣ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ಹೆಗಡೆ-ಪಟೇಲ್ ನನ್ನ ಪಾಲಿಗೆ ಮಹಾನಾಯಕರು. ಅವರ ಸ್ಮರಣೆಗಾಗಿ, ನಾನು ನನ್ನ ಸ್ವಂತ ಶ್ರಮದಿಂದ ಕಟ್ಟಿಸಿರುವ ಮನೆಗೆ ಮಹಾನಾಯಕರ ಹೆಸರನ್ನು ನಾಮಕರಣ ಮಾಡಿದ್ದೇನೆ ಎಂದರು.
ಇಬ್ಬರೂ ನಾಯಕರು ತಮ್ಮ ಮಕ್ಕಳಿಗೆ ರಾಜಕಾರಣದಲ್ಲಿ ಪ್ರೀತಿ ಕೊಟ್ಟರೂ, ಇಲ್ಲವೊ ಗೊತ್ತಿಲ್ಲ. ಆದರೆ, ನನಗೆ ರಾಜಕಾರಣದಲ್ಲಿ ಪ್ರೀತಿ ಕೊಟ್ಟಿದ್ದಾರೆ. ಹೀಗಾಗಿ ಇಬ್ಬರು ಮಹಾಶಯರ ಹೆಸರನ್ನು ಹೊಸ ಮನೆಗೆ ನಾಮಕರಣ ಮಾಡಿದ್ದೇನೆ ಎಂದರು. ಹೊಸ ಮನೆ ನಿರ್ಮಿಸಿ ಆರೇಳು ತಿಂಗಳಾಗಿತ್ತು.
ಇಂದು ರಾಮಕೃಷ್ಣ ಹೆಗಡೆ ಅವರ ಜನುಮ ದಿನವಾದ ಕಾರಣ ಒಳ್ಳೆಯ ದಿನವೆಂದು ಪೂಜೆ ಮಾಡಿ, ನಾಮ ಫಲಕ ಅಳವಡಿಸಿದ್ದೇನೆ. ಮುಂದಿನ ದಿನಗಳಲ್ಲಿ ಶಿಲೆಯಲ್ಲಿ ಇಬ್ಬರ ಹೆಸರನ್ನು ಕೆತ್ತಿಸಲಾಗುವುದು ಎಂದು ತಿಳಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?