Connect with us

Featured

ಅನಧಿಕೃತ ಕಲ್ಲು ಗಣಿಗಾರಿಕೆ ಮುಂದುವರಿಸುವವರ ಗಡಿಪಾರು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆಯನ್ನು ಹಲವು ಬಾರಿ ದಾಳಿ ನಡೆಸಿ ಸ್ಥಗಿತಗೊಳಿಸಿದ್ದರೂ, ಮತ್ತೆ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂತಹ ವ್ಯಕ್ತಿಗಳ ವಿರುದ್ಧ ಗಡಿಪಾರು ಸೇರಿದಂತೆ ಕುರಿತು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮರಳು ಸಮಿತಿ ಸಭೆಯಲ್ಲಿ ಈ ಕುರಿತು ಸೂಚನೆಗಳನ್ನು ನೀಡಿದರು.

ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿರುವ ವಲಯಗಳಲ್ಲಿ ಕ್ರಶರ್, ಕ್ವಾರಿ ಸೇರಿದಂತೆ ಗಣಿಗಾರಿಕೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಅಕ್ರಮ ಗಣಿಗಾರಿಕೆ ಕ್ವಾರಿಗಳ ಮೇಲೆ ದಾಳಿ ನಡೆಸಿ ಕ್ರಮಗಳನ್ನು ಕೈಗೊಂಡಿದ್ದರೂ, ಹಲವು ಮಂದಿ ಅದೇ ಕೃತ್ಯವನ್ನು ಮುಂದುವರೆಸಿರುವುದು ಗಮನಕ್ಕೆ ಬಂದಿದೆ. ಅಂತಹ ವ್ಯಕ್ತಿಗಳನ್ನು ಗುರುತಿಸಿ ಭಾರೀ ಪ್ರಮಾಣದ ದಂಡ ವಿಧಿಸುವುದು ಮಾತ್ರವಲ್ಲದೆ ಗಡಿಪಾರು ಮಾಡಲು ಪ್ರಸ್ತಾವನೆಗಳನ್ನು ಸಲ್ಲಿಸಬೇಕು. ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಈ ಕಾರ್ಯವನ್ನು ಮಾಡುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

Advertisement

ಹೊರ ಜಿಲ್ಲೆ ಸಾಗಾಣಿಕೆಗೆ ಅವಕಾಶವಿಲ್ಲ: ಜಿಲ್ಲೆಯಲ್ಲಿ ಮರಳನ್ನು ಬೇರೆ ಜಿಲ್ಲೆಗಳಿಗೆ ಸಾಗಾಟ ಮಾಡಲು ಅವಕಾಶ ನೀಡಲು ಸಾಧ್ಯವಿಲ್ಲ. ಈಗಾಗಲೇ ಜಪ್ತಿ ಮಾಡಲಾಗಿರುವ ಮರಳು, ಜಂಬಟಿಗೆ ಇತ್ಯಾದಿಗಳನ್ನು ಸರ್ಕಾರದ ನಿರ್ಮಾಣ ಏಜೆನ್ಸಿಗಳಿಗೆ ಬಳಕೆಗಾಗಿ ನೀಡಬಹುದಾಗಿದೆ. ಸರ್ಕಾರದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಮನೆಗಳನ್ನು ನಿರ್ಮಿಸುವ ಫಲಾನುಭವಿಗಳಿಗೆ ಸಹ ಅಂತಹ ಮರಳನ್ನು ನೀಡಬಹುದಾಗಿದೆ ಎಂದರು.

ಹೊಸನಗರ ತಾಲೂಕಿನ ಮಣಶೆಟ್ಟಿ ಗ್ರಾಮದ ಶರಾವತಿ ಹಿನ್ನೀರಿನ ಕೆ.ಪಿ.ಸಿ.ಎಲ್ ಜಮೀನಿನಲ್ಲಿ ಅನಧಿಕೃತವಾಗಿ ಶೇಖರಣೆ ಮಾಡಲಾಗಿದ್ದ ಸುಮಾರು 7500 ಮೆ.ಟನ್ ಸಾದಾ ಮರಳನ್ನು ವಶಪಡಿಸಿಕೊಳ್ಳಲಾಗಿದ್ದು, ಅದನ್ನು ನಿಯಮಾನುಸಾರ ಸರ್ಕಾರಿ ಕಾಮಗಾರಿಗಳಿಗೆ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಮರಳು ಕೊರತೆ ಇಲ್ಲ: ಸರ್ಕಾರದ ವಿವಿಧ ಯೋಜನೆಗಳ ಅನುಷ್ಟಾನಕ್ಕೆ ಮರಳಿನ ಕೊರತೆ ಇರುವುದಿಲ್ಲ. ಕೆಲವು ಇಲಾಖೆಗಳಿಗೆ ಪ್ರತ್ಯೇಕ ಮರಳಿನ ಬ್ಲಾಕ್‍ಗಳನ್ನು ಗುರುತಿಸಿ ನೀಡಲಾಗಿದ್ದು, ಖಾಸಗಿ ಮರಳಿನ ಬ್ಲಾಕ್‍ಗಳಲ್ಲಿ ಸಹ ಸರ್ಕಾರಿ ಇಲಾಖೆಗಳಿಗೆ ಕೋಟಾ ನಿಗದಿಪಡಿಸಲಾಗಿದೆ. ಈ ಮರಳನ್ನು ಇಲಾಖೆಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ತಾಲೂಕು ಮಟ್ಟದ ಅಧಿಕಾರಿಗಳಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿ ಅವರು ಮಾಹಿತಿಯನ್ನು ಪಡೆದುಕೊಂಡರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಡಿಷನಲ್ ಎಸ್ಪಿ ಎಚ್.ಟಿ.ಶೇಖರ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಿರಿಯ ಭೂವಿಜ್ಞಾನಿ ರಶ್ಮಿ ಉಪಸ್ಥಿತರಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ