ರಾಜಕೀಯ
ಖೂಬಾಗೆ ಟಿಕೆಟ್ ಘೋಷಣೆ: ಶಾಕ್ ಗೆ ಒಳಗಾದ್ರಾ ಪ್ರಭು ಚೌವ್ಹಾಣ್?

ರಾಜಕೀಯ : ಭಗವಂತ ಖೂಬಾಗೆ ಟಿಕೆಟ್ ಘೋಷಣೆ ಹಿನ್ನಲೆ ಶಾಕ್ ಗೆ ಒಳಗಾದ್ರಾ ಮಾಜಿ ಸಚಿವ ಪ್ರಭು ಚವ್ಹಾಣ್ ಎಂಬ ಪ್ರಶ್ನೆ ಎದುರಾಗಿದೆ.
ಎದೆಬಡಿತ ಹೆಚ್ಚಾಗಿ ಚೌವ್ಹಾಣ್ ಆರೋಗ್ಯದಲ್ಲಿ ಏರುಪೇರು ಕಾಣಿಸಿದೆ. ಮುಂಬೈ ಪ್ರವಾಸದಲ್ಲಿದ್ದ ಪ್ರಭುಚವ್ಹಾಣ್ ಗೆ ಆರೋಗ್ಯದಲ್ಲಿ ಏರುಪೇರಾಗಿ ಮುಂಬೈನ ಬಾಂದ್ರಾದಲ್ಲಿರುವ ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಡಾ.ಎಸ್ ಲೋಖಂಡವಾಲಾ ನೇತೃತ್ವದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ಆರೋಗ್ಯದಲ್ಲಿ ಸ್ಥಿರತೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಭಗವಂತ ಖೂಬಾಗೆ ಟಿಕೆಟ್ ನೀಡದಂತೆ ಭಾರೀ ಹೋರಾಟ ನಡೆಸಿದ್ಧ ಚವ್ಹಾಣ್, ತನ್ನನ್ನು ಸೋಲಿಸಲು ಯತ್ನಿಸಿದ್ದ ಖೂಬಾ ಎಂದು ಸಾರ್ವಜನಿಕವಾಗಿ ಗಳಗಳ ಅತ್ತಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾಲಿಗೆ ಸಾರ್ವಜನಿಕ ವೇದಿಕೆಯಲ್ಲೇ ಸಾಷ್ಟಾಂಗ ನಮಸ್ಕಾರ ಹಾಕಿದ್ದರು ಚವ್ಹಾಣ್.
ಯಾವ ಹೋರಾಟವು ಫಲ ನೀಡದ್ದರಿಂದ ಮಾನಸಿಕ ಆಘಾತಕ್ಕೆ ಒಳಗಾದರಾ ಪ್ರಭು ಚವ್ಹಾಣ್ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆಗುತ್ತಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?