Connect with us

ರಾಜಕೀಯ

SC/ST ಉದ್ಯಮಿಗಳನ್ನ ಕಡೆಗಣಿಸ್ತಾ ಸರ್ಕಾರ.?

ಬೆಂಗಳೂರು : ದಲಿತರ ಪರವಾಗಿ ಸರಕಾರ ವಿವಿಧ ಯೋಜನೆಗಳನ್ನು ರೂಪಿಸಿದರೂ ಅನುಷ್ಠಾನಕ್ಕೆ ಬರುತ್ತಿಲ್ಲ. ಇನ್ನು ದಲಿತ ಉದ್ದಿಮೆದಾರರಿಗೆ ಮೀಸಲಾದ ಸ್ಥಳವನ್ನು ಅಧಿಕಾರಿಗಳು ಉಳ್ಳವರಿಗೆ ನೀಡುವ ಮೂಲಕ ದಲಿತರನ್ನು ಬಡವರಾಗಿಯೇ ಉಳಿಸುತ್ತಿದ್ದಾರೆ ಎಂದು ದಲಿತ ಉದ್ಯಮಿಗಳು ತಮ್ಮ ಬೇಸರ ವ್ಯಕ್ತಪಡಿಸಿದರು..ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಎಸ್ಡಿ ಎಸ್ಸಿ ಉದ್ಯಮಿಗಳು ಸುದ್ದಿಗೋಷ್ಟಿ ನಡೆಸಿ ದಲಿತ ಸಮುದಾಯದ ಉದ್ದಿಮೆದಾರರು ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಬಿಚ್ಚಿಟ್ಟರು.

ನಮ್ಮ ಹೋರಾಟದ ಫಲವಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ದಲಿತ ಉದ್ದಿಮೆದಾರರಿಗೆ ಶೇ.22.65ರಷ್ಟು ನಿವೇಶನ ಮೀಸಲಿಟ್ಟಿದೆ. ಆದರೆ, ಆ ಪ್ರಕಾರವಾಗಿ ಹಂಚಿಕೆಯಾಗುತ್ತಿಲ್ಲ. ಹಂಚಿಕೆಯಾಗಬೇಕಾದ ಜಾಗ ಉಳ್ಳವರ ಪಾಲಾಗುತ್ತಿದ್ದು, ಕನಿಷ್ಟ ಪರ್ಯಾಯ ಸ್ಥಳವನ್ನು ಗುರುತಿಸುವುದಕ್ಕೂ ಅಧಿಕಾರಿಗಳು ಮುಂದಾಗುತ್ತಿಲ್ಲ.

ಪರಿಸ್ಥಿತಿ ಇದೇ ರೀತಿ ಮುಂದುವರಿದಲ್ಲಿ ದಲಿತ ಉದ್ದಿಮೆದಾರರು ಅಭಿವೃದ್ಧಿ ಹೊಂದುವುದು ಹೇಗೆ?’ ಎಂದು ಪ್ರಶ್ನಿಸಿದರು.ದಲಿತರ ಪರವಾಗಿ ಸರಕಾರ ವಿವಿಧ ಯೋಜನೆಗಳನ್ನು ರೂಪಿಸಿದರೂ ಅಧಿಕಾರಶಾಹಿ ಅದನ್ನು ಅನುಷ್ಠಾನಕ್ಕೆ ತರಲು ಅವಕಾಶ ನೀಡದೇ ಇರುವುದರಿಂದ ದಲಿತರ ಅಭಿವೃದ್ಧಿಗೆ ಕಂಟಕವಾಗಿದೆ’ ಎಂದು ದಲಿತ ಸಮುದಾಯದ ಉದ್ದಿಮೆದಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ದಲಿತರ ಪರವಾಗಿ ಎಲ್ಲ ಸರ್ಕಾರಗಳು ಯೋಜನೆಗಳನ್ನು ರೂಪಿಸಿವೆ. ಇದರಲ್ಲಿ ರಾಜಕೀಯ ವ್ಯಕ್ತಿಗಳ ತಪ್ಪಿಲ್ಲ. ಇದನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕಾದ ಅಧಿಕಾರಿಗಳು ಕಾಲಹರಣ ಮಾಡುತ್ತಾ, ಉದ್ಯಮಿಗಳ ಶಕ್ತಿ ಕುಂದಿಸುತ್ತಿದ್ದಾರೆ.ಕೆಐಎಡಿಬಿ ಯಿಂದ ಭೂಮಿ ಮೀಸಲಾತಿಯಲ್ಲಿ ನಿಯಮ ಉಲ್ಲಂಘನೆ ಮಾಡ್ತಿದೆ.ST -SC ಗೆ ಮೀಸಲಿಟ್ಟ ಸಾವಿರಕ್ಕೂ ಹೆಚ್ಚು ಎಕರೆ ಭೂಮಿ ಇತರರಿಗೆ ಹಂಚಿಕೆ ಮಾಡಲಾಗಿದೆ..ಕೂಡಲೇ ವಾಪಸು ಪಡೆಯಬೇಕು.ಜೊತೆಗೆ ರಾಜ್ಯ ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಹೆಚ್ಚು ಅನುದಾನ ನೀಡಬೇಕೆಂದು ಅಂತ ಕರ್ನಾಟಕ ದಲಿತ ಉದ್ದಿಮೆದಾರರ ಸಂಘ ಕಾರ್ಯಧ್ಯಕ್ಷ ಸಿ. ಜಿ. ಶ್ರೀನಿವಾಸನ್‌ ಒತ್ತಾಯಿಸಿದರು.

Advertisement

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ