ಮೈಸೂರು : ಫೋನ್ ಟ್ಯಾಪಿಂಗ್ ಸದ್ಯ ರಾಜ್ಯ ರಾಜಕೀಯದಲ್ಲೇ ಅಲ್ಲದೆ, ರಾಷ್ಟ್ರ ರಾಜಕೀಯದಲ್ಲೂ ತಲ್ಲಣ್ಣ ಉಂಟು ಮಾಡಿದೆ. ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಮೇಲೆ ಸಿಬಿಐ ದಾಳಿ ಹಾಗೂ ವಿಚಾರಣೆಯೂ ನಡೆದಿದೆ. ಈ ಮಧ್ಯೆ, ಮಠಾಧೀಶರು, ಸಿನಿಮಾ ತಾರೆಯರ ಫೋನ್ ಕೂಡ ಟ್ಯಾಪಿಂಗ್ ಆಗಿದೆ ಅನ್ನೋದು ತನಿಖೆಯಲ್ಲಿ ಗೊತ್ತಾಗಿದೆ. ಸ್ವತಃ ಕಂದಾಯ ಸಚಿವರೂ ಆಗಿರೋ ಆರ್. ಅಶೋಕ್, ಮಠಾಧೀಶರ ಫೋನ್ ಕದ್ದಾಲಿಕೆ ಆಗಿದೆ. ಇದು ಪಾಪದ ಕೆಲಸ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತ್ನಾಡಿದ ಆರ್.ಅಶೋಕ್, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಟೆಲಿಫೋನ್ ಕದ್ದಾಲಿಕೆ ಮಾಡಲಾಗಿದೆ. ಕೇವಲ ನಿರ್ಮಲಾನಂದ ಸ್ವಾಮೀಯ ಮಾತ್ರವಲ್ಲ, ಇತೆರೆ ಮಠಾಧೀಶರ ಟೆಲಿಫೋನ್ ಕೂಡ ಕದ್ದಾಲಿಕೆ ಮಾಡಲಾಗಿದೆ. ಈ ಬಗ್ಗೆ ನಮಗೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆರ್.ಅಶೋಕ್ ಹೇಳಿದ್ದಾರೆ.
ಮಠಾಧಿಪತಿಗಳ ಟೆಲಿಫೋನ್ ಕದ್ದಾಲಿಕೆ ಮಾಡಿರುವುದು ಮಹಾ ಪಾಪದ ಕೆಲಸ. ಈ ಹಿಂದೆ ಇದ್ದ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿ ಮಠಾಧೀಶರ ಟೆಲಿಫೋನ್ ಕದ್ದಾಲಿಕೆ ಮಾಡಲಾಗಿದೆ. ನಿರ್ಮಲಾನಂದನಾಥ ಶ್ರೀಗಳು ವಿದ್ಯಾವಂತರು. ಅಂತಹವರ ಟೆಲಿಫೋನ್ ಕದ್ದಾಲಿಸಿರುವುದು ಮಹಾಪಾಪ. ಇದಕ್ಕಾಗಿ ನಾನು ನಿರ್ಮಲಾನಂದನಾಥ ಶ್ರೀಗಳ ಬಳಿ ಕ್ಷಮೆ ಯಾಚಿಸುತ್ತೇನೆ ಎಂದ ಆರ್.ಅಶೋಕ್, ಸಿಬಿಐ ತನಿಖೆ ಮೂಲಕ ಎಲ್ಲವೂ ಬಯಲಾಗಲಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಶಿಕ್ಷೆ ಅನುಭವಿಸಲೇಬೇಕು. ಇನ್ನು ಮುಂದೆ ಈ ರೀತಿ ಆಗದಂತೆ ನಾವು ಎಚ್ಚರಿಕೆ ವಹಿಸುತ್ತೇವೆ ಎಂದು ಮೈಸೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ರು..
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?