Connect with us

Featured

ನಾವು ವೋಕಲ್ ಆಗೋದು ಲೋಕಲ್ ಆಗಿದ್ದಾಗ ಮಾತ್ರ: ನಾಗಾಭರಣ

ರೈಸಿಂಗ್​ ಕನ್ನಡ:

ಬೆಂಗಳೂರು :

ಬೆಂಗಳೂರಿನ ವಿಶ್ವಾಸ್ ಟೆಕ್ ಪ್ರೈವೆಟ್ ಲಿಮಿಟೆಡ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆ ಗೆಳೆಯ ವಿ-ಪೇ ಆಪ್ ಮತ್ತು ವಿ-ಕಾರ್ಡ್ ಅನ್ನು ಖ್ಯಾತ ನಿರ್ದೇಶಕ ಹಾಗೂ ಕನ್ನಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ಎಸ್. ನಾಗಾಭರಣ ಮತ್ತು ಅಂತಾರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡರ್ ರವಿ ಹಾಗೂ ಕವಿ ಹಾಗೂ ಸಾಹಿತಿ ದುಂಡಿರಾಜು ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ನಿರ್ದೇಶಕ ಟಿ.ಎಸ್.ನಾಗಾಭರಣ, ನಾವು ವೋಕಲ್ ಆಗೋದು ಲೋಕಲ್ ಆಗಿದ್ದಾಗ ಮಾತ್ರ. ನಾವು ನಮ್ಮತನವನ್ನು ಉಳಿಸಿಕೊಂಡಾಗ ಮಾತ್ರ ಅದು ನಮ್ಮನ್ನು ಮೀರಿ ಬೆಳೆಯುತ್ತಾ ಹೋಗುತ್ತೆ. ಇಲ್ಲಿ ರೈತರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಈ ವಿ-ಪೇ ಆಪ್ ಬಿಡುಗಡೆ ಮಾಡಲಾಗುತ್ತಿದೆ. ಆಗಾಗಿ ನಾವು ಕನ್ನಡದಲ್ಲೇ ವ್ಯವಹರಿಸಬೇಕಾಗುತ್ತದೆ. ಆಪ್ ನ ಮೂಲ ಭಾಷೆ ಕೂಡ ಕನ್ನಡವಾಗಿರಬೇಕು ಎಂದು ಸಲಹೆ ನೀಡಿದರು. ನಾನು, ನನ್ನದು ಎಂದು ಹೆಮ್ಮೆಯಿಂದ ಬಂದಾಗ ನನ್ನತನ ಉಳಿಯುತ್ತೆ. ಅದರ ಮುಖಾಂತರ ನಾವು ಇಡೀ ಪ್ರಚಂಚಕ್ಕೆ ಒಂದು ಮಾದರಿ ಇಡಬಹುದು. ನಮ್ಮ ಬಗ್ಗೆ ನಾವು ಹೆಮ್ಮೆ ಪಡೆದುಕೊಂಡಾಗ ಮಾತ್ರ ಪ್ರಪಂಚಕ್ಕೆ ಮಾದರಿ ಆಗಬಹುದು.

Advertisement

ವಿ-ಪೇ ಆಪ್ ಮತ್ತು ವಿ-ಕಾರ್ಡ್ ಉದ್ಘಾಟನೆಯ ಕ್ಷಣ
ಇಂದು ಬಿಡುಗಡೆ ಆಗಿರುವ ಆಪ್ ಇಡಿ ಭಾರತಕ್ಕೆ ಕೊಡುಗೆ ಆಗಬೇಕು. ನೀವು ದೊಡ್ಡ ಮಟ್ಟಕ್ಕೆ ಬೆಳೆಯಬೇಕು. ಇವತ್ತು ತಂತ್ರಾಂಶಗಳಲ್ಲಿ ಗಣಕತಂತ್ರಗಳಲ್ಲಿ ಕನ್ನಡವನ್ನು ಬಹಳ ಚೆನ್ನಾಗಿ ಬಳಸುತ್ತಿದ್ದೇವೆ. ಅದಕ್ಕೆ ಬೇಕಾದ ಎಲ್ಲ ರೀತಿಯ ಆಪ್ ಗಳು ರೆಡಿಯಾಗಿವೆ. ಯಾರಿಗೂ ಕೀಳರಿಮೆ ಬೇಡ, ಕನ್ನಡದಲ್ಲಿ ಎಲ್ಲವೂ ಆಗುತ್ತೆ. ನವೆಂಬರ್ ಒಂದರಿಂದ ಯುಆರ್ ಎಲ್ ಕೂಡ ಕನ್ನಡದಲ್ಲೇ ಬರಲಿದೆ ಎಂದು ಇದೇವೇಳೆ ತಿಳಿಸಿದರು.


ಸ್ಪರ್ಧೆ ಇಲ್ಲದ ಬದುಕಿಲ್ಲ. ಇಂತಹ ಸನ್ನಿವೇಶವನ್ನು ಒಂದು ಸವಾಲಾಗಿ ಸ್ವೀಕರಿಸಬೇಕು. ಆ ಸವಾಲನ್ನು ಅವಕಾಶವನ್ನಾಗಿ ಮಾರ್ಪಡಿಸಿಕೊಳ್ಳಬೇಕು, ಅಂತಹ ಅದ್ಭುತ ಅವಕಾಶ ನಿಮ್ಮೆಲ್ಲರಿಗೂ ಸಿಕ್ಕಿದೆ, ಅದನ್ನು ಬಳಸಿಕೊಂಡು ವಿಶ್ವಾಸ್ ವಿ-ಪೇ ರೈತರ ಮನೆಮನದಲ್ಲೂ ಮಾತಾದರೇ ತಾನೇತಾನಾಗಿ ಇಡೀ ಭಾರತಕ್ಕೆ ಮಾದರಿ ಆಗುತ್ತದೆ. ಅಂತಹ ಕೆಲಸ ನಿಮ್ಮದಾಗಲಿ ಎಂದು ಆಶಿಸಿದರು.


ಇನ್ನು ಈ ವಿ-ಪೇ ಸಂಸ್ಥೆಯ ಪ್ರತಿಯೊಬ್ಬ ಪ್ರತಿನಿಧಿ ಕೂಡ ನಿಮ್ಮ ನಿಮ್ಮ ರೈತರನ್ನ, ಕನ್ನಡಮನಸ್ಸುಗಳನ್ನು ಒಟ್ಟುಗೂಡಿಸಿದರೇ ವಿಶ್ವಾಸ್ ವಿ-ಪೇ ಪ್ರತಿಯೊಂದು ಮನೆಯನ್ನು ತಲುಪುತ್ತೆ, ಅದರ ಮುಖಾಂತರ ಅದು ನಿಜವಾದ ಭಾರತೀಯತೆಯನ್ನು ಹೇಳುತ್ತಾ ಹೋಗುತ್ತೆ. ಭಾರತೀಯತೆ ಅಂದ್ರೆ ಪ್ರತಿವೊಂದು ರಾಜ್ಯವೂ ತನ್ನತನವನ್ನ ಹೇಳಿದಾಗ ಅದು ಭಾರತೀಯತೆಯೇ ಆಗಿರುತ್ತೆ. ಎಲ್ಲ ಸಂಸ್ಕøತಿಗಳ ಆಗರ ಭಾರತ. ಭಾರತೀಯ ಪರಂಪರೆ ನಮಗೆ ತಿಳಿಸಿರುವಂತಹ ಗುರು ಕಾಣಿಕೆ ಏನಿದೆ, ಅದನ್ನ ನಾವೀಗ ಸಲ್ಲಿಸುತ್ತಿದ್ದೇವೆ. ಗುರು ಕಾಣಿಕೆ ಸಲ್ಲಿಸೋಕೆ ಇದೊಂದು ವೇದಿಕೆ ಸಜ್ಜಾಗಿದೆ. ವಿ-ಪೇ ಅನ್ನೋದು ವಿ ಅರ್ನ್ ಅನ್ನುವಾಗೇ ಆಗಲಿ, ವಿ-ಪೇ ಭಾರತಕ್ಕೆ ಮಾದರಿ ಆಗಲಿ ಎಂದು ಆಶಿಸಿದರು.

ಮುಖ್ಯವಾಗಿ ರೈತರು, ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುವಂತಹ ನಿಟ್ಟಿನಲ್ಲಿ ವಿ ಪೇ ಆಪ್ ಮತ್ತು ವಿ-ಕಾರ್ಡ್ ಅನ್ನು ಅಭಿವೃದ್ದಿಪಡಿಸಲಾಗಿದೆ. ವಿ ಪೇ- ಆಪ್ ಮುಖಾಂತರ ಹಣ ವರ್ಗಾವಣೆ, ಎಲ್ಲಾ ರೀತಿಯ ಮೊಬೈಲ್ ರಿಚಾರ್ಜ್, ಡಿಶ್ ರಿಚಾರ್ಜ್, ವಿದ್ಯುತ್ ಬಿಲ್ ಗಳನ್ನು ಪಾವತಿ ಮಾಡಬಹುದಾಗಿದೆ.
ಇನ್ನು ವಿ-ಕಾರ್ಡ್ ಮೂಲಕ ಗ್ರಾಹಕರು ಸದಸ್ಯತ್ವ ಕಾರ್ಡ್ ಅನ್ನು ಪಡೆದುಕೊಳ್ಳಬಹುದು.

ಸದಸ್ಯತ್ವ ಪಡೆದುಕೊಂಡವರಿಗೆ ಸಂಸ್ಥೆಯಿಂದ ಒಂದು ಸಾವಿರದಿಂದ ಹತ್ತು ಸಾವಿರದವರೆಗೆ ಕಡಿಮೆ ಬಡ್ಡಿ ದರದಲ್ಲಿ 24 ಗಂಟೆಯೊಳಗಡೆ ಸಾಲ ಸೌಲಭ್ಯವನ್ನು ಪಡೆಯಬಹುದಾಗಿದೆ. ಹಾಗೇ ರೈತ ವ್ಯವಸಾಯಕ್ಕೆ ಬಳಸುವ ಉಪಕರಣಗಳು, ಗೃಹ ಬಳಕೆಯ ವಸ್ತುಗಳು ಹಾಗೂ ಆಹಾರ ಪದಾರ್ಥಗಳ ಖರೀದಿಗೂ ವಿ ಪೇ ಆಪ್ ಮತ್ತು ವಿ-ಕಾರ್ಡ್ ಉಪಯೋಗವಾಗಲಿದೆ. ವಿ ಪೇ ಆಪ್ ಮತ್ತು ವಿ-ಕಾರ್ಡ್ ಮೂಲಕ ಖರೀದಿ ಮಾಡಿದಾಗ ಅತ್ಯಾಕರ್ಷಕ ರಿಯಾಯಿತಿಗಳನ್ನು ಪಡೆದುಕೊಳ್ಳಬಹುದಾಗಿದೆ.
ಪ್ರತಿ ತಾಲೂಕಿನಲ್ಲಿ ವಿ ಪೇ ಆಪ್ ಮತ್ತು ವಿ-ಕಾರ್ಡ್ ಫ್ರಾಂಚೈಸಿಗಳನ್ನು ಹೊಂದಿದೆ. ಈ ಫ್ರಾಂಚೈಸಿಗಳ ಮೂಲಕ ಗ್ರಾಹಕರು ವಿ ಪೇ ಆಪ್ ಮತ್ತು ವಿ-ಕಾರ್ಡ್ ಬಳಕೆ ಮಾಡುವುದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವಾಸ್ ಟೆಕ್ ಪ್ರೈವೆಟ್ ಲಿಮಿಟೆಡ್ ನ ಎಂಡಿ ಎನ್. ವಿಶ್ವ, ನಿರ್ದೇಶಕರಾದ ಸಂಗಮೇಶ್ ಮತ್ತು ಯಲ್ಲಪ್ಪ ಅವರು ಉಪಸ್ಥಿತರಿದ್ದರು.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಆಪ್ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ