Featured
ಕರ್ನಾಟಕ ಸಾಬೂನು,ಮಾರ್ಜಕ ನಿಯಮಿತ ವತಿಯಿಂದ ನೆರೆ ಸಂತ್ರಸ್ಥರಿಗೆ 60 ಸಾವಿರ ಶುಚಿ ಕಿಟ್ ರವಾನೆ
ರೈಸಿಂಗ್ ಕನ್ನಡ:
ಬೆಂಗಳೂರು:
ಅತಿವೃಷ್ಠಿ ಮತ್ತು ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಉತ್ತರ ಕರ್ನಾ ಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಸಂತ್ರಸ್ಥರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ 60 ಸಾವಿರ ಶುಚಿ ಕಿಟ್ ಗಳನ್ನು ರವಾನಿಸಲಾಗಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿರ್ದೇಶನದಂತೆ ಹಾಗೂ ಮೈಸೂರು ಸ್ಯಾಂಡಲ್ ಸೋಪ್ಸ್ (ಕೆಎಸ್& ಡಿಎಲ್)ಕರ್ನಾಟಕ ಸೋಪು ಮತ್ತು ಮಾರ್ಜಕ ನಿಯಮಿತ ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರ ಸೂಚನೆ ಮೇರೆಗೆ 60 ಸಾವಿರ ಕಿಟ್ ಗಳನ್ನು ಪ್ಯಾಕಿಂಗ್ ಮಾಡಿ ಸರಬರಾಜು ಮಾಡಲಾಗಿದೆ.ಕಿಟ್ ಗಳನ್ನು 2 ಲಾರಿಗಳಲ್ಲಿ ಕಲಬುರಗಿ,ಯಾದಗಿರಿ,ಹಾಗೂ ಬೀದರ್ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ರವಾನಿಸಲಾಗಿದೆ.
ಗುರುವಾರ ಸಂಜೆ ಕಿಟ್ ಗಳನ್ನು ಹೊತ್ತ ಲಾರಿಗಳು ಕಲಬುರಗಿ,ಯಾದಗಿರಿ ಹಾಗೂ ಬೀದರನತ್ತ ತೆರಳಿದವು. ಗುರುವಾರ ಮಧ್ನಾಹ್ನದ ವೇಳೆಗೆ ಕಿಟ್ ಗಳನ್ನು ಆಯಾಯ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸುವ ಕಾರ್ಯ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿಗಳು ಸಂತ್ರಸ್ಥರ ಕುಟುಂಬಗಳಿಗೆ ಶುಚಿ ಕಿಟ್ ಗಳನ್ನು ವಿತರಣೆ ಮಾಡಲಿದ್ದಾರೆ.
ಶುಚಿ ಕಿಟ್ನಲ್ಲಿ ಒಂದು ಮೈಸೂರು ಸ್ಯಾಂಡಲ್ ಸೋಪ್,ಎರಡು ಡಿಟರ್ಜೆಂಟ್ ಸೋಪ್ (ಬಟ್ಟೆ ತೊಳೆ ಯುವ ಸೋಪ್),50 ಎಂಎಲ್ ಕೊಬ್ಬರಿ ಎಣ್ಣೆ,ಪೇಸ್ಟ್ ಮತ್ತು ಒಂದು ಬ್ರಷ್ ಒಳಗೊಂಡಿದೆ.ಶುಚಿ ಕಿಟ್ ಮೊತ್ತ 98 ರೂ.ಗಳಾಗಿದ್ದು ಅಂದಾಜು 60 ಲಕ್ಷರೂ ಮೊತ್ತದ ಕಿಟ್ ಗಳನ್ನು ಪೂರೈಕೆ ಮಾಡಲಾಗಿದೆ.
ನೆರೆ ಮತ್ತು ಅತಿವೃಷ್ಠಿ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಿಂದ ಪೂರೈಕೆ ಮಾಡಲಾಗಿದೆ.ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ದಿನ ನಿತ್ಯದ ಬಳಕೆಗೆ ಅಗತ್ಯವಾದ ಡಿಟರ್ಜೆಂಟ್,ಸಾಂಕ್ರಾಮಿಕ ರೋಗ ನಿಯಂತ್ರಕ ಪೌಡರ್ ಗಳು,ಕ್ಲೀನಿಂಗ್ ಹಾಗೂ ಸ್ಯಾನಿಟೈಸರ್ ,ಇತರೆ ವಸ್ತುಗಳನ್ನು ಸರಬರಾಜು ಮಾಡಲು ಕೆಎಸ್ ಡಿಎಲ್ ಸಿದ್ದವಿದೆ ಎಂದು ನಿಗದಮ ಅಧ್ಯಕ್ಷರಾದ ಮಾಡಾಳ್ ವಿರೂಪಾಕ್ಷಪ್ಪ ಭರವಸೆ ನೀಡಿದ್ದಾರೆ.
ಗುರುವಾರ ಸಂಜೆ ಎರಡು ಲಾರಿಗಳಲ್ಲಿ 8 ಸಾವಿರ ಬಾಕ್ಸ್ ಗಳಿಗೆ ಶುಚಿ ಕಿಟ್ ಗಳನ್ನು ಪ್ಯಾಕಿಂಗ್ ಮಾಡಿದ ಲಾರಿಗಳು ಕಲಬುರಗಿ ಹಾಗೂ ಬೀದರ್ ನತ್ತ ಪ್ರಯಾಣ ಬೆಳೆಸಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?