Featured
ರಾಜ್ಯಕ್ಕೆ ಕೊರೊನಾ ಶಾಕ್: 9,894 ಹೊಸ ಕೇಸ್: 104 ಬಲಿ

ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು 9,894 ಹೊಸ ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 4,59,445ಕ್ಕೇ ಏರಿದೆ.
ಇನ್ನು ಆರ್ಭಟಿಸುತ್ತಿರುವ ಮಹಾಮಾರಿ ಕೊರೊನಾ ಭಾನುವಾರ ರಾಜ್ಯಾದ್ಯಂತ ಬರೋಬ್ಬರಿ 104 ಮಂದಿ ಬಲಿ ತೆಗೆದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ 19ಗೆ ಬಲಿಯಾದವರ ಸಂಖ್ಯೆ 7,265ಕ್ಕೆ ಏರಿದೆ.
ರಾಜ್ಯದಲ್ಲಿ 99,203 ಸಕ್ರಿಯ ಪ್ರಕರಣಗಳಿವೆ. ಐಸಿಯುವಿನಲ್ಲಿ 807 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಮಾಧಾನಕರ ವಿಚಾರವೆಂದರೆ 8,402 ಮಂದಿ ಭಾನುವಾರ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 3,52,958 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 3,479 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ 1,70,662ಕ್ಕೆ ಏರಿದೆ. ನಗರದಲ್ಲಿ ಭಾನುವಾರ 45 ಮಂದಿ ಕೊರೊನಾ ಹೊಡೆತಕ್ಕೆ ಕೊನೆಯುಸಿರೆಳೆದಿದ್ದಾರೆ.
ಈವರೆಗೂ ಬೆಂಗಳೂರಿನಲ್ಲಿ 2,436 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ನಗರದಲ್ಲಿ ಒಟ್ಟು41,093 ಸಕ್ರಿಯ ಪ್ರರಣಗಳಿವೆ. ಭಾನುವಾರ 3,270 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 1,27,132 ಮಂದಿ ಚೇತರಿಸಿಕೊಂಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?