ಆರೋಗ್ಯ
ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : ಕೈ ವಿರುದ್ಧ ವಿಜಯೇಂದ್ರ ಟ್ವೀಟಾಸ್ತ್ರ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ.
ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು ಸರಣೀ ರೂಪದಲ್ಲಿ ವರದಿಯಾಗುತ್ತಲೇ ಇವೆ, ದೇಶ ಕಂಟಕ ಶಕ್ತಿಗಳು ವಿಧಾನ ಸೌಧದೊಳಗೇ ಬಂದು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗುವಷ್ಟರ ಮಟ್ಟಿಗೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಇದೀಗ ಜನನಿಬಿಡ ಹೋಟೆಲ್ ಪ್ರವೇಶಿಸಿ ಬಾಂಬ್ ಸ್ಫೋಟಿಸಿ ಅಮಾಯಕರನ್ನು ಗಾಯಗೊಳಿಸಿ ತೀವ್ರ ಆತಂಕದ ವಾತಾವರಣ ಸೃಷ್ಠಿಸಿದೆ.

ಸುಭದ್ರ ಕರ್ನಾಟಕಕ್ಕೆ ಗಂಡಾಂತರದ ಆತಂಕ ತರುವ ಚಟುವಟಿಕೆಗಳನ್ನು ಬಗ್ಗುಬಡಿಯುವಲ್ಲಿ ಮೀನಾಮೇಷ ಎಣಿಸುತ್ತಾ ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್ ಲೆಕ್ಕಾಚಾರದ ಹೆಜ್ಜೆಗಳ ದಾರಿ ಬದಲಿಸಿಕೊಳ್ಳದೇ ಹೋದರೆ ಅಧಿಕಾರದಿಂದ ಕೆಳಗಿಳಿಸಿ ವಿಧಾನ ಸೌಧದಿಂದ ಹೊರ ಕಳಿಸುವ ದಾರಿ ತೋರಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?