Connect with us

ಸಿನಿಮಾ

ಅಶ್ವಿನಿ ಪುನೀತ್ ಕುರಿತ ಪೋಸ್ಟ್ ನೋಡಿ ಬೇಸರಗೊಂಡ ದರ್ಶನ್

ಸಿನಿಮಾ : ಅಶ್ವಿನಿ ಬಗ್ಗೆ ಅವಹೇಳನಕಾರಿಯಾಗಿ ಮಾಡಿದ ಪೋಸ್ಟ್ ವಿಚಾರ ದರ್ಶನ್ ಅವರ ಗಮನಕ್ಕೂ ಬಂದಿದೆಯಂತೆ. ಇದನ್ನು ನೋಡಿ ಅವರು ಸಾಕಷ್ಟು ಬೇಸರಗೊಂಡಿದ್ದಾರೆ. ಈ ಬಗ್ಗೆ ದರ್ಶನ್ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಪುನೀತ್ ಅವರು ಮಾತನಾಡಿದ್ದಾರೆ.

ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಕುರಿತು ಅವಹೇಳನಕಾರಿಯಾಗಿ ಮಾಡಲಾದ ಪೋಸ್ಟ್ ಒಂದು ಸಖತ್ ವೈರಲ್ ಆಗಿದೆ. ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ‘ಗಜಪಡೆ’ ಹೆಸರಿನ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಇದನ್ನು ಹಾಕಲಾಗಿರುವುದರಿಂದ ಇದು ಯಾರೋ ದರ್ಶನ್ ಅಭಿಮಾನಿ ಮಾಡಿದ್ದು ಎಂದು ಹೇಳಲಾಗಿತ್ತು. ಈ ವಿಚಾರದಲ್ಲಿ ದರ್ಶನ್ ಅಭಿಮಾನಿ ಸಂಘದ ಪ್ರಧಾನ ಕಾರ್ಯದರ್ಶಿ ಪುನೀತ್ ಅವರು ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಹಿಂದೆ ಯಾರೋ ಕಿಡಿಗೇಡಿಗಳ ಕೈವಾಡ ಇದೆ ಎಂದು ಅವರು ಆರೋಪಿಸಿದ್ದಾರೆ.

ಆರ್​ಸಿಬಿ ಅನ್​ಬಾಕ್ಸಿಂಗ್ ಈವೆಂಟ್​ನಲ್ಲಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರು ಭಾಗಿ ಆಗಿದ್ದರು. ಒಳ್ಳೆಯ ಕೆಲಸಕ್ಕೆ ಪತಿ ಇಲ್ಲದ ಅಶ್ವಿನಿ ಅವರನ್ನು ಕರೆಸಿದ್ದೇ ತಪ್ಪು ಎಂದು ಬರೆಯಲಾಗಿತ್ತು. ಜೊತೆಗೆ ಆರ್​ಸಿಬಿ ನಿರಂತರವಾಗಿ ಸೋಲುತ್ತಿರುವುದು ಇದೇ ಕಾರಣಕ್ಕೆ ಎಂದು ಹೇಳಲಾಗಿತ್ತು. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು.

ದರ್ಶನ್ ಅವರ ಗಮನಕ್ಕೂ ಈ ವಿಚಾರ ಬಂದಿದೆಯಂತೆ. ಇದನ್ನು ನೋಡಿ ಅವರು ಸಾಕಷ್ಟು ಬೇಸರಗೊಂಡಿದ್ದಾರೆ. ಈ ಬಗ್ಗೆ ಪುನೀತ್ ಅವರು ಮಾತನಾಡಿದ್ದಾರೆ. ‘ಅಶ್ವಿನಿ ಬಗ್ಗೆ ಹಾಕಲಾದ ಪೋಸ್ಟ್ ನೋಡಿ ದರ್ಶನ್ ಬೇಸರ ಮಾಡಿಕೊಂಡಿದ್ದಾರೆ. ಅವರು ನಮಗೆ ಹಲವು ವರ್ಷಗಳ ಹಿಂದೆಯೇ ಸೂಚನೆ ಒಂದನ್ನು ನೀಡಿದ್ದರು. ಯಾರು ಏನೇ ಮಾಡಿದರೂ ಸೋಶಿಯಲ್ ಮೀಡಿಯಾ ಮೂಲಕ ಉತ್ತರಿಸಬಾರದು, ಅವಹೇಳನಕಾರಿ ಪೋಸ್ಟ್ ಮಾಡಬಾರದು ಎಂದು ಹೇಳಿದ್ದಾರೆ’ ಎಂದಿದ್ದಾರೆ ಪುನೀತ್.

Advertisement

‘ಸಿನಿಮಾ ಪ್ರಚಾರಕ್ಕೆ ಮಾತ್ರ ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳಲು ದರ್ಶನ್ ಸೂಚನೆ ನೀಡಿದ್ದಾರೆ. ಹೀಗಾಗಿ ಇದು ಫೇಕ್ ಖಾತೆ. ಆತ ದರ್ಶನ್ ಅಭಿಮಾನಿ ಆಗಿರಲು ಸಾಧ್ಯವೇ ಇಲ್ಲ. ದರ್ಶನ್ ಅವರು ಅಭಿಮಾನಿಗಳಿಗೆ ಈ ರೀತಿ ಹೇಳಿರಲು ಸಾಧ್ಯವೇ ಇಲ್ಲ. ಅವರು ಮಹಿಳೆಯರಿಗೆ ಸಾಕಷ್ಟು ಗೌರವ ನೀಡುತ್ತಾರೆ’ ಎಂದಿದ್ದಾರೆ ಪುನೀತ್. ದರ್ಶನ್ ಅವರು ‘ಡೆವಿಲ್’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾಗ ಅವರ ಕೈಗೆ ಪೆಟ್ಟಾಗಿತ್ತು. ಅವರು ಈಗ ಆಪರೇಷನ್ ಮಾಡಿಸಿಕೊಂಡಿದ್ದಾರೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ