Connect with us

Featured

ಬಹುಮುಖ ಪ್ರತಿಭೆ, ಅಪರೂಪದ ರಾಜಕಾರಣಿ ಅರುಣ್‌ ಜೇಟ್ಲಿ ಅಸ್ತಂಗತ

ನವದೆಹಲಿ: ಏಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಹಣಕಾಸು ಖಾತೆಯ ಮಾಜಿ ಸಚಿವ ಅರುಣ್‌ ಜೇಟ್ಲಿ ( ೬೬) ಇಂದು ನಿಧನರಾಗಿದ್ದಾರೆ. ಅಪರೂಪದ ರಾಜಕಾರಣಿಯ ಕಣ್ಮರೆಯಿಂದ ಹಳೆ ತಲೆಮಾರಿನ ಕೊಂಡಿಯೊಂದು ಕಳಚಿ ಬಿದ್ದಂತಾಗಿದೆ. ೨೦೧೪ರಿಂದ ೨೦೧೯ರವರೆಗೆ ಕೇಂದ್ರ ವಿತ್ತ ಸಚಿವರಾಗಿದ್ದ ಜೇಟ್ಲಿ ಹಣಕಾಸು, ರಾಷ್ಟ್ರೀಯ ಭದ್ರತೆ, ವಾಣಿಜ್ಯ, ಕಾನೂನು ಹೀಗೆ ಎಲ್ಲಾ ವಿಷಯಗಳಲ್ಲೂ ಪರಿಣತರಾಗಿದ್ದವರು. ಸುಪ್ರೀಂಕೋರ್ಟ್‌ನ ಹಿರಿಯ ವಕೀಲರೂ ಆಗಿದ್ದ ಜೇಟ್ಲಿ ಹಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಈ ಕಾರಣದಿಂದಲೇ ಈಬಾರಿಯ ಮೋದಿ ಕ್ಯಾಬಿನೆಟ್ ಗೆ ಸೇರ್ಪಡೆಯಾಗಿರಲಿಲ್ಲ.

ಬಾಲ್ಯದ ಜೀವನ:
ವಕೀಲ ಕಿಶೆನ್‌ ಜೇಟ್ಲಿ ಹಾಗೂ ರತನ್‌ ಪ್ರಭಾ ದಂಪತಿ ಮಗನಾದ ಅರುಣ್‌ ಜನ್ಮಿಸಿದ್ದು ೧೯೫೨ರಲ್ಲಿ, ಎಲ್‌ ಎಲ್‌ ಬಿವರೆಗೂ ದೆಹಲಿಯಲ್ಲೇ ವ್ಯಾಸಂಗ ಮಾಡಿದರು. ೧೯೭೫ರಿಂದ೭೭ರವರೆಗೆ ಆಂತರಿಕ ತುರ್ತುಪರಿಸ್ಥಿತಿ ಘೋಷಣೆಯಾದಗ ಪ್ರತಿಭಟಿಸಿ ಜೈಲು ಸೇರಿದ್ದರು, ೧೯೭೩ರಲ್ಲಿ ರಾಜ್‌ ನಾರಾಯಣ್‌ ಹಾಘೂ ಜಯಪ್ರಕಾಶ್‌ ನಾರಾಯಣ್‌ ಜತೆ ಸೇರಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ರು, ಜನಸಂಘಕ್ಕೆ ಸದಸ್ಯರಾಗಿ ರಾಜಕಾರಣಕ್ಕೆ ಪದಾರ್ಪಣೆ ಮಾಡಿದರು. ದೆಹಲಿ ಎಬಿವಿಪಿ ಘಟಕದಿಂದ ಮೇಲ್‌ ಸ್ತರಕ್ಕೆ ಏರುತ್ತಾ ೧೯೮೦ರಲ್ಲಿ ಬಿಜೆಪಿ ಕಾರ್ಯಕರ್ತರಾದರು.

ಅಸಮಾನ್ಯ ಪ್ರತಿಭೆಯ ರಾಜಕಾರಣಿ ಜೇಟ್ಲಿ ಬೋಫೋರ್ಸ್‌ ಹಗರಣ ಸೇರಿ ಅನೇಖ ಪ್ರಕರಣಗಳನ್ನ ಹೊರಹಾಕುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ, ೧೯೯೧ರಲ್ಲಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ, ೧೯೯೯ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ವಕ್ತಾರರಾಗಿ ಸೇವೆ ಸಲ್ಲಿಸಿದ್ದರು. ಎನ್‌ ಡಿ ಎ ಯಿಂದ ವಾಜಪೇಯಿ ಪ್ರಧಾನಿಯಾದಾಗ ಇವರಿಗೆ ಮಾಹಿತಿ ಹಾಗೂ ಪ್ರಸಾರ ಇಲಾಖೆ ಖಾತೆ ನೀಡಲಾಗಿತ್ತು, ನಂತರ ಕಾನೂನು ನ್ಯಾಯ ಮತ್ತು ಕಂಪನಿ ವ್ಯವಹಾರಗಳ ಸಚಿವರಾಗಿ ನೇಮಕ, ಸಾಗರೊತ್ತರ ಖಾತೆ ಸಚಿವ ( ಹೆಚ್ಚುವರಿ)ಯಾಗಿ ಹೀಗೆ ಅನೇಕ ಜವಾಬ್ದಾರಿಗಳನ್ನ ನಿರ್ವಹಿಸಿದ್ದರು.

Advertisement

ಅರುಣ್‌ ಜೇಟ್ಲಿ ಜಮ್ಮು ಕಾಶ್ಮೀರದ ವಿತ್ತ ಸಚಿವರಾಗಿದ್ದ ಗಿರ್ದಾರಿ ಡೋಗ್ರಾರ ಮಗಳು ಸಂಗೀತರನ್ನ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ, ಅವರೂ ಕೂಡ ವಕೀಲಿ ವೃತ್ತಿಯಲ್ಲಿದ್ದಾರೆ. ೨೦೧೮ರಲ್ಲಿ ಅರುಣ್‌ ಜೇಟ್ಲಿಗೆ ಕಿಡ್ನಿ ಸಂಬಂಧಿಸಿದ ರೋಗ ಬಾಧಿಸುತ್ತಿತ್ತು, ಏಮ್ಸ್‌ ನಲ್ಲೇ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು, ಡಯಾಬಿಟಿಸ್‌ ಜೊತೆಗೆ ಸಾಫ್ಟ್‌ ಟಿಶ್ಯೂ ಸರ್ಕೋಮ ಎಂಬ ವಿರಳ ಖಾಯಿಲೆ ಇನ್ನಷ್ಟು ಬಾಧಿಸಿತು.

ಗಣ್ಯರಿಂದ ಸಂತಾಪ

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ