ಮೈಸೂರು/ಶಿವಮೊಗ್ಗ : 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕರ್ನಾಟಕ ಈ ಬಾರಿ ಅತ್ಯಂತ ಭೀಕರ ಪ್ರವಾಹವನ್ನ ಕಂಡಿದೆ. ಸಾವಿರಾರು ಜನ, ಮನೆ, ಆಸ್ತಿ ಪಾಸ್ತಿ, ದಾಖಲೆ, ಗುರುತನ್ನೇ ಕಳೆದುಕೊಂಡಿದ್ದಾರೆ. ಇಂಥಹ ಪರಿಸ್ಥಿತಿಯಲ್ಲಿ ಕೇವಲ 10 ಸಾವಿರ ನೀಡ್ತಿರೋ ಸರ್ಕಾರದ ಧೋರಣೆಯನ್ನ ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧಿಸಿದ್ದಾರೆ. ಈ ಕೂಡಲೇ ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ನೀಡಬೇಕು ಎಂದು ರಾಜ್ಯ ಸರ್ಕಾರವನ್ನ ಒತ್ತಾಯಿಸಿದ್ರು.
ಇದೇ ವೇಳೆ ಮಾತ್ನಾಡಿದ ಸಿದ್ದು, ಈವರೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಇಬ್ಬರು ಸಚಿವರು ಬಂದು ಪರಿಸ್ಥಿತಿ ಅವಲೋಕಿಸಿದ್ರೂ ಪ್ರಯೋಜನ ಇಲ್ಲ ಅಂತ ಕೇಂದ್ರ ಸರ್ಕಾರದ ವಿರುದ್ಧ ಸಿದ್ದು ವಾಗ್ದಾಳಿ ನಡೆಸಿದ್ರು. ಕೂಡಲೇ ಸಂತ್ರಸ್ತರ ನೆರವಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರ ಧಾವಿಸಬೇಕು ಎಂದು ಸಿದ್ದು ಒತ್ತಾಯಿಸಿದ್ರು.
ಇದೇ ವಿಚಾರವಾಗಿ ಶಿವಮೊಗ್ಗದಲ್ಲಿ ಮಾತ್ನಾಡಿದ ಗ್ರಾಮೀಣಾಭಿವೃದ್ಧಿ ಸಚವಿ ಕೆ.ಎಸ್. ಈಶ್ವರಪ್ಪ, ನೆರೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ. ಹಿಂದೆ ಯಾವುದೇ ಸರ್ಕಾರ ನೀಡದ ರೀತಿಯಲ್ಲಿ ನಮ್ಮ ಸರ್ಕಾರ ಪರಿಹಾರ ಕಾರ್ಯ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನಿರೀಕ್ಷೆಗೂ ಮೀರಿ ಪರಿಹಾರ ಬಿಡುಗಡೆ ಮಾಡಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ಒಟ್ಟಿನಲ್ಲಿ ನೆರೆ ವಿಚಾರದಲ್ಲೂ ರಾಜಕೀಯ ಜೋರಾಗಿದ್ದು, ರಾಜಕೀಯ ಬೇಡ ಬೇಡ ಎನ್ನುತ್ತಲೇ ಕಿತ್ತಾಟ ನಡೀತಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?