ಬೆಂಗಳೂರು
ವಿಕೃತಕಾಮಿ ಉಮೇಶ್ ರೆಡ್ಡಿ 30 ದಿನಗಳ ಪೆರೋಲ್ ಅರ್ಜಿ ತಿರಸ್ಕೃತ

ಬೆಂಗಳೂರು: 30 ದಿನಗಳ ಪೆರೋಲ್ ಕೇಳಿದ್ದ ವಿಕೃತಕಾಮಿ ಉಮೇಶ್ ರೆಡ್ಡಿ ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಸರಣಿ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯಾಗಿರುವ ಉಮೇಶ್ ರೆಡ್ಡಿ, ವಯಸ್ಸಾದ ತಾಯಿಯೊಂದಿಗೆ ಇರುವುದಕ್ಕಾಗಿ ಹಾಗೂ ದುಸ್ಥಿತಿಯಲ್ಲಿದ್ದ ಮನೆ ದುರಸ್ತಿ ಮಾಡಬೇಕೆಂಬ ಕಾರಣಕ್ಕೆ ಪೆರೋಲ್ ಗೆ ಮನವಿ ಮಾಡಿದ್ದ.
ಆದರೆ, ವಿಚಾರಣೆ ನಡೆಸಿರುವ ಹೈಕೋರ್ಟ್ ಪೆರೋಲ್ ನೀಡಲು ನಿರಾಕರಿಸಿದೆ. ‘ಪೆರೋಲ್ ನೀಡಿದರೆ ಉಮೇಶ್ ರೆಡ್ಡಿ ಪ್ರಾಣಕ್ಕೆ ಅಪಾಯ ಇದೆ ಎಂಬ ವರದಿ ಹಾಗೂ ಸಹೋದರರು ತಾಯಿಯನ್ನು ನೋಡಿಕೊಳ್ಳುತ್ತಿದ್ದಾರೆ. ಅಲ್ಲದೇ, ಸುಪ್ರೀಂ ಕೋರ್ಟ್ 30 ವರ್ಷ ಸೆರೆವಾಸದ ನಂತರ ಕ್ಷಮಾಧಾನ ಕೋರಬಹುದೆಂದು ಹೇಳಿದೆ. ಈ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನರಿದ್ದ ಹೈಕೋರ್ಟ್ ಪೀಠ ಪೆರೋಲ್ ಅರ್ಜಿ ತಿರಸ್ಕರಿಸಿದೆ.
ಚಿತ್ರದುರ್ಗ ಮೂಲದ ವಿಕೃತಕಾಮಿ ಉಮೇಶ್ ರೆಡ್ಡಿಗೆ 1998ರಲ್ಲಿ ಬೆಂಗಳೂರಿನಲ್ಲಿ ಓರ್ವ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ 2007 ರಲ್ಲಿ ಬೆಂಗಳೂರಿನ ಸೆಷನ್ಸ್ ಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಬಳಿಕ ಸುಪ್ರೀಂಕೋರ್ಟ್ ಶಿಕ್ಷೆಯನ್ನ ಜೀವಾವಧಿಗೆ ಇಳಿಸಿತ್ತು. ಹಲವು ಅತ್ಯಾಚಾರ ಕೊಲೆ ಪ್ರಕರಣಗಳಲ್ಲಿ ಕೂಡ ಈತ ಆರೋಪಿಯಾಗಿದ್ದ. 6 ಬಾರಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ. ಆರಂಭದಲ್ಲಿ ಪೊಲೀಸ್ ಆಗಿದ್ದ ಈತ, ಸೇವೆಯಿಂದ ವಜಾಗೊಂಡಿದ್ದ. ಉಮೇಶ್ ರೆಡ್ಡಿಗೆ ಜೈಲೇ ಗತಿ ಎನ್ನುವಂತಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?