ನವದೆಹಲಿ : ನೂರಾರು ವರ್ಷಗಳ ವಿವಾದ ಕೊನೆಗೂ ಬಗೆಹರಿದಿದ್ದು, ವಿವಾದಿತ ಅಯೋಧ್ಯೆ ಭೂಮಿ ಹಿಂದೂಗಳಿಗೆ ಸೇರಿದ್ದು ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಬೆಳಗ್ಗೆ 10.30ಕ್ಕೆ ಶುರುವಾದ ತೀರ್ಪು ಓದುವ ಪ್ರಕ್ರಿಯೆ, 30 ನಿಮಿಷಗಳಲ್ಲಿ ಮುಕ್ತಾಯವಾಯ್ತು. ಸುಪ್ರೀಂಕೋರ್ಟ್ ಮುಖ್ಯನಾಯಮೂರ್ತಿ ರಂಜನ್ ಗೊಗಾಯ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ, ಸರ್ವಾನುಮತದಿಂದ ತೀರ್ಪು ನೀಡ್ತು.
ಮೊದಲಿಗೆ ಶಿಯಾ ಅರ್ಜಿಯನ್ನ ವಜಾ ಮಾಡಿದ ನ್ಯಾಯಪೀಠ, ನಿರ್ಮೋಹಿ ಅಖಾರ ಸಲ್ಲಿಸಿದ್ದ ಅರ್ಜಿಯನ್ನೂ ವಜಾ ಮಾಡ್ತು. ಅಲ್ಲದೆ, ಈ ಹಿಂದೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪು ಒಪ್ಪಲು ಆಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳ್ತು. ಪುರಾತತ್ವ ಇಲಾಖೆ ಸಾಕ್ಷಿಗಳನ್ನು ಆಧರಿಸಿ, ಅದು ಹಿಂದೂಗಳಿಗೆ ಸೇರಿದ್ದ ಭೂಮಿ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಡ್ತು.
ಅದರಂತೆ 2.77 ಎಕರೆ ಭೂಮಿ ಹಿಂದೂಗಳಿಗೆ ಅಂದ್ರೆ ರಾಮಲಲ್ಲಾಗೆ ಸೇರಿದ್ದು ಎಂದು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡ್ತು. ಅಲ್ಲದೆ, ಸುನ್ನಿ ವಕ್ಫ್ ಬೋರ್ಡ್ಗೆ ಅಯೋಧ್ಯೆಯಲ್ಲೇ ಪ್ರತ್ಯೇಕ 5 ಎಕರೆ ಭೂಮಿ ನೀಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡ್ತು. 2.77 ಎಕರೆ ವಿವಾದಿತ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಹೊಣೆ ಕೇಂದ್ರ ಸರ್ಕಾರ ವಹಿಸಿಕೊಳ್ಳುವಂತೆ ಸುಪ್ರೀಂ ಆದೇಶ ನೀಡ್ತು. ಇದರ ಜೊತೆಗೆ 3 ತಿಂಗಳಲ್ಲಿ ಮಂದಿರ ನಿರ್ಮಾಣ ಸಮಿತಿ ರಚನೆ ಮಾಡಿ, ಮುಂದಿನ ಕಾರ್ಯಗಳು, ಯೋಚನೆಗಳ ಕುರಿತ ಸಮಗ್ರ ವರದಿ ತಯಾರಿಸುವಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡ್ತು.
ಈ ಮೂಲಕ ಕಳೆದ 495 ವರ್ಷಗಳ ಈ ವಿವಾದ ಕೊನೆಗೂ ಇತ್ಯರ್ಥವಾಗಿದೆ. ರಾಮ ಮಂದಿರ ಕಟ್ಟುವ ವನವಾಸ ಅಂತ್ಯವಾಗಿದೆ. ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲೇ ರಾಮ ಮಂದಿರ ನಿರ್ಮಾಣ ಆಗಲಿದ್ದು, ರಾಮನ ವನವಾಸವೂ ಅಯೋಧ್ಯೆಯಲ್ಲಿ ಅಂತ್ಯವಾಗಲಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?