Featured
ಸದ್ಯ ಶಾಲಾ-ಕಾಲೇಜು ತೆರೆಯುವ ಚಿಂತನೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್

ರೈಸಿಂಗ್ ಕನ್ನಡ:
ಬೀದರ್:
ಸದ್ಯಕ್ಕೆ ಶಾಲಾ ಕಾಲೇಜುಗಳ ಆರಂಭಿಸುವ ಯಾವ ಚಿಂತನೆಯೂ ನಮ್ಮ ಮುಂದೆ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಬೀದರ್ ತಾಲೂಕಿನ ಯಾಕತಪೂರ ಗ್ರಾಮದಲ್ಲಿನ ಖಾಸಗಿ ಶಾಲೆಗೆ ಭೇಟಿ ನೀಡಿ ಶಾಲೆಯ ಗುಣಮಟ್ಟವನ್ನ ಪರಿಶೀಲಿಸಿ ಮಾತನಾಡಿದ ಶಿಕ್ಷಣ ಸಚಿವ ಸದ್ಯ ಕೋರೊನಾ ಹಿನ್ನಲೆ ರಾಜ್ಯದಲ್ಲಿ ಶಾಲೆ ಕಾಲೇಜುಗಳನ್ನ ಆರಂಭದ ದಿನಾಂಕವನ್ನ ಇನ್ನು ಯಾವುದೇ ನಿಶ್ಚಯ ಮಾಡಿಲ್ಲಾ ಮತ್ತು ಪೋಷಕರಲ್ಲಿ ಯಾವುದೇ ಆತಂಕ ಬೇಡ ಎಂದು ಹೇಳಿದರು.
ಹೆಮ್ಮಾರಿ ಕೊರೊನಾ ಭೀತಿ ಇರುವು ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳು ಆರಂಭದ ಬಗ್ಗೆ ಯಾವುದೇ ಚಿಂತನೆಯೂ ನಡೆದಿಲ್ಲಾ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಶಾಲೆ ಆರಂಭಿಸುವ ಬಗ್ಗೆ ರಾಜ್ಯದ ಎಲ್ಲಾ ಶಾಸಕರಿಗೆ ಮತ್ತು ಸಂಸದರಿಗೆ ಪತ್ರ ಬರೆದಿದ್ದೇನೆ ಅವರ ಅಭಿಪ್ರಾಯ ಕೇಳಿದ್ದೇನೆ ಎಂದರು.
ಒಂದು ವೇಳೆ ಶಾಲೆಯನ್ನ ಆರಂಭಿಸುವುದಾದರೆ ಯಾವ ಶಾಲೆಯನ್ನನ ಆರಂಭಿಸಬೇಕು, ಸಮುದಾಯದಿಂದ ಯಾವ ರೀತಿಯ ಬೆಂಬಲ ಸಿಗುತ್ತದೆ ಎಂಬ ಪ್ರಶ್ನೆಯನ್ನ ಕೇಳಿರುವುದಾಗಿ ತಿಳಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?