ಭವಿಷ್ಯ : ನೀವು ಇಂದು ಕೈಗೊಳ್ಳುವ ಯಾವುದೇ ಕೆಲಸಕಾರ್ಯಗಳು ಚೆನ್ನಾಗಿರಬೇಕು ಎಂದರೆ ನಿಮ್ಮ ರಾಶಿಫಲ ಚೆನ್ನಾಗಿರಬೇಕು. ಒಂದಷ್ಟು ಮಂದಿ ರಾಶಿಭವಿಷ್ಯ ತಿಳಿದುಕೊಂಡೇ ಮುಂದಿನ ಹೆಜ್ಜೆ ಇಡುತ್ತಾರೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ ಫೆಬ್ರವರಿ 06ರ ನಿಮ್ಮ ಭವಿಷ್ಯ ಹೀಗಿದೆ ನೋಡಿ.
ರಾಶಿ ಭವಿಷ್ಯ (Horoscope Today) ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಫೆಬ್ರವರಿ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.
ಧನು ರಾಶಿ: ಇಂದು ನಿಮ್ಮ ಆದಾಯವನ್ನು ಹೆಚ್ಚಿಸಲು ನಿಮ್ಮ ಪ್ರಯತ್ನಗಳನ್ನು ತೀವ್ರಗೊಳಿಸಬೇಕಾಗುವುದು. ನಿಮ್ಮ ಯಾವುದೇ ಸಂಬಂಧದ ಜೊತೆ ರಾಜಿ ಮಾಡಿಕೊಳ್ಳಲು ಹೋಗಬಹುದು. ಅವಿವಾಹಿತರ ಜೀವನದಲ್ಲಿ ಹೊಸ ಅತಿಥಿಯ ಆಗಮನದ ನಿರೀಕ್ಷೆಯು ಇರುವುದು. ನಿಮ್ಮ ಆಪ್ತರ ಜೊತೆ ಸ್ವಲ್ಪ ಸಮಯ ಮೋಜು ಮಾಡುತ್ತೀರಿ. ಆಧ್ಯಾತ್ಮದಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ. ಸ್ಪರ್ಧೆಯ ವಿಷಯದಲ್ಲಿ ಮುನ್ನುಗ್ಗುವ ಸ್ವಭಾವವು ಇರಲಿದೆ. ಪ್ರೀತಿಪಾತ್ರರ ಜೊತೆ ನಿಮ್ಮ ಆಪ್ತತೆ ಹೆಚ್ಚಾಗಬಹುದು. ದೂರ ಪ್ರಯಾಣವನ್ನು ನೋವು ಹೆಚ್ಚು ಇಷ್ಟಪಡುವಿರಿ.
ಕುಂಭ ರಾಶಿ: ಬಹಳ ದಿನಗಳ ನಿಮ್ಮ ಪ್ರಯತ್ನಕ್ಕೆ ಫಲವು ಸಿಗಲಿದೆ. ಮಾತಿನಿಂದ ನಿಮಗೆ ಕೆಲವು ಬಂಧಗಳು ಕಳಚಿಕೊಳ್ಳಬಹುದು. ಇಂದು ನೀವು ವಿಶ್ರಾಂತಿ ಪಡೆಯುವುದಿಲ್ಲ. ಕೌಟುಂಬಿಕ ಕಲಹದಿಂದಾಗಿ ನಿಮ್ಮ ತಲೆನೋವು ಇರುತ್ತದೆ. ಇದರಿಂದ ನೀವು ಯಾವುದೇ ಕೆಲಸ ಮಾಡಲು ಬಯಸುವುದಿಲ್ಲ. ವ್ಯಾಪಾರ ಮಾಡುವ ಜನರ ಜೊತೆ ಸೇರಿ ಕೆಲವು ಕೆಲಸಗಳನ್ನು ಮಾಡಲು ಅವಕಾಶವಿದೆ. ನೀವು ಆನ್ಲೈನ್ ಶಾಪಿಂಗ್ ನಿಂದ ಏನಾದರೂ ನಿಮ್ಮಿಂದ ತಪ್ಪಾಗಬಹುದು. ನೀವು ಎಣಿಸಿದ್ದನ್ನು ಬಂಧುಗಳು ಮಾಡಿಕೊಡುವರು. ನಿಮ್ಮ ವಿನಂತಿಯನ್ನು ಯಾರೂ ಪುರಸ್ಕರಿಸದೇ ಇರಬಹುದು. ನಿಮಗೆ ಬೇರೆ ಬೇರೆ ಮೂಲಗಳಿಂದ ಸಂಪಾದನೆಗೆ ಇಂದು ಅವಕಾಶಗಳು ಸಿಗುವುದು.ಯುವಿರಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು.
ಮಕರ ರಾಶಿ: ಇಂದು ನೀವು ನಿಯಮಗಳ ಉಲ್ಲಂಘನೆಗೆ ಪ್ರಾಶಸ್ತ್ಯ ಕೊಡುವುದು ಬೇಡ. ನಿಮ್ಮ ಆದಾಯ ಮತ್ತು ಖರ್ಚುಗಳನ್ನು ನೀವು ಸಮವಲ್ಲದಿದ್ದರೂ ತೊಂದರೆಯಾಗದಂತೆ ನಿಭಾಯಿಸುವಿರಿ. ಅದು ನಿಮಗೆ ಒಳ್ಳೆಯದು. ಇಲ್ಲವಾದರೆ ಹೆಚ್ಚುತ್ತಿರುವ ಖರ್ಚುಗಳ ಬಗ್ಗೆ ನೀವು ಚಿಂತೆ ಮಾಡುತ್ತೀರಿ. ಕುಟುಂಬದಲ್ಲಿನ ಸಣ್ಣ ತಪ್ಪುಗಳನ್ನು ನೀವು ಉದಾತ್ತತೆಯಿಂದ ಕ್ಷಮಿಸಬಿಡಿ. ಅದನ್ನು ದೊಡ್ಡ ಮಾಡಿಕೊಂಡು ಮಾನಸಿಕವಾಗಿ ನೋಯುವುದು ಬೇಡ. ಪಾಲುದಾರಿಕೆಯಲ್ಲಿ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಹಣಿಸುವಿರಿ.
ಮೀನ ರಾಶಿ: ನಿಮ್ಮ ಒಳ್ಳೆಯ ಅಭ್ಯಾಸಗಳು ನಿಮಗೆ ಉಪಯೋಗಕ್ಕೆ ಬರಲಿವೆ. ನೀವು ಕ್ರಿಯಾ ಯೋಜನೆಯನ್ನು ತಯಾರಿಸಿದರೆ ಯಶಸ್ಸಿಗೆ ಸಮೀಪವಾಗುವಿರಿ. ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವವರು ತಮ್ಮ ಪ್ರಯತ್ನಗಳಲ್ಲಿ ಯಾವುದೇ ಸಡಿಲಿತೆ ಬೇಡ. ನೀವು ಅಪರಿಚಿತರೊಂದಿಗೆ ಜಾಗರೂಕರಾಗಿರಬೇಕು. ಎಸೆದ ಕಲ್ಲನ್ನು ಮೆಟ್ಟಿಲು ಮಾಡಿಕೊಳ್ಳುವುದನ್ನು ಕಲಿಯಬೇಕುಶವನ್ನು ಪಡೆಯುವಿರಿ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?