Featured
ಡಿಕೆಶಿ ಕೇಸಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ಸಂಕಷ್ಟ..! ಇಂದು ದೆಹಲಿಗೆ, ನಾಳೆ ಇಡಿ ವಿಚಾರಣೆ..!

- ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ಇಡಿ ಸಮನ್ಸ್
- ಇಂದು ದೆಹಲಿಗೆ, ನಾಳೆ ಇಡಿ ವಿಚಾರಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಜರು
- ಡಿಕೆಶಿ ಕೇಸ್ನಲ್ಲಿ ಸಂಕಷ್ಟ ಎದುರಿಸಬೇಕಾಗುತ್ತಾ ಹೆಬ್ಬಾಳ್ಕರ್..?
ನವದೆಹಲಿ : ಅಕ್ರಮ ಹಣ ಪ್ರಕರಣದಲ್ಲಿ ಇಡಿ ವಿಚಾರಣೆ ಎದುರಿಸಿ, ನ್ಯಾಯಾಂಗ ಬಂಧನದಲ್ಲಿರೋ ಡಿಕೆ ಶಿವಕುಮಾರ್ ಅವರಿಂದ ಈಗ ಶಾಸಕ ಲಕ್ಷ್ಮೀ ಹೆಬ್ಬಾಳ್ಕರ್ಗೂ ಸಂಕಷ್ಟ ಬಂದಿದೆ. ಡಿಕೆ ಶಿವಕುಮಾರ್ ಅವರ ಆಪ್ತೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಗೂ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಸೆಪ್ಟೆಂಬರ್ 19 ಅಂದ್ರೆ, ಗುರುವಾರ ವಿಚಾರಣೆಗೆ ಬರುವಂತೆ ನೊಟೀಸ್ ನೀಡಿದ್ದಾರೆ.
ಇಡಿ ಸಮನ್ಸ್ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ಹೋಗುವುದಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಇಂದು ದೆಹಲಿಗೆ ಹೋಗಿ, ನಾಳೆ ಅಂದ್ರೆ ಗುರುವಾರ ಇಡಿ ವಿಚಾರಣೆ ಎದುರಿಸಲಿದ್ದಾರೆ.
ಈಗಾಗಲೇ ಡಿಕೆಶಿ ಪುತ್ರಿ ಐಶ್ವರ್ಯ ಇಡಿ ವಿಚಾರಣೆ ಎದುರಿಸಿದ್ದಾರೆ. ಇದೇ ಪ್ರಕರಣದಲ್ಲಿ ಈಗ ಲಕ್ಷ್ಮೀ ಹೆಬ್ಬಾಳ್ಕರ್ ಸರದಿ. ಮತ್ತಷ್ಟು ಮಂದಿಯನ್ನ ಇಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸೋ ಸಾಧ್ಯತೆ ಇದೆ. ಡಿಕೆಶಿ ಪತ್ನಿ ಉಷಾ ಹಾಗೂ ಡಿಕೆ ಸಹೋದರ, ಸಂಸದ ಡಿಕೆ ಸುರೇಶ್ ಅವರನ್ನೂ ಕೂಡ ಇಡಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ವಿಚಾರಣೆಗೆ ಒಳಪಡಿಸೋ ಸಾಧ್ಯತೆ ತಳ್ಳಿಹಾಕುವಂತಿಲ್ಲ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?