ದೇಶ-ವಿದೇಶ
ಗ್ಯಾನವಾಪಿಯಲ್ಲಿ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿದ್ದೇಕೆ ಹೈಕೋರ್ಟ್..?

ಅಲಹಾಬಾದ್ ಹೈಕೋರ್ಟ್ 1993ರಲ್ಲಿ ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸರ್ಕಾರ ಹೊರಡಿಸಿದ್ದ ಆದೇಶ ಅಸಿಂಧು ಎಂದು ಹೇಳಿದೆ. 1992ರಲ್ಲಿ ಬಾಬ್ರಿ ಮಸೀದಿ ಧ್ವಂಸದ ಬಳಿಕ ಆಗಿನ ಉತ್ತರ ಪ್ರದೇಶ ಸಿಎಂ ಕಲ್ಯಾಣ್ ಸಿಂಗ್ ರಾಜೀನಾಮೆ ನೀಡಿದ್ದರಿಂದ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಇದಾದ ಮರುವರ್ಷ ಎಂದರೆ 1993ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಮುಲಾಯಂ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಮುಲಾಯಂ ಸಿಂಗ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಾನೂನು-ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ವಾರಾಣಸಿಯ ಗ್ಯಾನವಾಪಿ ಮಸೀದಿಯಲ್ಲಿ ಹಿಂದೂಗಳು ಪ್ರಾರ್ಥನೆ ಮಾಡದಂತೆ ಆದೇಶ ಹೊರಡಿಸಿತ್ತು.
ಕಳೆದ ತಿಂಗಳು ವಾರಾಣಸಿ ಜಿಲ್ಲಾ ನ್ಯಾಯಾಲಯ ಗ್ಯಾನವಾಪಿಯಲ್ಲಿ ಹಿಂದೂಗಳು ಪ್ರಾರ್ಥನೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು. ಶೈಲೇಂದ್ರ ಪಾಠಕ್ ವ್ಯಾಸ್ ಎಂಬುವವರು ಬ್ರಿಟೀಷರ ಕಾಲದಿಂದಲೂ ತಮ್ಮ ಕುಟುಂಬ ಗ್ಯಾನವಾಪಿಯಲ್ಲಿ ಪೂಜೆ ಸಲ್ಲಿಸುತ್ತಿತ್ತು. ಹೀಗಾಗಿ ತಮಗೆ ಪೂಜೆ ಸಲ್ಲಿಸಲು ಅವಕಾಶ ಕೊಡಬೇಕೆಂದು ವ್ಯಾಸ್ ಕೋರ್ಟ್ ಮೆಟ್ಟಿಲೇರಿದ್ದರು. ‘‘1993ರವರೆಗೆ ವ್ಯಾಸ್ ಕುಟುಂಬಸ್ಥರು ಗ್ಯಾನವಾಪಿಯಲ್ಲಿ ಪೂಜೆ ಸಲ್ಲಿಸುತ್ತಿದ್ದರು. ಆದರೆ ರಾಜ್ಯ ಸರ್ಕಾರ ಯಾವುದೇ ಲಿಖಿತ ಆದೇಶ ಹೊರಡಿಸದೆ ಏಕಾಏಕಿ ಮೌಖಿಕ ಆದೇಶದ ಮೂಲಕ ಪೂಜೆ ನಿಷೇಧಿಸಿ ಆದೇಶ ಹೊರಡಿಸಿದ್ದು ಅಸಿಂಧು’’ ಎಂದು ಹೈಕೋರ್ಟ್ ಹೇಳಿದೆ.
‘‘ಸಂವಿಧಾನದ ಅನುಚ್ಛೇದ 25ರಡಿ ಭಾರತೀಯರಿಗೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ನೀಡಲಾಗಿದೆ. ಸರ್ಕಾರ ಮೌಖಿಕ ಆದೇಶ ಹೊರಡಿಸುವ ಮೂಲಕ ವ್ಯಾಸ್ ಕುಟುಂಬಸ್ಥರು ಗ್ಯಾನವಾಪಿಯಲ್ಲಿ ಪೂಜೆ ಸಲ್ಲಿಸದಂತೆ ಆದೇಶ ಹೊರಡಿಸಲಾಗಿದೆ. ಅನುಚ್ಛೇದ 25ರಡಿ ನೀಡಲಾಗಿರುವ ಧಾರ್ಮಿಕ ಸ್ವಾತಂತ್ರ್ಯದಲ್ಲಿ ಸರ್ಕಾರಕ್ಕೆ ಮಧ್ಯಪ್ರವೇಶಿಸುವ ಹಕ್ಕು ಇಲ್ಲ’’ ಎಂದು ಸಹ ಹೈಕೋರ್ಟ್ ಹೇಳಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?