ರೈಸಿಂಗ್ ಕನ್ನಡ:
ಬೀದರ್:
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭೇಟಿ ನೀಡಿ, ನೀರಿನ ಮಟ್ಟ ಪರೀಕ್ಷಿಸಿದರು. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ರೈತರ ಜೀವನಾಡಿ ಕಳೆದ ನಾಲ್ಕು ವರ್ಷಗಳ ಬಳಿಕ ಒಳ ಹರಿವು ಹೆಚ್ಚಾಗಿದೆ.
ಸುಮಾರು 7 TMC ಸಾಮರ್ಥ್ಯದ ಕಾರಂಜ ಜಲಾಶಯಕ್ಕೆ ಈಗ ಸುಮಾರು ಮೂರು ಟಿಎಂಸಿ ನೀರು ಹರಿದು ಬಂದಿದೆ. ಈ ಹಿನ್ನಲೆಯಲ್ಲಿ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಬಳಿಯ ಕಾರಂಜ ಜಲಾಶಯಕ್ಕೆ ಭಾಲ್ಕಿ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ್ ಖಂಡ್ರೆ ಹಾಗೂ ಜಿಲ್ಲಾಧಿಕಾರಿ ರಾಮಚಂದ್ರ ಆರ್, ಭೇಟಿ ನೀಡಿ ಪರಿಶಿಲನೆ ನಡೆಸಿ ನಂತರ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಕಾರ್ಯಾದ್ಯಕ್ಷ , ಪ್ರಸ್ತುತ ಕಾರಂಜ ಜಲಾಶಯದಲ್ಲಿ ಕಳೆದ ನಾಲ್ಕು ವರ್ಷಗಳ ಬಳಿಕ ಡ್ಯಾಂ ಭರ್ತಿಯಾಗುವ ನಿರೀಕ್ಷೆಯಿದೆ ಎಂದರು.
ಈಗಾಗಲೇ ಗೋದಾವರಿ ಬೆಸ್ ನಿಂದ ಬೀದರ್ ಜಿಲ್ಲೆಗೆ ಹಂಚಿಕೆಯಾಗಿದ್ದ ನೀರು ಬರಗಾಲದಲ್ಲಿ ಬಳಸಿಕೊಳ್ಳುವ ಬಗ್ಗೆಯು ಚರ್ಚೆ ಮಾಡಲಾಗಿದೆ,ಭಾಲ್ಕಿ ತಾಲೂಕಿನ ಮೇಹಕರ್ ಸಾಯಗಾಂವ್ ಬಳಿ ಏತ ನೀರಾವರಿಗೂ ಚರ್ಚೆ ಮಾಡಲಾಗಿದೆ 350 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಸ್ತಾವನೆ ಕಳಿಸಿದ್ದೇವೆ ಈ ಬೇಡಿಕೆ ಆಗಲೇ ಬೇಕೆಂದು ನಾವು ಪಟ್ಟು ಹಿಡಿದಿದ್ದೇವೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್