Connect with us

ಸಿನಿಮಾ

5 ವರ್ಷಗಳಲ್ಲಿ 3 ಪಟ್ಟು ಹೆಚ್ಚಾಯ್ತಾ ದರ್ಶನ್ ಸಂಭಾವನೆ..?

ಸಿನಿಮಾ : ಚಾಲೆಂಗಿಂಗ್ ಸ್ಟಾರ್ ದರ್ಶನ್ ಕನ್ನಡ ಚಿತ್ರರಂಗದಲ್ಲಿ ಅತಿದೊಡ್ಡ ಅಭಿಮಾನಿ ಬಳಗ ಹೊಂದಿರುವ ನಟ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ದರ್ಶನ್ ನಟಿಸುತ್ತಿದ್ದಾರೆ. ಇತ್ತೀಚೆಗೆ ಡಿಜಿಟಲ್, ಸ್ಯಾಟಲೈಟ್ ರೈಟ್ಸ್ ಅಂತೆಲ್ಲಾ ಅವರ ಸಿನಿಮಾಗಳು ಭರ್ಜರಿ ಬ್ಯುಸಿನೆಸ್ ಮಾಡ್ತಿವೆ. ಅದಕ್ಕೆ ತಕ್ಕಂತೆ ದರ್ಶನ್ ಸಂಭಾವನೆ ಕೂಡ ಚಿತ್ರದಿಂದ ಚಿತ್ರಕ್ಕೆ ಹೆಚ್ಚಾಗುತ್ತಿದೆ.

ರಾಬರ್ಟ್ ಚಿತ್ರಕ್ಕೆ ದಿಡೀರನೆ ದರ್ಶನ್ ಸಂಭಾವನೆ ಹೆಚ್ಚಾಗಿತ್ತು ಎನ್ನಲಾಗುತ್ತಿದೆ. ಗಾಂಧಿನಗರದ ಗುಸುಗುಸು ಪ್ರಕಾರ ಸದ್ಯ ದರ್ಶನ್ ಕಾಲ್​ಶೀಟ್ ಬೇಕು ಅಂದ್ರೆ ನಿರ್ಮಾಕರ ಗುಂಡಿಗೆ ಗಟ್ಟಿ ಇರಬೇಕು. ಹೀರೊಗೆ ಅಷ್ಟು ದೊಡ್ಡ ಮೊತ್ತದ ಸಂಭಾವನೆ ಕೊಟ್ಟು ಬಹಳ ಗ್ಯ್ರಾಂಡ್ ಆಗಿ ಸಿನಿಮಾ ನಿರ್ಮಿಸಿ, ಪ್ರಮೋಷನ್ ಮಾಡಿ ರಿಲೀಸ್ ಮಾಡುವುದು ಅಷ್ಟು ಸುಲಭದ ಮಾತಲ್ಲ. ಆದರೆ ಹಾಕಿದರೂ ಮರಳಿ ಬರುತ್ತದೆ ಎನ್ನುವ ಲೆಕ್ಕಾಚಾರ ನಡೀತಿದೆ.

ಯಜಮಾನ , ಕುರುಕ್ಷೇತ್ರ, ರಾಬರ್ಟ್ , ಕ್ರಾಂತಿ, ಕಾಟೇರ ಹೀಗೆ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ದರ್ಶನ್ ನಟಿಸಿದ್ದಾರೆ. ಅದಕ್ಕೆ ತಕ್ಕಂತೆ ಸಂಭಾವನೆ ಕೂಡ ಹೆಚ್ಚಿಕೊಂಡಿದ್ದಾರೆ ಎನ್ನುವ ಚರ್ಚೆ ನಡೀತಿದೆ. ಕೆಲವರ ಪ್ರಕಾರ ಕಳೆದ 5 ವರ್ಷಗಳಲ್ಲಿ ದರ್ಶನ್ ಸಂಭಾವನೆ 3 ಪಟ್ಟು ಹೆಚ್ಚಾಗಿದೆ . ಸದ್ಯ ಡೆವಿಲ್ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ನಟಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ಭಾರೀ ಮೊತ್ತದ ಸಂಭಾವನೆ ಪಡೆದಿರುವ ಬಗ್ಗೆ ಚರ್ಚೆ ನಡೀತಿದೆ.

ಕನ್ನಡ ಚಿತ್ರರಂಗದ ಓಡುವ ಕುದುರೆ ದರ್ಶನ್ ಸಿನಿಮಾ ಚೆನ್ನಾಗಿದ್ಯೋ ಚೆನ್ನಗಿಲ್ಯೋ ಗೊತ್ತಾಗುವ ಮುನ್ನ ಭರ್ಜರಿ ಓಪನಿಂಗ್ ಅಂತೂ ಸಿಕ್ಕಿ ಬಿಡುತ್ತದೆ. ಇನ್ನು ಸಿನಿಮಾ ಚೆನ್ನಾಗಿದ್ದರೆ ಮುಗಿದೇ ಹೋಯ್ತು . ಕಾಟೇರ ಸಿನಿಮಾ 200 ಕೋಟಿ ರೂ.ಗೂ. ಅಧಿಕ ಗ್ರಾಸ್ ಕಲೆಕ್ಷನ್ ಮಾಡಿದ್ದಾಗಿ ಹೇಳಲಾಗಿತ್ತು. ಆ ಲೆಕ್ಕದಲ್ಲಿ ಸಹಜವಾಗಿಯೇ ಬಾಕ್ಸಾಫೀಸ್ ಸುಲ್ತಾನ್ ಸಂಭಾವನೆ ಹೆಚ್ಚಾಗುತ್ತದೆ. ಒಡೆಯ ಸಿನಿಮಾವರೆಗೂ ದರ್ಶನ್ ಸಂಭಾವನೆ ಐದೂವರೆ ಕೋಟಿ ರೂ. ಇತ್ತಂತೆ. ಆದರೆ ರಾಬರ್ಟ್ ಚಿತ್ರಕ್ಕೆ ಅದು ಹೆಚ್ಚು ಕಡಿಮೆ ಡಬಲ್ ಆಗಿತ್ತು.

ಉಮಾಪತಿ ಶ್ರೀನಿವಾಸ್ ದೊಡ್ಡಮಟ್ಟದಲ್ಲಿ ರಾಬರ್ಟ್ ಸಿನಿಮಾ ಮಾಡಿದ್ದರು. ಅದಕ್ಕೆ ತಕ್ಕಂತೆ ಕಲಾವಿದರು, ತಂತ್ರಜ್ಞಾನರಿಗೆ ಸಂಭಾವನೆ ಕೊಟ್ಟಿದ್ದರು. ಆ ಚಿತ್ರದಲ್ಲಿ ದರ್ಶನ್ ಎರಡು ಶೇಡ್​ಗಳಿರುವ ಪಾತ್ರದಲ್ಲಿ ಸೊಗಸಾಗಿ ನಟಿಸಿ ಗೆದ್ದಿದ್ದರು. ಕೊರೊನಾ ಲಾಕ್​ಡೌನ್ ಬಳಿಕ ಬಂದ ದೊಡ್ಡ ಸಿನಿಮಾಗಳಲ್ಲಿ ಥಿಯೇಟರ್​ಗಳಿಗೆ ಸಿನಿಮಾ ಭರ್ಜರಿ ಕಲೆಕ್ಷನ್  ಮಾಡಿತ್ತು. ರಾಬರ್ಟ್ ಚಿತ್ರಕ್ಕಾಗಿ ದರ್ಶನ್ 9 ಕೋಟಿ.ರೂ. ರೆಮ್ಯೂನರೇಷನ್ ಪಡೆದುಕೊಂಡಿದ್ದರು ಎನ್ನಲಾಗುತ್ತದೆ.

Advertisement

ರಾಬರ್ಟ್ ಬಳಿಕ ಕ್ರಾಂತಿ ಸಿನಿಮಾ ತೆರೆಗೆ ಬಂದಿತ್ತು ಚಿತ್ರಕ್ಕೆ ಮಿರ್ಶಪ್ರಕ್ರಿಯೆ ಸಿಕ್ಕರೂ ಸಿನಿಮಾ ಒಳ್ಳೆ ಬ್ಯೂಸಿನೆಸ್ ಮಾಡಿದ್ದಾಗಿ ನಿರ್ಮಾಪಕರೇ ಘೋಷಣೆ ಮಾಡಿದ್ದರು. ಆ ಚಿತ್ರಕ್ಕೂ ದರ್ಶನ್​ಗೆ ಒಳ್ಳೆ ಸಂಭಾವನೆ ಸಿಕ್ಕಿತ್ತು. ಸದ್ಯ ಕಾಟೇರ ಚಿತ್ರದಲ್ಲಿ 12 ಕೋಟಿ ರೂ. ವರೆಗೂ ದರ್ಶನ್ ಪಡೆದಿರುವುದಾಗಿ ಹೇಳಲಾಗುತ್ತಿದೆ. ಕಾಟೇರ ಆರ್ಭಟ ಹೇಗಿತ್ತು? ಸಿನಿಮಾ ನಿರ್ಮಾಣ ಮಾಡಿ ಭರ್ಜರಿ ಸಕ್ಸಸ್ ಕಂಡಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ