ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭೆ ಚುನಾವಣೆ ಕೂಡ ನಡೆಯಲಿದೆ. ಇದಕ್ಕಾಗಿ ತೆಲುಗು ದೇಶಂ ಮತ್ತು ಜನಸೇನಾ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಇಷ್ಟಾದರೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿರಲಿಲ್ಲ. ಆದರೆ, ಟಿಡಿಪಿ ಅಧಿನಾಯಕ ಚಂದ್ರಬಾಬು ನಾಯ್ಡು, ಜನಸೇನಾ ಸ್ಥಾಪಕ ಪವನ್ ಕಲ್ಯಾಣ್ 118 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. 118 ಕ್ಷೇತ್ರಗಳಲ್ಲಿ ಟಿಡಿಪಿ 94ರಲ್ಲಿ ಸ್ಪರ್ಧೆ ಮಾಡಲಿದ್ದು, 24 ಕ್ಷೇತ್ರಗಳಲ್ಲಿ ಜನಸೇನಾ ಅಭ್ಯರ್ಥಿಗಳು ಅಖಾಡಕ್ಕೆ ಇಳಿಯಲಿದ್ದಾರೆ. ಉಳಿದ 67 ಕ್ಷೇತ್ರಗಳಿಗೆ ಶೀಘ್ರವೇ ಅಭ್ಯರ್ಥಿಗಳ ಹೆಸರು ಫೈನಲ್ ಮಾಡುವುದಾಗಿ ಇಬ್ಬರು ಘೋಷಿಸಿದ್ದಾರೆ.
ಬಿಜೆಪಿಯನ್ನು ಗಮನದಲ್ಲಿಟ್ಟುಕೊಂಡು ಟಿಡಿಪಿ-ಜೆಎಸ್ಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿವೆ. ಈಗಾಗಲೇ ಬಿಜೆಪಿ ಜೊತೆ ಮೈತ್ರಿಗೆ ಚಂದ್ರಬಾಬು ನಾಯ್ಡು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಹೀಗಾಗಿಯೇ ಬಿಜೆಪಿಗೂ ಸ್ಥಾನಗಳನ್ನು ಹಂಚಿಕೆ ಮಾಡುವಾಗ ಯಾವುದೇ ಗೊಂದಲ ಇರಬಾರದು ಎಂಬ ದೃಷ್ಟಿಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವ ಕುರಿತು ಸ್ಪಷ್ಟನೆ ನೀಡಿರು ಜನಸೇನಾ ಸ್ಥಾಪಕ ಪವನ್ ಕಲ್ಯಾಣ್, ಕಳೆದ ಬಾರಿ 10 ಸ್ಥಾನಗಳಲ್ಲಿ ಗೆದ್ದಿದ್ದರೆ ಹೆಚ್ಚು ಸ್ಥಾನಗಳಿಗೆ ಬೇಡಿಕೆ ಇಡಬಹುದಿತ್ತು. ಈಗ ಸ್ಥಾನಗಳ ಹಂಚಿಕೆಯಲ್ಲಿ ಗೊಂದಲ ಮಾಡಿಕೊಳ್ಳುವ ಬದಲಿಗೆ ಗೆಲ್ಲುವ ಅಭ್ಯರ್ಥಿಗಳಿಗೆ ಮಣೆ ಹಾಕುವ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?