ರಾಜ್ಯ
ಪರೀಕ್ಷೆಯ ಖಿನ್ನತೆ.. ಯುವಕ ಆತ್ಮಹತ್ಯೆ

ದೊಡ್ಡಬಳ್ಳಾಪುರ : ಸ್ಪರ್ಧಾತ್ಮಕ ಪರೀಕ್ಷೆಗೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮಜರಾಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಜಗದೀಶ್(28) ಹಲವು ವರ್ಷಗಳಿಂದ ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ.
ವಿದ್ಯಾಭ್ಯಾಸ ಮುಗಿದ ನಂತರ ತನ್ನ ಸ್ವಂತ ಊರಾದ ಮಜರಾಹೊಸಹಳ್ಳಿಗೆ ಬಂದು ನೆಲೆಸಿದ್ದ. ಸ್ವಂತ ಖರ್ಚಿನಲ್ಲೇ ತನ್ನ ವಿದ್ಯಾಭ್ಯಾಸ ಮುಂದುವರೆಸಲು ಆಗಾಗ ಕ್ಯಾಟರಿಂಗ್ ಕೆಲಸಕ್ಕೂ ಹೋಗುತ್ತಿದ್ದ. ಇದಾದ ಬಳಿಕ ಪರೀಕ್ಷೆ ಎದುರಿಸಲು ನನ್ನಿಂದ ಸಾಧ್ಯವಿಲ್ಲ ಎಂದು ತಮ್ಮ ಸ್ವಂತ ಜಮೀನಿನಲ್ಲಿ ವ್ಯವಸಾಯ ಮಾಡತೊಡಗಿದ್ದ. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಜಗದೀಶ್ ಮನೆಯಲ್ಲಿ ಎಲ್ಲಾರು ಹೊರಹೋದ ನಂತರ ತನ್ನ ತಾಯಿಯ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರಕ್ಕೆ ಹೋಗಿದ್ದ ತಾಯಿ ಮನೆಗೆ ಬಂದು ಬಾಗಿಲು ತೆಗೆದು ನೋಡುತ್ತಲ್ಲೇ ತನ್ನ ಮಗನ ಶವ ಎದುರಿಗೆ ಕಂಡಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಶವವನ್ನು ಹೊರ ತಗೆಯಲಾಗಿದೆ. ಸಾವಿಗೆ ಶರಣಾಗುವ ಮುನ್ನ ಜಗದೀಶ್ ಡೆತ್ನೋಟ್ನಲ್ಲಿ ಪರೀಕ್ಷೆ ಎದುರಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ ಈ ಕಾರಣದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರಿಗೆ ತಿಳಿದು ಬಂದಿದೆ. ಸದ್ಯ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತನ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?