ಬೆಂಗಳೂರು : ಸುಪ್ರೀಂಕೋರ್ಟ್ ತೀರ್ಪು ಬಂದ ಬೆನ್ನಲ್ಲೇ, ಇವತ್ತು 15 ಅನರ್ಹ ಶಾಸಕರು ಬಿಜೆಪಿ ಸೇರ್ಪಡೆಯಾದ್ರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇವತ್ತು ಬೆಳಗ್ಗೆ ಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಿರಿಯರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ರು.
ಈ ವೇಳೆ ಮಾತ್ನಾಡಿದ ಸಿಎಂ ಯಡಿಯೂರಪ್ಪ, ನಾನು ಮುಖ್ಯಮಂತ್ರಿಯಾಗಲು ಈ ೧೭ ಜನ ಕಾರಣ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಮಗಾಗಿ ಎಲ್ಲಾ ರೀತಿಯ ತ್ಯಾಗ ಮಾಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ನಂತರ ಪಕ್ಷ ಸೇರ್ಪಡೆಯಾಗಿದ್ದು, ನಮ್ಮ ಪಕ್ಷದ ಸದಸ್ಯತ್ವ ಪಡೆದಿದ್ದಾರೆ ಎಂದ್ರು. ಅಲ್ಲದೆ, ಶಾಸಕರಿಗೆ ಹಾಗೂ ಬೆಂಬಲಿಗರಿಗೆ ಭರವಸೆ ಕೊಡುತ್ತೇವೆ. ನಾವು ಕೊಟ್ಟ ಭರವಸೆ ಉಳಿಸಿಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ವಿಶ್ವಾಸ ದ್ರೋಹ ಮಾಡಲ್ಲ ಎಂದು ಯಡಿಯೂರಪ್ಪ ಹೇಳಿದ್ರು.
ದೇಶದ ಯಾವುದೇ ರಾಜ್ಯದಲ್ಲಿ ಈ ರೀತಿ ರಾಜೀನಾಮೆ ನೀಡಿಲ್ಲ. ಯಾವುದೇ ಕಾರಣಕ್ಕೂ ಒಡಕಿನ ಮಾತಾಡಬೇಡಿ. ದೇವರು ಮೆಚ್ಚುವ ಹಾಗೆ ಕೆಲಸ ಮಾಡಬೇಕು. ಇವರೆಲ್ಲರ ಗೆಲುವು ನಮ್ಮಹೊಣೆ ಎಂದ ಯಡಿಯೂರಪ್ಪ, ಬಿಜೆಪಿ ಕಾರ್ಯಕರ್ತರು ಇದರ ಹೊಣೆ ತೆಗೆದುಕೊಳ್ಳಬೇಕು ಎಂದು ಕರೆ ನೀಡಿದ್ರು. ೧೫ಕ್ಕೆ ೧೫ ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ಅರಮನೆ ಮೈದಾನದಲ್ಲಿ ಗೆದ್ದವರಿಗೆ ಸನ್ಮಾನ ಮಾಡಬೇಕು. ಇಂತಹ ಐತಿಹಾಸಿಕ ಗೆಲುವಿಗೆ ನಾವು ಸಾಕ್ಷಿಯಾಗೋಣ ಎಂದು ಉತ್ಸಾಹ ತುಂಬಿದ್ರು.
ನಾವೆಲ್ಲ ನಿಮ್ಮಜೊತೆ ಇದ್ದೇವೆ. ಕೇಂದ್ರದ ನಾಯಕತ್ವ ಕೂಡ ನಿಮ್ಮ ಜೊತೆ ಇದೆ. ಯಾವುದೇ ಕಾರಣಕ್ಕೂ ಆತಂಕ ಬೇಡ. ಒಡಕಿನ ಮಾತುಗಳಿಗೆ ಕಿವಿಕೊಡುವ ಅವಶ್ಯಕತೆ ಇಲ್ಲ. ನಮ್ಮ ಅಭ್ಯರ್ಥಿಗಳನ್ನು ನಾವು ಗೆಲ್ಲಿಸುತ್ತೇವೆ ಎಂದು ಅನರ್ಹ ಶಾಸಕರಿಗೆ ಯಡಿಯೂರಪ್ಪ ಧೈರ್ಯ ತಂಬಿದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?